ಕಾಡ್ಗಿಚ್ಚಿಗೆ ಸುಟ್ಟು ಕರುಕಲಾದ ಚಿಕ್ಕಮಗಳೂರಿನ ನೇತ್ಕಲ್ ಅರಣ್ಯ ಪ್ರದೇಶ
ಚಿಕ್ಕಮಗಳೂರು, ಫೆಬ್ರವರಿ 25:ಒಂದು ಕಡೆ ಬಂಡೀಪುರದಲ್ಲಿ ಸಾವಿರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದರೆ, ಇತ್ತ ಕಡೆ ಎನ್.ಆರ್ ಪುರ ತಾಲೂಕಿನ ಗುಬ್ಬಿಗಾ ಗ್ರಾ.ಪಂ.ವ್ಯಾಪ್ತಿಯ ನೇತ್ಕಲ್ ಅರಣ್ಯ ಪ್ರದೇಶದಲ್ಲಿ ಸಹ ಕಾಡ್ಗಿಚ್ಚು ಮುಂದುವರೆದಿದ್ದು, ಬೆಲೆ ಬಾಳುವ ಮರಗಳು ಅರಣ್ಯದಲ್ಲಿ ಸಂಪೂರ್ಣ ಸುಟ್ಟು ಕರುಕಲಾಗಿವೆ.
ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ
ನೋಡ ನೋಡುತ್ತಿದ್ದಂತೆ ಬೆಂಕಿ ನಂದಿಸಲು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೈಕ್ ಕೂಡ ಭಸ್ಮವಾಗಿದೆ. ಕೂದಲೆಳೆ ಅಂತರದಲ್ಲಿ ಸಿಬ್ಬಂದಿ ಮಂಜಯ್ಯ ಪಾರಾಗಿದ್ದು, ಮಂಜಯ್ಯಗೆ ಸುಟ್ಟ ಗಾಯಗಳಾಗಿವೆ.

ರಾತ್ರಿಯಿಡೀ ದಟ್ಟ ಹೊಗೆಯೊಂದಿಗೆ ಅರಣ್ಯ ಧಗ ಧಗನೆ ಹೊತ್ತಿ ಉರಿದಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸಪಡುತ್ತಿದ್ದಾರೆ. ಸದ್ಯ ನೂರಾರು ಏಕರೆ ಅರಣ್ಯ ಸುಟ್ಟುಹೋಗಿರುವ ಮಾಹಿತಿ ತಿಳಿದು ಬಂದಿದ್ದು, ಇಂದು ಬೆಳಗ್ಗೆ ಬೆಂಕಿ ಹತೋಟಿಗೆ ಬಂದಿದೆ ಎನ್ನಲಾಗಿದೆ.












Click it and Unblock the Notifications