ಒಳ ಮೀಸಲಾತಿ ಜಾರಿ ಬಗ್ಗೆ ಸಿಎಂ ಏನ್ ಹೇಳಿದ್ರು ಅಂತಾ ಮಾಹಿತಿ ಬಿಚ್ಚಿಟ್ಟ ಎಚ್.ಆಂಜನೇಯ
ಚಿತ್ರದುರ್ಗ, ನವೆಂಬರ್, 07: ಆಂಜನೇಯ ನಿನ್ಯಾಕೆ ಚಿಂತೆ ಮಾಡ್ತಿಯಾ, ನನ್ನ ಮೇಲೆ ನಂಬಿಕೆ ಇಲ್ವಾ.? ನನಗೆ ರಾಜಕಾರಣಕ್ಕಿಂತಲೂ ಸಾಮಾಜಿಕ ನ್ಯಾಯ ಮುಖ್ಯ. ನಿನಗೆ ಗೊತ್ತು ತಾನೇ? ಒಳಮೀಸಲಾತಿ ಜಾರಿಗೊಳಿಸಿಯೇ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದ ಚೋರನೂರು ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ನನ್ನೊಂದಿಗೆ ಚರ್ಚೆ ನಡೆಸಿದ ವೇಳೆ ಈ ಭರವಸೆ ನೀಡಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆದಿಜಾಂಬ ಸಮುದಾಯಕ್ಕೆ ಆತಂಕ ಬೇಕಿಲ್ಲ. ನಿನಗೂ ಅಷ್ಟೇ, ಒಳಮೀಸಲಾತಿ ಜಾರಿಗೊಳಿಸುವುದು ನನ್ನ ಬದ್ಧತೆ ಆಗಿದೆ. ಆದ್ದರಿಂದಲೇ ಒಳಮೀಸಲಾತಿ ಜಾರಿಗೊಳಿಸಿದ ಸಂದರ್ಭ ಯಾವುದೇ ರೀತಿ ಕಾನೂನು ತೊಡಕು ಆಗದ ರೀತಿ ಎಚ್ಚರಿಕೆ ಹೆಜ್ಜೆ ಇಡಲು ದಿಟ್ಟ ಕ್ರಮ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ ಎಂದರು.
ಆದ್ದರಿಂದಲೇ ದತ್ತಾಂಶ ಪಡೆಯಲು ಆಯೋಗ ರಚಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗಿದೆ. ಆಯೋಗಕ್ಕೆ ನ್ಯಾಯಮೂರ್ತಿ ನೇಮಕ ವಿಳಂಬ ಆಗಿಲ್ಲ. ನಾಳೆಯೇ ನ್ಯಾಯಮೂರ್ತಿಯೊಬ್ಬರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡುವೆ. ಈ ವಿಷಯದಲ್ಲಿ ಯಾಕಪ್ಪ ನಿನಗೆ ಆತಂಕ ಎಂದು ಪ್ರಶ್ನೀಸಿದರು ಎಂದು ಆಂಜನೇಯ ತಿಳಿಸಿದ್ದಾರೆ.
ಎಸ್ಸಿಎಸ್ಪಿ, ಟಿಎಸ್ಪಿ ಕಾಯ್ದೆ ಜಾರಿಗೆ ತಂದಿದ್ದು, ಕಾಮಗಾರಿ ಗುತ್ತಿಗೆಯಲ್ಲಿ ಎಸ್ಸಿ, ಎಸ್ಟಿಗೆ ಮೀಸಲಾತಿ ಜಾರಿಗೊಳಿಸಿದ್ದು ಯಾರೂ? ನಾನೇ ತಾನೇ. ಅದೇ ರೀತಿ ಒಳ ಮೀಸಲಾತಿಯನ್ನು ನಾನೇ ಜಾರಿಗೊಳಿಸುವೆ ಎಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದ ಬಡವರ ಪರ ಆಡಳಿತ ನಡೆಸುತ್ತದೆ. ಅದರಲ್ಲೂ ನಾವೇ ಪ್ರಾಣಾಳಿಕೆಯಲ್ಲಿ ಹೇಳಿದ ಭರವಸೆ ಈಡೇರಿಸುವುದು ನಮ್ಮ ಪ್ರಥಮ ಆದ್ಯತೆ, ಬದ್ಧತೆ ಆಗಿದೆ. ಆದ್ದರಿಂದ ಆದಿಜಾಂಬವ ಸಮುದಾಯ ಯಾವುದೇ ರೀತಿ ಸಂಶಯ ಪಡುವುದು ಬೇಡ ಎಂದಿದ್ದಾರೆ ಎಂದು ಹೇಳಿದರು.
ರಾಜಕೀಯ ಕಾರಣಕ್ಕೆ, ಚುನಾವಣೆಯಲ್ಲಿ ಮತಗಳಿಕೆಗಾಗಿ ವಿಪಕ್ಷದವರು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಾರೆ. ಅದಕ್ಕೆಲ್ಲ ಗಮನ ಕೊಡುವುದು ಬೇಡ. ನನ್ನ ಮತ್ತು ಕಾಂಗ್ರೆಸ್ ಆಡಳಿತದಲ್ಲಿ ಅಹಿಂದ ವರ್ಗಕ್ಕೆ ಸದಾ ಒಳಿತನ್ನೇ ಮಾಡಲಾಗಿದೆ. ಮುಂದೆಯೂ ಮಾಡುತ್ತೇವೆ. ಎಂತಹ ಷಡ್ಯಂತ್ರ ನಡೆಸಿದರೂ ನಾನು ಹಾಗೂ ನನ್ನ ಕಾಂಗ್ರೆಸ್ ಪಕ್ಷ ನೊಂದ ಜನರ ಪರ ಕಾನೂನು, ಯೋಜನೆ ರೂಪಿಸುವಲ್ಲಿ ಹೆಜ್ಜೆ ಹಿಂದಿಡುವುದಿಲ್ಲ. ಈಗಾಗಲೇ ಉದ್ಯೋಗ ನೇಮಕಾತಿಗೆ ತಡೆ ಹಾಕಿದ್ದೇವೆ ಎಂದು ಹೇಳಿದ್ದಾರೆ ಎಂದರು.
ನಾವು ಒಳಮೀಸಲಾತಿಯನ್ನು ಶೀಘ್ರ ಜಾರಿಗೊಳಿಸುವ ಬದ್ಧತೆ ಹೊಂದಿದ್ದೇವೆ ಎಂದು ಸಿದ್ದರಾಮಯ್ಯ ಚರ್ಚೆ ವೇಳೆ ಅಭಯ ನೀಡಿದ್ದಾರೆ ಎಂದು ತಿಳಿಸಿದ್ದಾರೆ
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications