₹50 ಲಕ್ಷ ವೆಚ್ಚದಲ್ಲಿ ರಸ್ತೆ ದುರಸ್ತಿ: ಮೂರೇ ದಿನಕ್ಕೆ ಕಳಪೆ ಕಾಮಗಾರಿ ಬಯಲು
ಚುನಾವಣೆ ಸಮೀಪಿಸುತ್ತಿದ್ದಂತೆ ರಸ್ತೆ ಕಾಮಗಾರಿಗಳ ಭರದಿಂದ ಸಾಗುತ್ತಿದ್ದು, ಕಳಪೆ ಕಾಮಗಾರಿ ಕೂಡ ಜೋರಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಹೋಬಳಿಯ ಖಂಡೇನಹಳ್ಳಿ ಗ್ರಾಮದ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಸಿದ್ದು ರಾಜಕೀಯ ಜಟಾಪಟಿಗೆ ಕ
ಚಿತ್ರದುರ್ಗ, ಜನವರಿ 27 : ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಸಾಕಷ್ಟು ಹಣ ಬರುತ್ತದೆ. ಆದರೆ ಚಿತ್ರದುರ್ಗ ಜಿಲ್ಲೆಯ ರಸ್ತೆಗೆ ಡಾಂಬರೀಕರಣ ಮಾಡಿ ಮೂರು ದಿನ ಕಳೆಯುವುದರೊಳಗೆ ರಸ್ತೆ ಕಿತ್ತು ಹೋಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆ ಕಿತ್ತು ಹೋಗಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಹೋಬಳಿಯ ಖಂಡೇನಹಳ್ಳಿ ಗ್ರಾಮದ ಕಾವಲು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಸಿದ್ದು, ರಸ್ತೆಗೆ ಮೂರು ದಿನದ ಹಿಂದೆ ಡಾಬರ್ ಹಾಕಿದ್ದಾರೆ. ಆದರೆ ಮೂರ್ನಾಲ್ಕು ದಿನಗಳು ಕಳೆಯುವುದರೊಳಗೆ ರಸ್ತೆಯ ಡಾಂಬರ್ ರೊಟ್ಟಿಯಂತೆ ಎಳೆ ಎಳೆಯಾಗಿ ಕಿತ್ತು ಬರುತ್ತಿದೆ. ಇನ್ನು ಇದರಿಂದ ರಸ್ತೆ ಸಂಪೂರ್ಣ ಕಳಪೆ ಕಾಮಗಾರಿ ಗುಣಮಟ್ಟ ಹೊಂದಿದೆ ಎಂದು ಬಿಜೆಪಿ ಸರ್ಕಾರ, ಕಾಮಗಾರಿ ಗುತ್ತಿಗೆದಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಇತ್ತ ವಿಧಾನಸಭೆ ಚುನಾವಣೆ ಸಮೀಪ ಇರುವಾಗಲೇ ರಸ್ತೆ ಕಳಪೆ ಕಾಮಗಾರಿಯನ್ನೇ ಬಂಡವಾಳ ಮಾಡಿಕೊಂಡ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ತೆರಿಗೆ ಹಣದಲ್ಲಿ ರಸ್ತೆಗೆ ಡಾಂಬರೀಕರಣ ಮಾಡಿರುವುದು ನೆಪ ಮಾತ್ರಕ್ಕೆ ಅಷ್ಟೇ. ಇದರಲ್ಲಿ ಒಂದಿಷ್ಟು ಜಲ್ಲಿಕಲ್ಲು ಚೆಲ್ಲಿ ಡಾಂಬರು ಹಾಕಿ ಗುತ್ತಿಗೆದಾರ ಕೈ ತೊಳೆದುಕೊಂಡಿದ್ದಾನೆ. ಡಾಂಬರು ರಸ್ತೆಯನ್ನು ಉಜ್ಜಿದರೆ ಡಾಂಬರು ಪುಡಿ, ಮಣ್ಣು ಬರುತ್ತಿದೆ. ಸಣ್ಣ ವಾಹನ ಓಡಾಡಿದರೂ ರಸ್ತೆಯಲ್ಲಿ ಗುಂಡಿಗಳು ಬೀಳುವಂತಾಗಿದೆ. ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಕಳಪೆ ರಸ್ತೆಯನ್ನು ಸರಿಪಡಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಫೋಟೋವನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಬಿಜೆಪಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸರ್ಕಾರ 40% ಕಮಿಷನ್ ಸರ್ಕಾರವಾಗಿದೆ. ಯಾವುದೇ ಕಾಮಗಾರಿ ನಡೆಸಿದರೂ ಅದರಲ್ಲಿ ಕಳಪೆ ಗುಣಮಟ್ಟದ ಕಾಮಗಾರಿ ಹೊಂದಿರುತ್ತದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯವರ ಕಮಿಷನ್ ಆಸೆಗಾಗಿ ಇಂತಹ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶಿರ್ವಾದ ಮಾಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಮನವಿ ಮಾಡುತ್ತಿದ್ದರೆ, ಮತ್ತೊಂದೆಡೆ ಜೆಡಿಎಸ್ ಪಕ್ಷಕ್ಕೆ ಒಮ್ಮೆ ಅವಕಾಶ ನೀಡಿ ಎಂದು ಎಂದು ಜೆಡಿಎಸ್ ಕಾರ್ಯಕರ್ತರು ಕಳಪೆ ಕಾಮಗಾರಿಯ ಫೋಟೋ ಹಂಚಿಕೊಂಡು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications