ಚಿತ್ರದುರ್ಗ: 4 ಕೋಟಿ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿ ಅಂದರ್
ಚಿತ್ರದುರ್ಗ, ಸೆಪ್ಟೆಂಬರ್ 15: ಬರೋಬ್ಬರಿ 4 ಕೋಟಿ ರೂ. ಮೌಲ್ಯದ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ರಾಂಪುರ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 04 ರಂದು ದಾಳಿ ಮಾಡಿದ್ದ ರಾಂಪುರ ಪೊಲೀಸರ ದಾಳಿ ವೇಳೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ರುದ್ರೇಶ್ ನನ್ನು ಬಂಧಿಸಲಾಗಿದೆ. ಜೊತೆಗೆ 9871.73 ಕೆ.ಜಿ ತೂಕದ 8250 ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಮನಗರದಲ್ಲಿ 3 ಕೆಜಿ ಗಾಂಜಾ ವಶ, ಆರೋಪಿ ರಿಯಾಜ್ ಪಾಷಾ ಬಂಧನ
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಅಂತಾಪುರ ಕೊರಚರಹಟ್ಟಿ ನಿವಾಸಿಯಾಗಿರು ರುದ್ರೇಶ್, ರಾಂಪುರದ ಬಳಿ ಜಮೀನು ಗುತ್ತಿಗೆ ಪಡೆದು ಗಾಂಜಾ ಬೆಳೆದಿದ್ದನು. ಇದು ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ.
ರಾಂಪುರದ ಡಿ.ಬಿ ಮಂಜುನಾಥ್, ವೈ.ಜಂಬುನಾಥ್, ಡಿ.ವೈ ಮಂಜುನಾಥ್ ಎಂಬುವರಿಗೆ ಸೇರಿದ 04 ಎಕರೆ 20 ಗುಂಟೆ ಜಮೀನಿನಲ್ಲಿ ಗಾಂಜಾ ಗಿಡ ಬೆಳೆದಿದ್ದು, ಮಧ್ಯವರ್ತಿ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಮಹದೇವಪುರ ನಿವಾಸಿ ಸಮಂತಗೌಡ ಜಮೀನನ್ನು ಗುತ್ತಿಗೆ ಕೊಡಿಸಿದ್ದನು.
Recommended Video
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ರಾಂಪುರ ಠಾಣೆ ಪಿಎಸ್ಐ ಗುಡ್ಡಪ್ಪ ನೇತೃತ್ವದ ತಂಡ, ಜಮೀನು ಮಾಲೀಕರು, ಮಧ್ಯವರ್ತಿ ಸೇರಿದಂತೆ ಪ್ರಮುಖ ಆರೋಪಿ ರುದ್ರೇಶ್ ನನ್ನು ಬಂಧಿಸಿದ್ದಾರೆ. ಬಂಧಿತ ಐವರ ವಿರುದ್ಧ NDPS ಆ್ಯಕ್ಟ್ ಕಲಂ 8 ಹಾಗಾ 20(a)(b) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.