ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ಸಾವು

ಚಿತ್ರದುರ್ಗ, ಜೂನ್ 15: ಆಂಬ್ಯುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ರಾತ್ರಿ ನಡೆದಿದೆ.

ಸೋಮವಾರ ರಾತ್ರಿ ವೇಳೆ ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ, ಚಿತ್ರದುರ್ಗ ನಗರ ಕಡೆಯಿಂದ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಮೂವರು ಯುವಕರ ದೇಹ ಒಂದೊಂದು ಕಡೆ ಬಿದ್ದಿವೆ. ಇದೇ ವೇಳೆ ಸ್ಕೂಟಿ ಸಂಪೂರ್ಣ ಜಖಂ ಆಗಿದೆ.

ಸಾವನ್ನಪ್ಪಿದ ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಅರುಣ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

A Terrible Accident In Chitradurga; Three Deaths On The Spot

ಮೃತಪಟ್ಟ ಮೂರು ಜನ ಯುವಕರು ಚಿತ್ರದುರ್ಗ ನಗರದವರಾಗಿದ್ದು, ಮೂವರು ಯುವಕರು ಹೊಳಲ್ಕೆರೆಯಿಂದ ಕೆಲಸ ಮುಗಿಸಿಕೊಂಡು ಚಿತ್ರದುರ್ಗ ಕಡೆ ಬರುವಾಗ, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆಂಬ್ಯುಲೆನ್ಸ್ ಹೋಗುವಾಗ ಈ ಘಟನೆ ನಡೆದಿದೆ. ಈ ಅಪಘಾತಕ್ಕೆ ಆಂಬ್ಯುಲೆನ್ಸ್ ಚಾಲಕ ಅತಿವೇಗ ಕಾರಣ ಎಂದು ತಿಳಿದು ಬಂದಿದೆ.

Recommended Video

      ಬ್ರಾಹ್ಮಣರನ್ನು ಅಪಮಾನಿಸಿದ್ದಕ್ಕೆ ಚೇತನ್ ವಿರುದ್ಧ FIR ದಾಖಲಿಸಿದ ಪೊಲೀಸ್ | Oneindia Kannada

      ವಿಷಯ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+