ರಸ್ತೆ ಅಪಘಾತ : ಕೊಪ್ಪಳದಲ್ಲಿ 5, ಚಿತ್ರದುರ್ಗದಲ್ಲಿ 4 ಸಾವು

ಚಿತ್ರದುರ್ಗ, ಜನವರಿ 28 : ಚಿತ್ರದುರ್ಗ ಮತ್ತು ಕೊಪ್ಪಳದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ 9 ಜನರು ಮೃತಪಟ್ಟಿದ್ದಾರೆ. ಸರ್ಕಾರಿ ಬಸ್ ಮತ್ತು ಲಾರಿ, ಟೆಂಪೋ ಟ್ರಾವೆಲರ್ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದೆ.

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಕೆಎಸ್ಆರ್‌ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. [ಕೆಎಸ್ಆರ್ ಟಿಸಿ ನೇಮಕಾತಿ, ಅರ್ಜಿ ಹಾಕಲು ಫೆ.4 ಕೊನೆ ದಿನ]

road accident

ಮೃತಪಟ್ಟವರನ್ನು ಮಲ್ಲಪ್ಪ (35), ಅಶೋಕ (30), ಸಾಬಯ್ಯ (20), ವೀರಭದ್ರಪ್ಪ (45) ಎಂದು ಗುರುತಿಸಲಾಗಿದೆ. ಇವರೆಲ್ಲರು ರಾಯಚೂರು ಜಿಲ್ಲೆಗೆ ಸೇರಿದವರಾಗಿದ್ದಾರೆ. ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಿರೇಹಳ್ಳಿ ಬಳಿ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳ : ಕೊಪ್ಪಳ ಜಿಲ್ಲೆಯ ಯಲಬಯರ್ಗಾ ತಾಲೂಕಿನ ಚಿಕ್ಕ ಮ್ಯಾದ್ನೇರಿ ಕ್ರಾಸ್ ಬಳಿ ಟೆಂಪೋ ಟ್ರಾವೆಲರ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, 5 ಜನರು ಸಾವನ್ನಪ್ಪಿದ್ದಾರೆ. ಬೇವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

ಮೃತಪಟ್ಟವರೆಲ್ಲರೂ ಮಹಾರಾಷ್ಟ್ರದ ಅಹ್ಮದ್ ನಗರದಿಂದ ಮೈಸೂರಿಗೆ ಮದುವೆಗಾಗಿ ತೆರಳುತ್ತಿದ್ದರು. ವೇಗವಾಗಿ ತೆರಳುತ್ತಿದ್ದ ಟಿಟಿ ಮ್ಯಾದ್ನೇರಿ ಕ್ರಾಸ್ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತ್ಯಾಗರಾಜನ್ ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+