ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ
ಚಿತ್ರದುರ್ಗ, ಜುಲೈ 19: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ತಂದೆ, ತಾಯಿ, ಮಗ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ- ೪ರ ಗಣೇಶ ದೇವಸ್ಥಾನ ಬಳಿ ಈ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದ್ದು, ಜಯರಾಂ (28), ಸುಶೀಲಾ (26), ಪುತ್ರ ಆಕಾಶ್ (04) ಮೃತರು ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ರಾಜಸ್ಥಾನ ಮೂಲದವರಾಗಿದ್ದು, ರಾಜಸ್ಥಾನದಿಂದ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರು ಕಡೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ರಾಜಾರಾಂ (28), ಕರ್ಣ (08) ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ತಕ್ಷಣ ಐಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಹಿರಿಯೂರು ವೃತ್ತ ನಿರೀಕ್ಷಕ ರಾಘವೇಂದ್ರ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಐಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
English summary
The incident occurred on the National Highway- 4 in Chitradurga district where three people were killed when the car collided with a lorry.