ಚಿತ್ರದುರ್ಗ: ಮಹಾತ್ಮಾ ಗಾಂಧಿಗೆ ದೇವಸ್ಥಾನ, ನಿತ್ಯ ಪೂಜೆ-ಪುನಸ್ಕಾರ
ಚಿತ್ರದುರ್ಗ, ಅಕ್ಟೋಬರ್ 02: ಮಹಾತ್ಮಾ ಗಾಂಧಿ ಅವರ ಪುತ್ಥಳಿಗಳು ಬಹುತೇಕ ಪ್ರತಿ ಊರಿನಲ್ಲೂ ಕಾಣಸಿಗುತ್ತವೆ. ಆದರೆ ಚಿತ್ರದುರ್ಗದಲ್ಲಿ ಮಹಾನ್ ಚೇತನನಿಗೆ ದೇಗುಲವನ್ನೇ ಕಟ್ಟಿಬಿಟ್ಟಿದ್ದಾರೆ.
ಕೋಟಿ ನಾಡು ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ಮಹಾತ್ಮಾ ಗಾಂಧಿ ಅವರಿಗೆ ದೇಗುಲ ನಿರ್ಮಿಸಿ ಪ್ರತಿ ನಿತ್ಯ ಪೂಜೆ ಸಲ್ಲಿಸಲಾಗುತ್ತಿದೆ. ಈ ಸಂಪ್ರದಾಯ ಹಲವು ವರ್ಷಗಳಿಂದ ನಡೆಯುತ್ತಲೇ ಬಂದಿದೆ.
ಗಾಂಧೀಜಿ ಜೀವನ ಪ್ರಯೋಗದ ಫಲವೇ ಇಂದಿನ ಸ್ವತಂತ್ರ ಭಾರತ
ತುರುವನೂರು ಗ್ರಾಮವು ಸ್ವತಂತ್ರ್ಯ ಹೋರಾಟದಲ್ಲಿ ತನ್ನದೇ ಛಾಪು ಮೂಡಿಸಿದ್ದ ಈ ಗ್ರಾಮ. ಜಿಲ್ಲೆಯವರೇ ಆದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ನೇತೃತ್ವದಲ್ಲಿ ಅನೇಕ ಸ್ವತಂತ್ರ್ಯ ಹೋರಾಟಗಳು ಇಲ್ಲಿ ನಡೆದಿವೆ.
ಇದೇ ತುರುವನೂರು ಗ್ರಾಮದಲ್ಲಿ ಈಚಲ ಮರದ ಚಳುವಳಿ ಕೂಡ ನಡೆದಿದೆ. ಹಾಗಾಗಿ ಈ ಗ್ರಾಮದಿಂದ ನೂರಾರು ಜನ ಸ್ವತಂತ್ರ ಹೋರಾಟಗಾರರು ಹೋರಾಟಕ್ಕೆ ಇಳಿದಿದ್ದಾರೆ. ಸ್ವಾತಂತ್ರ್ಯ ಹೋರಾಡಿದ ಒಂದು ಸವಿನೆನಪಿಗಾಗಿ ಈ ತುರುವನೂರು ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನೇತಾರವಾಗಿರುವ ಮಹಾತ್ಮ ಗಾಂಧೀಜಿಯವರ ದೇವಸ್ಥಾನವನ್ನೇ ನಿರ್ಮಿಸಲಾಗಿದೆ.
ಏಳು ಅಡಿ ಎತ್ತರದ ಗಾಂಧೀಜಿಯವರ ಕಂಚಿನ ಪ್ರತಿಮೆಯು ದೆಹಲಿಯಲ್ಲಿ ಬಿಟ್ಟರೆ, ಚಿತ್ರದುರ್ಗ ಈ ತುರುವನೂರು ಗ್ರಾಮದಲ್ಲಿ ಮಾತ್ರ ಇರುವುದು ಈ ದೇಗುಲದ ವಿಶೇಷ. ಏನೆ ಆಗಲಿ ಕೋಟೆ ನಾಡು ಚಿತ್ರದುರ್ಗದಲ್ಲೋಂದು ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿಯವರ ನೆನಪಿಗೊಂದು ದೇವಸ್ಥಾನ ನಿರ್ಮಾಣ ವಾಗಿರುವುದು ವಿಶೇಷವಾಗಿದೆ.