ವಿವಿ ಸಾಗರದಿಂದ ನಾಲೆಗಳಿಗೆ ನೀರು ಬಿಡಲು ಕ್ರಮ: ಶಾಸಕಿ ಪೂರ್ಣಿಮಾ
ಚಿತ್ರದುರ್ಗ, ಫೆಬ್ರವರಿ 26: ರೈತರ ಹೋರಾಟಗಳಿಗೆ ನನಗೆ ಬದ್ಧತೆ ಮತ್ತು ಕಾಳಜಿ ಇದೆ, ನಾನು ರೈತರ ಕೆಲಸದ ಬಗ್ಗೆ ಎಂದಿಗೂ ನಿರ್ಲಕ್ಷ್ಯ ತೋರುವುದಿಲ್ಲ ಎಂದು ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ತಾಲೂಕು ಕಛೇರಿ ಮುಂಭಾಗದಲ್ಲಿ ವಾಣಿ ವಿಲಾಸ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರಿಂದ ನಡೆಸುತ್ತಿರುವ ಎರಡನೇ ದಿನ ಹೋರಾಟ ಮುಂದುವರಿದ ಸ್ಥಳಕ್ಕೆ ಭೇಟಿ ನೀಡಿದ ಶಾಸಕಿ, ಪ್ರತಿಭಟನಾಗಾರರನ್ನು ಮನವೊಲಿಸಿ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮಾಡಿದರು.
ರೈತರ ಕೂಗಿಗೆ ನಾನು ಸದಾ ಬದ್ಧನಾಗಿರುತ್ತೇನೆ, ಸಮ್ಮಿಶ್ರ ಸರ್ಕಾರ ಇದ್ದಾಗ ಭದ್ರಾ ಮೇಲ್ದಂಡೆ ಬಗ್ಗೆ ರೈತರ ನಿಯೋಗದೊಂದಿಗೆ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಭೇಟಿ ಮಾಡಿ ಭದ್ರಾದಿಂದ ವಿವಿ ಸಾಗರಕ್ಕೆ ನೀರು ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು. ನಿಮಗೆ ವಿವಿ ಸಾಗರದಿಂದ ನಾಲೆಗಳಿಗೆ ನೀರು ಕೊಡಬಾರದು ಎನ್ನುವ ಉದ್ದೇಶ ನನಗಿಲ್ಲ ಎಂದರು.

ಆರೋಗ್ಯ ಸಚಿವ ಬಿ.ಶ್ರೀರಾಮುಲು ನವರು ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದು, ನೀರು ಹರಿಸುವಂತೆ ಸೂಚಿಸಿದ್ದಾರೆ. ನಾನು ಕೂಡ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು. ಇಂದು ಸಂಜೆ ಜಿಲ್ಲಾಧಿಕಾರಿಗಳ ಜೊತೆ ಸಭೆಯಲ್ಲಿ ಚರ್ಚಿಸಿ ನೀರು ಹರಿಸಲು ದಿನಾಂಕ ನಿಗದಿಯನ್ನು ಸಂಜೆಯೊಳಗೆ ಮಾಡಲಾಗುವುದು ಎಂದು ಹೇಳಿದರು.
ಒಂದು ವೇಳೆ ದಿನಾಂಕ ನಿಗದಿ ಆಗದಿದ್ದರೆ ನಾನು ಕೂಡ ನಿಮ್ಮ ಜೊತೆಗೆ ಪ್ರತಿಭಟನೆ ಕೂರುತ್ತೆನೆಂದು ಶಾಸಕರು ರೈತರಿಗೆ ಭರವಸೆ ನೀಡಿದರು. ಹಾಗಾಗಿ ಹೋರಾಟ ಹಿಂಪಡೆಯಿರಿ ಎಂದಾಗ, ಇದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದರು. ಸಂಜೆಯೊಳಗೆ ನೀರು ಹರಿಸಲು ದಿನಾಂಕ ನಿಗದಿ, ಇಲ್ಲವಾದರೆ ಶುಕ್ರವಾರ ಹಿರಿಯೂರು ಬಂದ್ ಮಾಡಲಾಗುವುದು ಎಂದು ರೈತರು ಪಟ್ಟುಹಿಡಿದರು. ಸಂಜೆಯೊಳಗೆ ದಿನಾಂಕ ನಿಗದಿ ಮಾಡಲಾಗುವುದು ಎಂದಾಗ ಶಾಸಕರ ಭರವಸೆಯೊಂದಿಗೆ ರೈತರು ಪ್ರತಿಭಟನೆ ಹಿಂಪಡೆದರು.

ಪ್ರತಿಭಟನಾ ರೈತರು ಜಿಲ್ಲಾಧಿಕಾರಿ ರೈತರ ವಿರೋಧಿಯಾಗಿದ್ದರೆ. ರೈತರ ಬಗ್ಗೆ ಎಳ್ಳಷ್ಟೂ ಕಾಳಜಿ ಅವರಿಗಿಲ್ಲ, ನಮ್ಮ ಜಿಲ್ಲೆಯಲ್ಲಿ ಅವರು ಕೆಲಸ ಮಾಡಲು ಯೋಗ್ಯರಿಲ್ಲ ಎಂದು ರೈತರು ಆರೋಪಿಸಿದರು. ಬರದ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಅಂತಹ ರೈತರ ವಿರೋಧಿ ಜಿಲ್ಲಾಧಿಕಾರಿ ನಮಗೆ ಬೇಡ, ಅವರನ್ನು ಕೂಡಲೇ ವರ್ಗಾವಣೆ ಮಾಡಿ, ಬೆಂಗಳೂರಿನಲ್ಲಿ ಯಾವುದಾದರೂ ಇಲಾಖೆಗೆ ಸೇರಿಸಿಕೊಳ್ಳಿ ನಮಗೆ ಅವರು ಬೇಡ. ರೈತರ ಬಗ್ಗೆ ಕಾಳಜಿ ಇರುವ ಜಿಲ್ಲಾಧಿಕಾರಿ ಬೇಕು ಎಂದು ಶಾಸಕಿಗೆ ಮನವಿ ಮಾಡಿದರು
ನೀರಾವರಿ ಇಲಾಖೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕು, ಅಲ್ಲಿರುವ ಅಧಿಕಾರಿಗಳಿಗೆ ನೀರಾವರಿ ಬಗ್ಗೆ ಏನು ಗೊತ್ತಿಲ್ಲ ಎಂದು ರೈತರು ಆರೋಪಿಸಿದರು. ಶಾಸಕರು ರೈತರಿಗೆ ಜ್ಯೂಸ್ ಕೊಡುವ ಮೂಲಕ ಹೋರಾಟವನ್ನು ಅಂತಿಮಗೊಳಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications