ಚಿತ್ರದುರ್ಗದಲ್ಲಿ ನಾಳೆ ಶೋಷಿತರ ಜಾಗೃತಿ ಸಮಾವೇಶ: ಇಲ್ಲಿದೆ ವಾಹನಗಳ ಸಂಚಾರ ಮಾರ್ಗದ ಬದಲಾವಣೆಯ ವಿವರ
ಚಿತ್ರದುರ್ಗ, ಜನವರಿ 27: ಇದೇ ಜನವರಿ 28ರಂದು ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಪೀಠದ ಬಳಿಯ ಖಾಲಿ ಜಾಗದಲ್ಲಿ ರಾಜ್ಯ ಮಟ್ಟದ ಶೋಷಿತರ ಜಾಗೃತಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸೇರಿದಂತೆ ವಿವಿಧ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಅಂದು ಬೆಳಗ್ಗೆ 06 ರಿಂದ ಸಂಜೆ 06 ಗಂಟೆಯವರೆಗೆ ಚಿತ್ರದುರ್ಗ ನಗರಕ್ಕೆ ವಿವಿಧೆಡೆಯಿಂದ ಆಗಮಿಸುವ ಭಾರಿ ಹಾಗೂ ಲಘು ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆಗೊಳಿಸಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶ ಹೊರಡಿಸಿದ್ದಾರೆ.

ಸಮಾವೇಶದಲ್ಲಿ ಪಾಲ್ಗೊಳ್ಳಲು ಜನವರಿ 28 ರಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನರು ವಾಹನಗಳಲ್ಲಿ ಆಗಮಿಸುವ ನಿರೀಕ್ಷೆಯಿದ್ದು, ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿರುವುದರಿಂದ, ಸಂಚಾರ ದಟ್ಟಣೆ ತಡೆಯುವ ನಿಟ್ಟಿನಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ಕೆಲವು ಸಂಚಾರ ಮಾರ್ಗದ ಬದಲಾವಣೆ ಮಾಡಲಾಗಿದೆ.
ದಾವಣಗೆರೆ ಮಾರ್ಗದಿಂದ ಬರುವ ವಾಹನಗಳು ಹೊಸ ಎನ್.ಹೆಚ್.-48 (ಬೈಪಾಸ್) ರಸ್ತೆಯ ಮೂಲಕ ರಾಷ್ಟ್ರೀಯ ಹೆದ್ದಾರಿ -13 ರ ಮೂಲಕ ಮುಂದುವರೆದು ಮದಕರಿಪುರ ಗ್ರಾಮದ ಬಳಿಯ ಸರ್ವಿಸ್ ರಸ್ತೆಯ ಮೂಲಕ ಇಳಿದು ಚಳ್ಳಕೆರೆ ರಸ್ತೆಯ ಮೂಲಕ ನಗರಕ್ಕೆ ಪ್ರವೇಶಿಸಬೇಕು.

ಹೊಸಪೇಟೆ ಮಾರ್ಗದಿಂದ (ಎನ್.ಹೆಚ್.-50) ಮೂಲಕ ಬರುವ ಪ್ರಯಾಣಿಕರ ವಾಹನಗಳು ಎನ್.ಹೆಚ್.-48 ರ ಬೈಪಾಸ್ ರಸ್ತೆ ಮುಖಾಂತರ ಮದಕರಿಪುರ ಗ್ರಾಮದ ಬಳಿಯ ರಸ್ತೆಯ ಮೂಲಕ ಇಳಿದು ಚಳ್ಳಕೆರೆ ರಸ್ತೆಯ ಮೂಲಕ ನಗರಕ್ಕೆ ಪ್ರವೇಶಿಸಬೇಕು.
ಶಿವಮೊಗ್ಗ ಹಾಗೂ ಭೀಮಸಮುದ್ರ ಮಾರ್ಗದಿಂದ ಬರುವ ವಾಹನಗಳು ಕಣಿವೆ ಕ್ರಾಸ್ ಮುಖಾಂತರ ನಗರಕ್ಕೆ ಪ್ರವೇಶಿಸಬೇಕು.
ಶಿವಮೊಗ್ಗ ಕಡೆಯಿಂದ ಚನ್ನಗಿರಿ ಮಾರ್ಗವಾಗಿ ಚಿತ್ರದುರ್ಗಕ್ಕೆ ಸಂಚರಿಸುವ ಸರಕು ಸಾಗಣೆಯ ಭಾರಿ ವಾಹನಗಳು ಚನ್ನಗಿರಿ ಪಟ್ಟಣದಿಂದ ಸಂತೆಬೆನ್ನೂರು ಕ್ರಾಸ್ ಮುಖಾಂತರ ಸಂಚರಿಸಿ, ಸಂತೆಬೆನ್ನೂರು ಮಾರ್ಗವಾಗಿ ಎನ್.ಹೆಚ್.-48 ರಸ್ತೆ ಮುಖಾತರ ಸಂಚರಿಸಬೇಕು.
ಮುರುಘರಾಜೇಂದ್ರ ಬೃಹನ್ಮಠದ ಮುಂಭಾಗದಿಂದ ಸೀಬಾರ ಅಂಡರ್ಪಾಸ್ ವರೆಗಿನ ಎನ್.ಹೆಚ್.-48 ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶದಲ್ಲಿ ತಿಳಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications