ಸೀರೆ ಸೆರಗಿನಿಂದ ಅವಾಂತರ: ಬೈಕ್ ಚಕ್ರದೊಳಗೆ ಸಿಲುಕಿದ ಮಹಿಳೆ ಕಾಲು
ಬೈಕ್ನ ಹಿಂಬದಿಯಲ್ಲಿ ಕೂತಿದ್ದ ಮಹಿಳೆಯ ಸೀರೆ ಸೆರಗು ಹಾಗೂ ನೆರಿಗೆ ಬೈಕ್ನ ಚಕ್ರಕ್ಕೆ ಸಿಕ್ಕಿ, ಕಾಲು ಕೂಡ ಬೈಕ್ನ ಚಕ್ರದೊಳಗೆ ಸಿಲುಕಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನರಳಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ಚಿಕ್ಕಮಗಳೂರು, ಫೆಬ್ರವರಿ 8: ಬೈಕ್ನಲ್ಲಿ ತೆರಳುವ ವೇಳೆ ಬೈಕ್ ಸವಾರನಷ್ಟೇ ಹಿಂಬದಿ ಸವಾರರು ಕೂಡ ಅಪಘಾತವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿರಬೇಕು. ಬೈಕ್ ಸವಾರಿ ವೇಳೆ ಹಿಂಬದಿ ಸವಾರರು ಕೂಡ ಹೆಲ್ಮೇಟ್ ಧರಿಸುವುದಷ್ಟೇ ಅಲ್ಲದೇ ಇತರ ವಿಚಾರದಲ್ಲಿ ಕೂಡ ಎಚ್ಚರಿಕೆಯಿಂದ ಇರಬೇಕು.
ಮುಖ್ಯವಾಗಿ ಮಹಿಳೆಯರು ಬೈಕ್ನಲ್ಲಿ ತೆರಳುವ ವೇಳೆ ಎಚ್ಚರ ವಹಿಸಬೇಕು. ಚೂಡಿದಾರ್ ಹಾಗೂ ಸೀರೆ ಧರಿಸಿ ಬೈಕ್ನಲ್ಲಿ ತೆರಳುವ ವೇಳೆ ಬಟ್ಟೆ ಬೈಕ್ ಚಕ್ರಕ್ಕೆ ಸಿಗದಂತೆ ಮೊದಲೇ ಎಚ್ಚರಿಕೆಯಿಂದ ಇರಬೇಕು. ಏಕೆಂದರೆ ಸೀರೆ ಧರಿಸಿ ಬೈಕ್ನಲ್ಲಿ ತೆರಳುತ್ತಿದ್ದ ಮಹಿಳೆಯ ಕಾಲು ಚಕ್ರದೊಳಗೆ ಸಿಲುಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ಬೈಕ್ನ ಹಿಂಬದಿಯಲ್ಲಿ ಕೂತಿದ್ದ ಮಹಿಳೆಯ ಸೀರೆ ಸೆರಗು ಹಾಗೂ ನೆರಿಗೆ ಬೈಕ್ನ ಚಕ್ರಕ್ಕೆ ಸಿಕ್ಕಿ, ಕಾಲು ಕೂಡ ಬೈಕ್ನ ಚಕ್ರದೊಳಗೆ ಸಿಲುಕಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನರಳಾಡಿದ ಘಟನೆ ನಡೆದಿದೆ.

ತರೀಕೆರೆ ಪಟ್ಟಣ ಸಮೀಪದ ಇಟ್ಟಿಗೆ ಗ್ರಾಮದ ಯಶೋದಾ ಬಾಯಿ ಎನ್ನುವ ಮಹಿಳೆ ಬೈಕ್ನಲ್ಲಿ ತರೀಕೆರೆ ಪಟ್ಟಣಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಮೊದಲು ಬೈಕ್ನ ಹಿಂದೆ ಕೂತಿದ್ದ ಯಶೋದಾ ಬಾಯಿ ಅವರ ಸೀರೆಯ ಸೆರಗು ಹಾಗೂ ನೆರಿಗೆ ಬೈಕ್ನ ಚಕ್ರಕ್ಕೆ ಸಿಲುಕಿದೆ. ಹೀಗೆ ಕೆಲವು ದೂರ ಕ್ರಮಿಸಿದ ಬಳಿಕ ಮಹಿಳೆಯ ಕಾಲು ಗೇರ್ ಬಾಕ್ಸ್ ಮೂಲಕ ಚಕ್ರದ ಒಳಗೆ ಸಿಲುಕಿಕೊಂಡಿದೆ. ಈ ವೇಳೆ ಕೂಡಲೇ ಮಹಿಳೆ ಹಾಗೂ ಬೈಕ್ ಸವಾರ ಕೆಳಕ್ಕೆ ಬಿದ್ದಿದ್ದಾರೆ.
ಬೈಕ್ ಸವಾರ ಕೂಡಲೇ ಎದ್ದು ರಸ್ತೆಯಲ್ಲಿ ಬಿದ್ದಿದ್ದ ಯಶೋದಾ ಬಾಯಿ ಅವರನ್ನು ಮೇಲಕ್ಕೆತ್ತಲು ಯತ್ನಿಸಿದ್ದಾರೆ. ಈ ವೇಳೆ ಕಾಲು ಗೇರ್ ಬಾಕ್ಸ್ ಮೂಲಕ ಚಕ್ರದ ಒಳಗೆ ಸಿಲುಕಿರುವುದು ಕಂಡುಬಂದಿದೆ. ಸುಮಾರು ಒಂದು ಗಂಟೆಗಳ ಕಾಲ ಮಹಿಳೆಯ ಕಾಲು ಹೊರಕ್ಕೆ ತೆಗೆಯಲು ಯತ್ನಿಸಲಾಗಿದೆ. ಕೊನೆಯಲ್ಲಿ ಬೈಕ್ನ ಚೈನ್ ಕತ್ತರಿಸಿ ಗೇರ್ ಬಾಕ್ಸ್ ಬಿಚ್ಚಿ ಮಹಿಳೆಯ ಕಾಲನ್ನು ಹೊರ ತೆಗೆದಿದ್ದಾರೆ.
ಘಟನೆಯಲ್ಲಿ ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವ ಉಂಟಾಗಿದೆ. ಈ ಅಪಘಾತದ ದೃಶ್ಯ ನೋಡುಗರ ಎದೆ ಝಲ್ ಎನಿಸುವಂತಿತ್ತು. ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications