ಕೇದಾರನಾಥ ಯಾತ್ರೆ ವೇಳೆ ಅಸ್ವಸ್ಥ: ಚಿಕ್ಕಮಗಳೂರು ಮೂಲದ ಯುವಕ ಸಾವು
ಚಿಕ್ಕಮಗಳೂರು, ಆಗಸ್ಟ್ 1: ಕರ್ನಾಟಕದಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕ ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ಗಿರೀಶ್ ( 25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಈ ಬಾರಿ ಕರ್ನಾಟಕದಿಂದ ನೂರಾರು ಸಂಖ್ಯೆಯಲ್ಲಿ ಕೇದಾರನಾಥ ಯಾತ್ರೆಗೆ ತೆರಳಿದ್ದಾರೆ. ಅದರಂತೆ, ಕಳೆದ ವಾರ ಗಿರೀಶ್ ಕೂಡ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆ ಕೈಗೊಂಡಿದ್ದರು. ಹವಾಮಾನದ ವೈಪರ್ಯತೆ ಹಾಗೂ ಪ್ರಯಾಣ ಆಯಾಸ ಕಾರಣಗಳಿಂದ ಗಿರೀಶ್ ಕೇದಾರನಾಥದಲ್ಲಿ ಅಸ್ವಸ್ಥಗೊಂಡಿದ್ದರು. ದುರಾದೃಷ್ಟವಶಾತ್ ಗಿರೀಶ್ ಕೇದಾರನಾಥದಲ್ಲಿಯೇ ಸಾವನ್ನಪ್ಪಿದ್ದಾರೆ. ಸದ್ಯ ಗಿರೀಶ್ ಅವರ ಮೃತ ದೇಹವನ್ನು ರಿಷಿಕೇಶ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಗಿರೀಶ್ ಮೃತಪಟ್ಟಿರುವ ಬಗ್ಗೆ ಕೇದಾರನಾಥ ಪೊಲೀಸರು ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದಲ್ಲಿರುವ ಗಿರೀಶ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಮಗನನ್ನು ಕಳೆದುಕೊಂಡು ಗಿರೀಶ್ ಪೋಷಕರು ಕಂಗಾಲಾಗಿದ್ದಾರೆ.
ಮಳೆಗೆ ಮನೆ ಗೋಡೆ ಕುಸಿತ, ವ್ಯಕ್ತಿ ಸಾವು
ಹಾಸನ: ನಿರಂತರ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಹೋಬಳಿ ಗುಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜು (52) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಳೆಗೆ ನಾಗರಾಜು ಅವರ ಮನೆಯ ಗೋಡೆ ಸಂಪೂರ್ಣ ಶಿಥಿಲಗೊಂಡಿತ್ತು. ಭಾನುವಾರ ಸಂಜೆ ತಮ್ಮ ಮನೆಯ ಪಕ್ಕದಲ್ಲಿ ಸ್ವಚ್ಛತೆ ಮಾಡುತ್ತಿದ್ದಾಗ ಮನೆಯ ಗೋಡೆ ಏಕಾಏಕಿ ನಾಗರಾಜು ಮೇಲೆ ಕುಸಿದು ಬಿದ್ದಿದೆ. ಈ ವೇಳೆ ನಾಗರಾಜು ಪತ್ನಿ ಲಕ್ಷ್ಮಮ್ಮ ಹಾಗೂ ಪುತ್ರ ಧರ್ಮರಾಜು ಕೂಲಿ ಕೆಲಸಕ್ಕೆ ತೆರಳಿದ್ದರು.
ಪತ್ನಿ ಹಾಗೂ ಪುತ್ರ ಕೆಲಸದಿಂದ ವಾಪಾಸ್ ಬಂದ ವೇಳೆ ನಾಗರಾಜ್ ಗೋಡೆಯಡಿ ಸಿಲುಕಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications