ಮೊದಲ ಹಂತದ ಬೆಳೆ ಸಮೀಕ್ಷೆ ಪ್ರಕಾರ 62 ತಾಲೂಕುಗಳು ಬರ ಪಟ್ಟಿಗೆ ಸೇರಿವೆ-ಸಚಿವ ಕೃಷ್ಣ ಭೈರೇಗೌಡ
ಚಿತ್ರದುರ್ಗ, ಸೆಪ್ಟೆಂಬರ್ 06: ರಾಜ್ಯದಲ್ಲಿ ಮಳೆಯ ಅಭಾವ ಹಿನ್ನೆಲೆಯಲ್ಲಿ 62 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 18 ತನಕ ಮಳೆ ಕೊರೆತೆ ಇರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಮೊದಲ ಹಂತದ ಬೆಳೆ ಸಮೀಕ್ಷೆ ಪ್ರಕಾರ 62 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗಿದೆ ಎಂದರು.

ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ಬರ ಪಟ್ಟಿಗೆ ಆಯ್ಕೆಯಾಗಿದೆ. ಇನ್ನೊಂದು ಸುತ್ತು ಬೆಲೆ ಸಮೀಕ್ಷೆ ಮಾಡಬೇಕು. ಉಳಿದ 51 ತಾಲೂಕು ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. 83 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದು, 3-4 ದಿನಗಳಲ್ಲಿ ಸಮೀಕ್ಷೆ ವರದಿ ಬರುತ್ತದೆ ಕೇಂದ್ರದ ಮಾರ್ಗಸೂಚಿ ಪ್ರಕಾರ ಬರ ಘೋಷಣೆ ಮಾಡುತ್ತೇವೆ.
ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಕೂಡಾ ನಾವು ಸಲ್ಲಿಸುತ್ತೇವೆ. ಎಲ್ಲಿ ಬರ ಇದೆ ಅಲ್ಲಿಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚನೆ ಮಾಡುತ್ತೇವೆ. ಮೇವಿನ ಕೊರತೆ ಆಗಬಾರದು ಎಂದು ರೈತರಿಗೆ 20 ಕೋಟಿ ವೆಚ್ಚದಲ್ಲಿ ರೈತರಿಗೆ ಉಚಿತ ಮೇವಿನ ಬೀಜ ನೀಡಲಾಗುತ್ತದೆ. ಬರ ಪ್ರದೇಶದಲ್ಲಿ ನರೇಗಾದಲ್ಲಿ 150 ಉದ್ಯೋಗ ಖಾತ್ರಿ ಕೆಲಸ ನೀಡಲು ಚಿಂತನೆ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.
ಬಿಜೆಪಿಗೆ ಜನರ ಭಾವನೆಗಳ ಜೊತೆ ಚೆಲ್ಲಾಟ
ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಸ್ಥಿತಿ ದುಸ್ಥಿತಿಯಾಗಿದೆ. ಎಲ್ಲಾ ಬೆಲೆ ಏರಿಕೆ ಮಾಡಿ, ಜನರನ್ನು ಸುಲಿಗೆ ಮಾಡುತ್ತಿದ್ದಾರೆ. ದೇಶದ ಸ್ಥಿತಿ ಇಂದು ಬಡವರನ್ನು ಸುಲಿದು ಸಾಹುಕಾರರನ್ನು ಸಾಕುತ್ತಿದ್ದಾರೆ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಂದಾಯ ಸಚಿವರು ಕಿಡಿಕಾರಿದರು.
ಬಿಜೆಪಿಯವರು ಹೊಟ್ಟೆ ಪಾಡಿನ ವಿಷಯ ಮುಚ್ಚಿ ಹಾಕಲು, ಭಾವನಾತ್ಮಕ ವಿಷಯಗಳ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಇಲ್ಲಿವರೆಗೂ ಅದು ಯಶಸ್ವಿ ಆಗಿತ್ತು, ಮುಂದೆ ಆಗಲ್ಲ. ಭಾವನಾತ್ಮಕ ಅಮಲಿನಲ್ಲಿ ಮತ ಪಡೆಯುವ ಪದ್ಧತಿ ಯಾವತ್ತಿಗೂ ಕೆಲಸ ಮಾಡಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಬಿಜೆಪಿ ನಾಯಕರು ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಭಾವನಾತ್ಮಕ ವಿಷಯಗಳಿಂದ ದೇಶ ಉದ್ಧಾರ ಆಗಲ್ಲ. ಹಸಿದವರಿಗೆ ಅನ್ನ ನೀಡಬೇಕು. ಉದ್ಯೋಗ ನೀಡಿದಾಗ ದೇಶ ಅಭಿವೃದ್ಧಿ ಆಗುತ್ತದೆ. ಬಡವರನ್ನು ಮತಕ್ಕಾಗಿ ಉಪಯೋಗ ಮಾಡಿಕೊಳ್ಳುವ ರಾಜಕೀಯ ಕೊನೆ ಆಗಲಿದೆ ಎಂದು ತಿಳಿಸಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications