ಚಿಕ್ಕಮಗಳೂರು; ಗೃಹಿಣಿ ಸಾವು, ವಿಷದ ಇಂಜೆಕ್ಷನ್ ನೀಡಿ ಕೊಲೆ ಆರೋಪ
ಚಿಕ್ಕಮಗಳೂರು, ಡಿಸೆಂಬರ್ 12; ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಪತಿ ವಿಷದ ಇಂಜೆಕ್ಷನ್ ನೀಡಿ ಹತ್ಯೆ ಮಾಡಿದ್ದಾರೆ ಎಂದು ಗೃಹಿಣಿ ಕುಟುಂಬದವರು ಆರೋಪ ಮಾಡುತ್ತಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾವನ್ನಪ್ಪಿರುವ ಮಹಿಳೆಯನ್ನು 31 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಮನೆಯಲ್ಲಿ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಪತಿ ದರ್ಶನ್ ಜೊತೆ ಶ್ವೇತಾ ವಾಸವಾಗಿದ್ದರು.

ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ದರ್ಶನ್ ನಾಲ್ಕು ದಿನಗಳ ಹಿಂದೆ ಪತ್ನಿ ಜೊತೆ ಆಗಮಿಸಿದ್ದರು. ಮನೆಯಲ್ಲಿಯೇ ಶ್ವೇತಾ ಸಾವನ್ನಪ್ಪಿದ್ದು, ತರಾತುರಿಯಲ್ಲಿ ಅಂತ್ಯಕ್ರಿಯೆಗೆ ದರ್ಶನ್ ಕುಟುಂಬದವರು ಸಿದ್ದತೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.
ಹಾರ್ಟ್ ಅಟ್ಯಾಕ್ ಎಂದು ಹೇಳಿಕೆ; ಹೃದಯಾಘಾತದಿಂದ ಶ್ವೇತಾ ಸಾವನ್ನಪ್ಪಿದ್ದಾಳೆ ಎಂದು ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿತ್ತು. ಅಂತ್ಯಕ್ರಿಯೆಗೆ ಸಿದ್ಧವಾಗಿದ್ದಾಗ ಶ್ವೇತಾ ಕುಟುಂಬದವರು ತಡೆದು ಶವವನ್ನು ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದರು.
ಶ್ವೇತಾಗೆ ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಆರೋಪವನ್ನು ಮಾಡಲಾಗಿದೆ. ಶ್ವೇತಾ ಕೈಯಲ್ಲಿ ಇಂಜೆಕ್ಷನ್ ನೀಡಿರುವ ಗುರುತು ಸಹ ಪತ್ತೆಯಾಗಿದೆ. ದರ್ಶನ್ ಮತ್ತು ಶ್ವೇತಾ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು.
ಶ್ವೇತಾ ದರ್ಶನ್ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದರು. ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ ಮಾಡಿರುವ ಆರೋಪವನ್ನು ಮಾಡಲಾಗಿದೆ. ಗೋಣಿಬೀಡು ಠಾಣೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.
ಶ್ವೇತಾ ಸಾವಿಗೂ ಮುನ್ನ ಮಾತನಾಡಿದ ಆಡಿಯೋ ವೈರಲ್ ಆಗಿದೆ. ಪತಿ ಸಹೋದ್ಯೋಗಿಯನ್ನು ಲವ್ ಮಾಡುತ್ತಿದ್ದರು. ಶ್ವೇತಾ ಪತಿಯ ಸಹೋದ್ಯೋಗಿ ಜೊತೆ ಮಾತನಾಡಿರುವ ಆಡಿಯೋ ಪೊಲೀಸರಿಗೆ ಸಿಕ್ಕಿದೆ.
ದರ್ಶನ್ ಪೊಲೀಸ್ ವಶಕ್ಕೆ; ಶ್ವೇತಾ ಸಾವಿನ ಪ್ರಕರಣದಲ್ಲಿ ಪತಿ ದರ್ಶನ್ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ವೇತಾ ಪತಿ ಮೇಲೆ ಕೊಲೆ ಆರೋಪ ಕೇಳಿ ಬಂದಿದೆ. ಆದ್ದರಿಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ಸಾವಿನ ತನಿಖೆ ಕೈಗೊಂಡಿರುವ ಗೋಣಿಬೀಡು ಪೊಲೀಸರು ದರ್ಶನ್ರನ್ನು ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications