ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭದ್ರಾ ಯೋಜನೆ ಮುಗಿಯುವ ಮುನ್ನವೇ ಕುಸಿದ ನಾಲೆ ತಡೆಗೋಡೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಆಗಸ್ಟ್ 17: ಸುಮಾರು ಹತ್ತು ವರ್ಷಗಳಿಂದ ನಡೆಯುತ್ತಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ ಅಭದ್ರತೆ ಕಂಡುಬಂದಿದೆ.

ಕಾಮಗಾರಿಯು ಪೂರ್ಣಗೊಳ್ಳುವ ಮೊದಲೇ ತರೀಕೆರೆ ತಾಲೂಕಿನ ಹಳಿಯೂರು ಸಮೀಪದಲ್ಲಿ ನಾಲೆ ತಡೆಗೋಡೆ ಕುಸಿದಿದ್ದು, ಕಳಪೆ ಕಾಮಗಾರಿ ನಡೆದಿದೆಯೆಂದು ರೈತರು ಆರೋಪಿಸಿದ್ದಾರೆ.

 ಮುಗಿಯದ ಭದ್ರಾ ಕಾಮಗಾರಿ; ಅಧಿಕಾರಿಗಳಿಗೆ ರೈತರಿಂದ ತರಾಟೆ ಮುಗಿಯದ ಭದ್ರಾ ಕಾಮಗಾರಿ; ಅಧಿಕಾರಿಗಳಿಗೆ ರೈತರಿಂದ ತರಾಟೆ

ಸುಮಾರು 18 ಸಾವಿರ ಕೋಟಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಆರಂಭಗೊಂಡು ಸುಮಾರು ಹತ್ತು ವರ್ಷಗಳು ಕಳೆದರೂ ಯೋಜನೆ ಪೂರ್ಣಗೊಂಡಿಲ್ಲ. ಆದರೂ ರೈತರಿಗೆ ಇದರ ಬಗ್ಗೆ ಬಹು ನಿರೀಕ್ಷೆಗಳಿವೆ. ಆದರೆ ನಾಲೆ ತಡೆಗೋಡೆ ಕುಸಿದಿರುವುದರಿಂದ ಇದರ ಗುಣಮಟ್ಟದ ಬಗ್ಗೆ ಸಂಶಯ ವ್ಯಕ್ತವಾಗಿದೆ.

A Canal Wall Collapsed Before The Bhadra Project Finish

ಕಾಮಗಾರಿಯ ಭದ್ರಾ ನಾಲೆ ಸುಮಾರು 45 ಅಡಿಗಳಷ್ಟು ಉದ್ದವಿದ್ದು, 25 ಅಡಿಗಳ ವಿಸ್ತೀರ್ಣದಲ್ಲಿ ಈ ತಡೆಗೋಡೆ ಕುಸಿದಿದೆ. ಆದ್ದರಿಂದ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ್ದಾ, ತಡೆಗೋಡೆ ನಿರ್ಮಿಸಲು ಗುಣಮಟ್ಟದ ಕಾಂಕ್ರಿಟ್ ಬಳಸದೇ ಇರುವುದರಿಂದ ಗೋಡೆ ಕಿತ್ತು ಬಂದಿದೆ ಎಂದು ರೈತರು ಆರೋಪಿಸಿದ್ದಾರೆ.

ಕೋಟೆನಾಡಿಗೆ ಹರಿದು ಬಂದಿದೆ ನೀರು; ಕೆಲ್ಲೋಡ್ ಚೆಕ್ ಡ್ಯಾಂ ಭರ್ತಿಕೋಟೆನಾಡಿಗೆ ಹರಿದು ಬಂದಿದೆ ನೀರು; ಕೆಲ್ಲೋಡ್ ಚೆಕ್ ಡ್ಯಾಂ ಭರ್ತಿ

ಇತ್ತೀಚಿಗೆ ಚಿಕ್ಕಮಗಳೂರು ಭಾಗದಲ್ಲಿ ಒಂದಿಷ್ಟು ಮಳೆಯಾಗುತ್ತಿದ್ದು, ಇದನ್ನೇ ನೆಪವೊಡ್ಡಿ ಕಾಮಗಾರಿ ವಿಳಂಬ ಮಾಡುತ್ತಿದ್ದಾರೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಿ ನೀರು ಹರಿಸಲು ಭದ್ರಾ ಅಧಿಕಾರಿಗಳು ವಿಫಲವಾಗಿದ್ದಾರೆಂದು ಚಿತ್ರದುರ್ಗ ಭಾಗದ ರೈತರ ಆರೋಪಿಸಿದ್ದಾರೆ.

English summary
A canal wall collapsed before the finishing of Bhadra Project in chitradurga. farmers alleges that the poor quality work is main reason for this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X