ಚಾರ್ಮಾಡಿಗೆ ಚಾರಣಕ್ಕೆ ಬಂದಿದ್ದ ಯುವಕ ಏಕಾಏಕಿ ಕಣ್ಮರೆ: ಮುಂದೆನಾಯ್ತು?
ಚಿಕ್ಕಮಗಳೂರು, ಫೆಬ್ರವರಿ 26: ಚಾರಣಕ್ಕೆಂದು ಚಾರ್ಮಾಡಿಗೆ ತೆರಳಿದ ಯುವಕನೊಬ್ಬ ಕಾಡಿನ ಮಧ್ಯೆ ನಾಪತ್ತೆಯಾಗಿದ್ದ ವಿಚಾರ ಆತಂಕಕ್ಕೀಡು ಮಾಡಿತ್ತು. ಇದೀಗ ಆತ ಪತ್ತೆಯಾಗುವುದರೊಂದಿಗೆ ಪ್ರಸಂಗ ಸುಖಾಂತ್ಯಗೊಂಡಿದೆ.
ಮೂಡಿಗೆರೆಯ ಬಲ್ಲಾಳರಾಯನ ದುರ್ಗದಿಂದ ಹತ್ತು ಮಂದಿ ಯುವಕರ ತಂಡ ಬೆಳ್ತಂಗಡಿಯ ಚಾರ್ಮಾಡಿಯ ಭಂಡಾಜೆ ಫಾಲ್ಸ್ಗೆ ಫೆಬ್ರವರಿ25ರಂದು ಚಾರಣಕ್ಕೆ ತೆರಳಿದ್ದರು. ಕೆಎಂಸಿ ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿಗಳ ಈ ತಂಡದಲ್ಲಿದ್ದ ಧನುಷ್ ಎಂಬಾತ ಕಾಡಿನ ಮಧ್ಯೆ ಮೊಬೈಲ್ ಸ್ವಿಚ್ ಆಫ್ ಆಗಿ ನಾಪತ್ತೆಯಾಗಿದ್ದನು.

ಗೆಳೆಯ ಕಾಣದೇ ಇದ್ದಾಗ, ಸಂಪರ್ಕಕಕ್ಕೂ ಸಿಗದೇ ಇದ್ದಾಗ ತಂಡದಲ್ಲಿದ್ದ ಆದಿತ್ಯ ಎಂಬ ಯುವಕ 112 ಪೊಲೀಸ್ ವಾಹನಕ್ಕೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದಾರೆ. ಯುವಕ ಕಣ್ಮರೆ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ತಕ್ಷಣವೇ ಹೋಗಿ ತಂಡದಲ್ಲಿದ್ದ ಯುವಕರನ್ನು ವಿಚಾರಿಸಿದ್ದಾರೆ.
ಅದರಂತೆ ಆತ ತಪ್ಪಿಕೊಂಡಿರುವ ನಿರ್ದಿಷ್ಟ ಸ್ಥಳವನ್ನು ಸೂಚಿಸಿದ್ದಾರೆ. ಅದರಂತೆ ಪೊಲೀಸರು ರಾತ್ರಿ ವೇಳೆ ಕಾಡಿನ ಮಧ್ಯೆ 3.30 ಗಂಟೆಗಳ ಕಾಲ ಹುಡುಕಾಟ ನಡಿಸಿದ್ದಾರೆ. ಕೊನೆಗೆ ಗುಡ್ಡದ ಪ್ರದೇಶದಲ್ಲಿ ಮಧ್ಯರಾತ್ರಿ ಸುಮಾರು 700 ಅಡಿ ಕೆಳಗೆ ದಟ್ಟವಾದ ಅರಣ್ಯ ಮಧ್ಯದಲ್ಲಿ ಓರ್ವನೇ ಇದ್ದಿರುವುದು ಕಂಡು ಬಂದಿದೆ. ಆತ ಸುರಕ್ಷಿತವಾಗಿದ್ದು, ಸದ್ಯ ಆತನ ತಂಡದೊಂದಿಗೆ ಪೊಲೀಸರು ಕಳುಹಿಸಿಕೊಟ್ಟಿದ್ದಾರೆ.
ಬೆಂಗಳೂರು: ಮಕ್ಕಳಿಂದ ಮೊಬೈಲ್ ಕಳ್ಳತನ ಮಾಡಿಸುವ ಗ್ಯಾಂಗ್ ಆ್ಯಕ್ಟೀವ್
ಬೆಂಗಳೂರು: ಮಕ್ಕಳನ್ನು ಮುಂದೆ ಬಿಟ್ಟು ಕಳ್ಳತನ ಮಾಡಿಸುತ್ತಿರುವ ಗ್ಯಾಂಗ್ ಬೆಂಗಳೂರಿನಲ್ಲಿ ಆ್ಯಕ್ಟೀವ್ ಆಗಿದೆ. ಗುಂಪೊಂದು ಮಕ್ಕಳನ್ನು ಮುಂದೆ ಬಿಟ್ಟು ಕಳ್ಳತನ ಮಾಡಿಸುತ್ತಿದೆ. ಈ ಗುಂಪು ಮಕ್ಕಳಿಂದ ಒಂದು ಮೊಬೈಲ್ ಪಡೆದು ಅವರಿಗೆ ಐನೂರು ರೂಪಾಯಿ ನೀಡಿ ಕಳ್ಳತನಕ್ಕೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಲಿಂಗರಾಜಪುರ ನಿವಾಸಿಗಳು ಆರೋಪ ಮಾಡಿದ್ದಾರೆ.
ಇತ್ತೀಚಿಗೆ ಮನೆಯಲ್ಲಿ ಮಧ್ಯಾಹ್ನ ಮಲಗಿದ್ದ ವ್ಯಕ್ತಿಯ ಮೊಬೈಲ್ಅನ್ನು ಕಳ್ಳತನ ಮಾಡಿ ಓರ್ವ ಬಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಬಾಣಸವಾಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಕ್ಕಳನ್ನು ಬಳಸಿಕೊಂಡು ಈ ರೀತಿಯ ಅಪರಾಧ ಕೃತ್ಯ ಮಾಡಿಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಪೊಲೀಸರಿಗೆ ಒತ್ತಾಯಿಸಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications