ಶೌರ್ಯಕ್ಕೆ ಹೆಸರಾದ ಕೋಟೆನಾಡಿನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಚಿತ್ರದುರ್ಗ, ಆಗಸ್ಟ್ 15: ಕೋಟೆನಾಡಿನಲ್ಲಿ 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಚಿತ್ರದುರ್ಗದ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲಾಗಿದೆ.
Recommended Video
IPL 2020 : 'Tata' shows interest in the title sponsorship | Oneindia Kannada
ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿ ಕವಿತಾ ಎಸ್.ಮನ್ನಿಕೇರಿ ಅವರು ಧ್ವಜಾರೋಹಣ ನೆರವೇರಿಸಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸ್ವಾತಂತ್ರೋತ್ಸವ ಆಚರಣೆ ಮಾಡಲಾಗುತ್ತಿದ್ದು, ಕೆಲವೇ ಮಂದಿ ಭಾಗವಹಿಸಿದ್ದರು. ಸಾಮಾಜಿಕ ಅಂತರದೊಂದಿಗೆ ಪೊಲೀಸರು ಪಂಥ ಸಂಚಲನ ನಡೆಸಿದರು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕೊರೊನಾ ವಾರಿಯರ್ ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಚಿತ್ರದುರ್ಗದ ಹಿರಿಯೂರಿನಲ್ಲಿ ಶಾಸಕಿ ಕೆ.ಪೂರ್ಣಿಮಾ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಧ್ವಜಾರೋಹಣವನ್ನು ನೆರವೇರಿಸಿದರು. ಹಿರಿಯೂರಿನ ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯುತ್ತಿದೆ.












Click it and Unblock the Notifications