ಆನ್ಲೈನ್ ಜ್ಯೋತಿಷಿ ನಂಬಿ ಒಂದು ಲಕ್ಷ ಕಳೆದುಕೊಂಡ ಚಿಕ್ಕಮಗಳೂರಿನ ಮಹಿಳೆ
ಚಿಕ್ಕಮಗಳೂರು, ಅಕ್ಟೋಬರ್, 12: ಕೌಟುಂಬಿಕ ಸಮಸ್ಯೆಗೆ ಆನ್ಲೈನ್ ಜ್ಯೋತಿಷಿಯಿಂದ ಪರಿಹಾರ ಹುಡುಕಲು ಹೊರಟ ನಗರದ ಮಹಿಳೆಯೊಬ್ಬರು ಎರಡೇ ತಿಂಗಳಲ್ಲಿ ಒಂದು ಲಕ್ಷದ ಹತ್ತು ಸಾವಿರ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ಆದರೆ ಆ ಮಹಿಳೆಯ ವಿವರವನ್ನು ಗೌಪ್ಯವಾಗಿ ಇಡಲಾಗಿದೆ. ಮಹಿಳೆ ಬಳಿ ಹಣವನ್ನು ಪೀಕಿದ್ದ ಖದೀಮ ಜ್ಯೋತಿಷಿ ಇದೀಗ ಚಿಕ್ಕಮಗಳೂರು ಪೊಲೀಸರ ಅತಿಥಿ ಆಗಿದ್ದಾನೆ.
ಖದೀಮ ಜ್ಯೋತಿಷಿ ಪೀಕಿದ್ದ ಹಣ ಎಷ್ಟು?
ಕೌಟುಂಬಿಕ ಕಲಹದಿಂದ ಮಾನಸಿಕ ನೆಮ್ಮದಿಯಿಂದ ಇಲ್ಲ ಎಂದು ಫೇಸ್ಬುಕ್ನಲ್ಲಿ ಪಂಡಿತ್ ಮೋದಿ ಬೆಟ್ಟಪ್ಪ ಅಸ್ಟ್ರಾಲಜಿಯ ಜಾಹಿರಾತು ನೋಡಿ ಅದರಲ್ಲಿ ಇದ್ದ ನಂಬರ್ಗೆ ಕರೆ ಮಾಡಿದ್ದಾಳೆ. ಪಂಡಿತ್ ಮೋದಿ ಬೆಟ್ಟಪ್ಪ ಅಸ್ಟ್ರಾಲಜಿಯ ಗಣೇಶ್ ಗೊಂದಾಲ್ ಎಂಬ 25ರ ಯುವಕ ನಿಮ್ಮ ಸಮಸ್ಯೆಗೆ ಪೂಜೆ ಮಾಡಬೇಕು ಎಂದು ಮಹಿಳೆ ಬಳಿ 3 ಸಾವಿರ ರೂ. ಹಣ ಕೇಳಿದ್ದಾನೆ.

ಆನ್ಲೈನ್ ಜ್ಯೋತಿಷಿ ಮೊರೆ ಹೋಗಿದ್ದ ಮಹಿಳೆ
ಮಹಿಳೆ ಕೌಟುಂಬಿಕ ಸಮಸ್ಯೆಯಿಂದ ಕಣ್ಣೀರು ಹಾಕಿಕೊಂಡು ಗೊಂದಾಲ್ಗೆ ಕರೆ ಮಾಡಿದ್ದಾಳೆ. ಆಗ ಅವನು ಹೆದರಬೇಡಿ ನಾನಿದ್ದೇನೆ, ನಿಮ್ಮ ಸಮಸ್ಯೆಗೆ ಮುಕ್ತಿ ಕೊಡುತ್ತೇನೆ ಎಂದು ಹೇಳಿ ಮಹಿಳೆ ಬಳಿ ಒಂದು ಲಕ್ಷ ಕಿತ್ತುಕೊಂಡಿದ್ದಾನೆ. 3, 7, 13, 22, 30 ಹೀಗೆ ಅವನಿಗೆ ಬೇಕಾದಾಗಲೆಲ್ಲಾ ರಾಮ-ಕೃಷ್ಣನ ಪೂಜೆ ಲೆಕ್ಕದಲ್ಲಿ ಹಣ ಹಾಕಿಸಿಕೊಂಡಿದ್ದಾನೆ. ಮಹಳೆ ಕುಟುಂಬದ ಕಷ್ಟ-ಕಾರ್ಪಣ್ಯ ಮುಗಿದು ಹೋಗುತ್ತದೆ ಎಂದು ಸಾಲ-ಸೋಲ ಮಾಡಿ ಕಳ್ಳ ಜ್ಯೋತಿಷಿಯ ಖಾತೆಯನ್ನು ತುಂಬಿಸಿದ್ದಾಳೆ.

ಪೊಲೀಸರ ಅತಿಥಿಯಾದ ಕಳ್ಳ ಜ್ಯೋತಿಷಿ
ಈ ಖದೀಮ ಎಲ್ಲಾ ಪೂಜೆ ಮುಗಿದಿದೆ, ನಿಮ್ಮ ಸಮಸ್ಯೆಗಾಗಿ ಕೊನೆಯ ಪೂಜೆ ಒಂದಿದೆ. ಅದನ್ನು ಮಾಡಲು ನಾನೇ ಮತ್ತೊಬ್ಬ ದೊಡ್ಡ ಜ್ಯೋತಿಷಿ ಬಳಿ ಹೋಗಬೇಕು ಎಂದು ಮತ್ತೆ ಹಣ ಕೇಳಿದ್ದಾನೆ. ಆಗ ಅನುಮಾನಗೊಂಡ ಮಹಿಳೆ ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆಗೆ ಹೋಗಿ ದೂರು ನೀಡಿದ್ದಾಳೆ. ಬೆಂಗಳೂರಿನ ಕೊಟ್ಟಿಗೆಹಳ್ಳಿಯಲ್ಲಿ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದ್ದ 25ರ ಹರೆಯದ ಯುವಕ ಇದೀಗ ಚಿಕ್ಕಮಗಳೂರು ಪೊಲೀಸರ ಅತಿಥಿ ಆಗಿದ್ದಾನೆ. ಖದೀಮನ ಅಪ್ಪ ಕೂಡ ಜ್ಯೋತಿಷಿ ಆಗಿದ್ದಾರೆ ಎಂದು ತಿಳಿದುಬಂದಿದೆ. ವಿಳಾಸ ಕೇಳಿದರೆ ಈತ ನಾನು ಕೊಳ್ಳೆಗಾಲದವನು ಎಂದು ಬಾಯಿಬಿಟ್ಟಿದ್ದಾನೆ. ಈತ ಬೆಂಗಳೂರಿನಲ್ಲಿದ್ದುಕೊಂಡೆ ಚಿಕ್ಕಮಗಳೂರಿನ ಮಹಿಳೆಗೆ ಮೋಸ ಮಾಡಿರುವುದು ಪೊಲೀಸ್ ತನಿಖೆಯಿಂದ ಹೊರಬಂದಿದೆ. ಹಾಗಾಗಿ ಬೆಂಗಳೂರಿನ ಜನರು ಕೂಡ ಇವನ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಚಿಕ್ಕಮಗಳೂರು ಎಸ್ಪಿ ಕೂಡ ಆನ್ಲೈನ್ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications