ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್; ಕ್ರಮಕ್ಕೆ ಆಗ್ರಹ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್ 26: ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವೈರಸ್ ನಿಯಂತ್ರಣದ ಬಗ್ಗೆ ಈಚೆಗಷ್ಟೆ ಶೃಂಗೇರಿ ಶ್ರೀಗಳು ಸಲಹೆಯೊಂದನ್ನು ನೀಡಿದ್ದರು. ಈ ಹೇಳಿಕೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಕ್ರಮಕ್ಕೆ ಇದೀಗ ಯುವ ವಿಪ್ರ ವೇದಿಕೆ ದೂರು ನೀಡಿದೆ.

ಕೊರೋನ ನಿಯಂತ್ರಣಕ್ಕೆ ದುರ್ಗಾಪರಮೇಶ್ವರಿ ಸ್ತೋತ್ರ ಪಠಿಸುವಂತೆ ಶೃಂಗೇರಿ ಶ್ರೀಗಳು ಸೂಚಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವ್ಯಕ್ತಿಯೊಬ್ಬರು, ಶೃಂಗೇರಿ ಶ್ರೀಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ, ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು.

Yuva Vipra Lodged Complaint Against A Person Who Posted Against Sringeri Swamiji

ಹೀಗೆ ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಯುವ ವಿಪ್ರ ವೇದಿಕೆಯು ದೂರು ನೀಡಿದೆ. ಪೋಸ್ಟ್ ಮಾಡಿದ್ದ ಸಂಪತ್ ಸುಬ್ಬಯ್ಯ ಎಂಬುವರ ವಿರುದ್ಧ ಎಸ್ಪಿಗೆ ದೂರು ನೀಡಲಾಗಿದೆ.

English summary
Chikmagalur Sringeri Yuva vipra sangha has lodged a complaint against a person who posted against Sringeri Swamiji in social media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X