ತರಕಾರಿ ಮಾರಾಟಗಾರನ ಮಗಳು ಖಜಾನೆ ಅಧಿಕಾರಿಯಾದ ಸಾಹಸಗಾಥೆ
ಚಿತ್ರದುರ್ಗ, ಡಿಸೆಂಬರ್.25: ಅವರು ಬಡರಾಗಿದ್ದರೂ ಆರು ಜನರ ತುಂಬು ಕುಟುಂಬ. ತುತ್ತು ಅನ್ನಕ್ಕೂ ನಿತ್ಯ ಪರಿತಪ್ಪಿಸಬೇಕು. ತಂದೆ-ತಾಯಿ ಹಳ್ಳಿಹಳ್ಳಿಗಳಲ್ಲಿ ಸುತ್ತಿ ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಇಂತಹ ಪರಿಸ್ಥಿತಿಯಲ್ಲಿ ಸಾಧಿಸುವ ಹಂಬಲ ಬಡತನದಲ್ಲಿ ವಿದ್ಯೆ ಆಕೆಯ ಕೈಹಿಡಿಯಿತು. ಇದರಿಂದ ವಿನೋದಮ್ಮ ಖಜಾನೆ ಅಧಿಕಾರಿಯಾಗಿ ಹೊರ ಹೊಮ್ಮಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮದ ಶ್ರೀಮತಿ ಜಯಮ್ಮ ಮತ್ತು ಮಂಜುನಾಥಪ್ಪ ಅವರ ದ್ವಿತೀಯ ಪುತ್ರಿ ವಿನೋದಮ್ಮ ಇಂದು ಹೆತ್ತವರ ಕನಸನ್ನು ನನಸು ಮಾಡಿದ್ದಾರೆ. ಓಬವ್ವನ ನಾಡಿನ ಕುವರಿ ಇಂದು ನೆಲದ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಬೆಳಗಿಸಿದ್ದಾರೆ.
ಮೂಲತಃ ಹಿರಿಯೂರು ತಾಲೂಕು ಗಡಿಭಾಗ ಹಾಗೂ ಧರ್ಮಪುರ ಹೋಬಳಿಯ ಪಕ್ಕದ ಶಿರಾ ತಾಲೂಕಿನ ಬೆಜ್ಜಿಹಳ್ಳಿ ಗ್ರಾಮದವರು. ಆದರೆ ಈ ಗ್ರಾಮದಿಂದ ಬೇರೆ ಕಡೆಗೆ ಹೋಗಬೇಕೆಂದ್ರೆ ಬಸ್ ವ್ಯವಸ್ಥೆಯಿಲ್ಲ. ನಿತ್ಯ ಕಿಲೋಮೀಟರ್ ಗಟ್ಟಲೇ ಓಡಾಡಲು ಆಗುವುದಿಲ್ಲ. ಹೀಗಾಗಿ ಇಡೀ ಕುಟುಂಬ ಧರ್ಮಪುರ ಗ್ರಾಮಕ್ಕೆ ಬಂದು ನೆಲೆಸಿದರು.

ಬಡತನಕ್ಕೆ ಮಕ್ಕಳು ಹೆಚ್ಚು:
ಬಡತನಕ್ಕೆ ಮಕ್ಕಳು ಹೆಚ್ಚು ಎಂಬ ಮಾತಿದೆ. ಹಾಗೆ ತರಕಾರಿ ಮಾರುತ್ತಾ ಬದುಕಿನ ಬಂಡಿ ಸಾಗಿಸುತ್ತಿದ್ದ ಮಂಜುನಾಥಪ್ಪನವರಿಗೆ ಮೂವರು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗ. ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸುವುದು ಸವಾಲನ ಕೆಲಸವಾಗಿತ್ತು. ಈ ಸವಾಲನ್ನು ಮೆಟ್ಟಿ ನಿಂತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದ್ದ ಮಂಜುನಾಥ ಅವರ ಕನಸನ್ನು ವಿನೋದಮ್ಮ ಇಂದು ನನಸು ಮಾಡಿದ್ದಾರೆ.
ಸರ್ಕಾರಿ ಪ್ರಾಥಮಿಕ ಪಾಠ ಶಾಲೆ ಬೆಜ್ಜಿಹಳ್ಳಿಯಲ್ಲಿ 4ನೇ ತರಗತಿಯವರೆಗೆ ಪ್ರಾಥಮಿಕ ಶಿಕ್ಷಣ ಪಡೆದ ವಿನೋದಮ್ಮ, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಬೆಡತ್ತೂರು ಮೂರಾರ್ಜಿ ವಸತಿ ಶಾಲೆಯಲ್ಲಿ ಮುಂದಿನ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಪಡೆದರು.
ಇನ್ನು, ತುಮಕೂರಿನಲ್ಲಿ ಪದವಿ ಶಿಕ್ಷಣವನ್ನು ಪೂರೈಸಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಿಎಸ್ಸಿ ನರ್ಸಿಂಗ್ ಪದವಿ ಪಡೆದರು. ನಂತರ ಬೆಂಗಳೂರು ರಾಜಾಜಿನಗರದ ಇಎಸ್ ಐ ಆಸ್ಪತ್ರೆಯಲ್ಲಿ ನರ್ಸಿಂಗ್ ಕೆಲಸಕ್ಕೆ ಸೇರಿಕೊಂಡರು. ಕೆಲಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದರು.
ನಿರಂತರ ಪರಿಶ್ರಮದಿಂದ ಕಂಡ ಕನಸು ನನಸು:
2011 ಮತ್ತು 2014ರ ಕೆಪಿಎಸ್ ಸಿ ಪರೀಕ್ಷೆ ಬರೆದಿದ್ದ ವಿನೋದಮ್ಮ ಮುಖ್ಯ ಪರೀಕ್ಷೆ ಪಡೆದಿದ್ದರೂ, ಸಂದರ್ಶನದ ಅವಕಾಶ ಜಾರಿ ಹೋಗಿತ್ತು. ನಂತರ ಸ್ನೇಹಿತರ ಸಲಹೆ-ಸೂಚನೆ ಮೇರೆಗೆ ಒಂದಿಷ್ಟು ತರಬೇತಿ ಪಡೆದರು. ಹೀಗೆ ತರಬೇತಿ ಪಡೆಯುತ್ತಾ ಪಡೆಯುತ್ತಾ ಪಂಚಾಯಿತಿ ಇಲಾಖೆ ಅಧಿಕಾರಿ ಹಾಗೂ ಕಾರ್ಮಿಕ ಇಲಾಖೆಯಲ್ಲಿ ಎಸಿ ಆಗುವ ಆಸೆ ಚಿಗುರಿತು.
ಅಂದು ಚಿಗುರಿನ ಪುಟ್ಟ ಆಸೆ ಇಂದು ಬೃಹತ್ ಮರವಾಗಿ ಬೆಳೆದಿದೆ. ನಿರಂತರ ಪ್ರಯತ್ನದಿಂದ ವಿನೋದಮ್ಮರ ಶ್ರಮಕ್ಕೆ ಫಲ ಸಿಕ್ಕಿದೆ. ಅಂದುಕೊಂಡಂತೆ ಖಜಾನೆ ಇಲಾಖೆಯ ಅಧಿಕಾರಿಯಾಗುವ ಮೂಲಕ ತಮ್ಮ ಆಸೆಯ ಜೊತೆಗೆ ಹೆತ್ತವರ ಕನಸನ್ನು ವಿನೋದಮ್ಮ ನನಸು ಮಾಡಿದ್ದಾರೆ. ಇನ್ನು, ವಿನೋದಮ್ಮನ ಸಾಧನೆಗೆ ಪೋಷಕರು, ಸೋದರ ಮತ್ತು ಸೋದರಿಯರು ಸೇರಿದಂತೆ ಅನೇಕ ಬಂಧು-ಬಳಗ ಸಂತಸ ವ್ಯಕ್ತಪಡಿಸಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications