ಚಿಕ್ಕಮಗಳೂರು ಜಿ.ಪಂ. ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅಮಾನತು
ಚಿಕ್ಕಮಗಳೂರು, ನವೆಂಬರ್ 19: ಅವಧಿ ಪೂರ್ಣಗೊಂಡರೂ ರಾಜೀನಾಮೆ ನೀಡದ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅವರನ್ನು ಬಿಜೆಪಿ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಸುಜಾತ ಕೃಷ್ಣಪ್ಪ ಅವರನ್ನು ಅಮಾನತು ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಪಕ್ಷದ ತೀರ್ಮಾನ ಉಲ್ಲಂಘಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪ ಸುಜಾತಾ ಅವರ ಮೇಲಿತ್ತು. ಸುಜಾತಾ ಕೃಷ್ಣಪ್ಪ ಅವರಿಂದ ಪಕ್ಷದ ಘನತೆಗೆ ಧಕ್ಕೆ ಉಂಟಾಗಿದೆ. ಈ ಕುರಿತು ಸಮಜಾಯಿಷಿ ನೀಡಲು ಸೂಚಿಸಿದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಪಕ್ಷದ ಆಂತರಿಕ ಒಪ್ಪಂದದಂತೆ ಅಧ್ಯಕ್ಷಗಿರಿಗೆ ಸುಜಾತ ಕೃಷ್ಣಪ್ಪ ರಾಜೀನಾಮೆ ನೀಡಿರಲಿಲ್ಲ. ಹೀಗಾಗಿ ಬುಧವಾರ ಸ್ವಪಕ್ಷಿಯ ಸದಸ್ಯರೇ ಜಿಲ್ಲಾ ಪಂಚಾಯಿತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಅಧ್ಯಕ್ಷೆ ಸುಜಾತ ಕೃಷ್ಣಪ್ಪ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಧಿಕ್ಕಾರ ಕೂಗಿದ್ದರು.

ಪಕ್ಷದ ಆಂತರಿಕ ಒಪ್ಪಂದದಂತೆ ನೀವು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕೆಂದು ಪಟ್ಟು ಹಿಡಿದಿದ್ದರು. ಈ ವೇಳೆ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ವಾಕ್ಸಮರವೂ ನಡೆಯಿತು. ನಂತರ ಬಿಜೆಪಿ ಸದಸ್ಯರು ಸಭೆ ಬಹಿಷ್ಕರಿಸಿ ಹೊರನಡೆದಿದ್ದರು.
ಈ ಮುನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಖುದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೂಚನೆ ನೀಡಿದ್ದರೂ ಸುಜಾತ ಕೃಷ್ಣಪ್ಪ ಸೊಪ್ಪು ಹಾಕಿರಲಿಲ್ಲ. ಇದೀಗ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Recommended Video
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications