ಕೊಪ್ಪದ ಸಹಕಾರ ಸಾರಿಗೆ ಕೆಎಸ್ಆರ್ಟಿಸಿ ಜೊತೆ ವಿಲೀನವಾಗುತ್ತಾ?
ಚಿಕ್ಕಮಗಳೂರು, ಫೆಬ್ರವರಿ 24: ತೀವ್ರ ಆರ್ಥಿಕ ಸಂಕಷ್ಟದಿಂದ ಸಂಚಾರ ಸ್ಥಗಿತಗೊಳಿಸಿರುವ ಮಲೆನಾಡಿನ ಸಹಕಾರ ಸಾರಿಗೆಯನ್ನು ಕೆಎಸ್ಆರ್ಟಿಸಿ ಜತೆಗೆ ವಿಲೀನಗೊಳಿಸಬಹುದು ಎಂಬ ಅಭಿಪ್ರಾಯ ಸಾರಿಗೆ ಅಧಿಕಾರಿಗಳು ಮತ್ತು ತಜ್ಞರ ವಲಯದಿಂದ ಕೇಳಿಬರುತ್ತಿದೆ. ರಾಜ್ಯ ಸರಕಾರ ಮನಸ್ಸು ಮಾಡಿದರೆ ಈ ಸಾಧ್ಯತೆ ಕಾರ್ಯರೂಪಕ್ಕೆ ಬರಬಹುದು.
ಸಹಕಾರ ಸಾರಿಗೆ ಬಸ್ಗಳ ಮಾರ್ಗಗಳಲ್ಲಿ ಸರಕಾರಿ ಬಸ್ಗಳು ಸಂಚರಿಸುತ್ತಿಲ್ಲ. ಅದನ್ನು ಕೆಎಸ್ಸಾರ್ಟಿಸಿ ಸುಪರ್ದಿಗೆ ವಹಿಸುವುದರಿಂದ ಸಾರಿಗೆ ಸೇವೆ ಉತ್ತಮಗೊಳ್ಳುವುದರ ಜತೆಗೆ ನಿಗಮಕ್ಕೂ ಲಾಭದಾಯಕವಾಗಲಿದೆ. ಈ ಹಿನ್ನೆಲೆಯಲ್ಲಿ ಸರಕಾರ ಚಿಂತನೆ ನಡೆಸುವ ಆವಶ್ಯಕತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಸುತ್ತಲಿನ ಮಾರ್ಗಗಳಲ್ಲಿ ಸಹಕಾರ ಸಾರಿಗೆ ನೂರಾರು ಟ್ರಿಪ್ಗಳನ್ನು ನಡೆಸುತ್ತದೆ. ನಿತ್ಯ 6-7 ಲಕ್ಷ ರೂ. ಆದಾಯ ಬರುತ್ತದೆ. ವಿಲೀನ ಅಥವಾ ಸ್ವಾಧೀನದಿಂದ ಅದೆಲ್ಲವೂ ಕೆಎಸ್ಸಾರ್ಟಿಸಿಗೆ ವರ್ಗಾವಣೆ ಆಗುತ್ತದೆ. ಕೊಪ್ಪದಲ್ಲಿ ನಿಗಮಕ್ಕೆ 5 ಎಕರೆ ಜಾಗವಿದ್ದು, ಅದನ್ನೇ ಘಟಕವಾಗಿಸಬಹುದು ಎಂದು ನಿಗಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರ್ಥಿಕ ಮುಗ್ಗಟ್ಟಿನಿಂದ ಸಹಕಾರ ಸಾರಿಗೆಯ ಬಸ್ಗಳೆಲ್ಲವೂ ಆರು ತಿಂಗಳಿನಿಂದ ಮೂಲೆ ಗುಂಪಾಗಿವೆ. ಅವುಗಳನ್ನು ದುರಸ್ತಿಪಡಿಸಿ, ಕೆಎಸ್ಸಾರ್ಟಿಸಿಯಿಂದ ಮರು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬಹುದು.ಇಲ್ಲವೇ ಹರಾಜು ಹಾಕಿ, ಅದೇ ಹಣದಲ್ಲಿ ಸಾಲ ಮತ್ತಿತರ ಹೊರೆಯನ್ನು ನೀಗಿಸಬಹುದು. ಅನಂತರ ಆ ಮಾರ್ಗಗಳಲ್ಲಿ ಸರಕಾರಿ ಬಸ್ಗಳನ್ನು ರಸ್ತೆಗಿಳಿಸಬಹುದಾಗಿದೆ.
ಸಂಸ್ಥೆಯ ಸಿಬ್ಬಂದಿಗೆ ಮುಂದಿನ ದಿನಗಳಲ್ಲಿ ನೇಮಕಾತಿ ವೇಳೆ ಆದ್ಯತೆ ನೀಡಬೇಕು ಎಂಬ ಮಾತು ಕೇಳಿಬರುತ್ತಿದೆ. ವಿಲೀನಕ್ಕೆ ನಮ್ಮ ಅಭ್ಯಂತರವಿಲ್ಲ. ಇದು ಸಹಕಾರ ತತ್ವದಡಿ ನಡೆದ ಸಂಸ್ಥೆ ಯಾಗಿದ್ದು, ಸರಕಾರ ಸುಪರ್ದಿಗೆ ಪಡೆದರೆ ಸೇವಾ ಮನೋ ಭಾವದಿಂದ ಕಾರ್ಯ ನಿರ್ವಹಿಸುತ್ತದೆ ಎಂದು ಸಹಕಾರ ಸಾರಿಗೆ ನಿರ್ದೇಶಕ ಸಿ. ವಿಜಯಕುಮಾರ್ ಹೇಳಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications