ವಿವಿ ಸಾಗರದಿಂದ ನಾಲೆಗಳಿಗೆ ನೀರು ಬಿಡಲು ಕ್ರಮ: ಶಾಸಕಿ ಪೂರ್ಣಿಮಾ
ಚಿತ್ರದುರ್ಗ, ಫೆಬ್ರವರಿ 26: ರೈತರ ಹೋರಾಟಗಳಿಗೆ ನನಗೆ ಬದ್ಧತೆ ಮತ್ತು ಕಾಳಜಿ ಇದೆ, ನಾನು ರೈತರ ಕೆಲಸದ ಬಗ್ಗೆ ಎಂದಿಗೂ ನಿರ್ಲಕ್ಷ್ಯ ತೋರುವುದಿಲ್ಲ ಎಂದು ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ತಾಲೂಕು ಕಛೇರಿ ಮುಂಭಾಗದಲ್ಲಿ ವಾಣಿ ವಿಲಾಸ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರಿಂದ ನಡೆಸುತ್ತಿರುವ ಎರಡನೇ ದಿನ ಹೋರಾಟ ಮುಂದುವರಿದ ಸ್ಥಳಕ್ಕೆ ಭೇಟಿ ನೀಡಿದ ಶಾಸಕಿ, ಪ್ರತಿಭಟನಾಗಾರರನ್ನು ಮನವೊಲಿಸಿ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮಾಡಿದರು.
ರೈತರ ಕೂಗಿಗೆ ನಾನು ಸದಾ ಬದ್ಧನಾಗಿರುತ್ತೇನೆ, ಸಮ್ಮಿಶ್ರ ಸರ್ಕಾರ ಇದ್ದಾಗ ಭದ್ರಾ ಮೇಲ್ದಂಡೆ ಬಗ್ಗೆ ರೈತರ ನಿಯೋಗದೊಂದಿಗೆ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಭೇಟಿ ಮಾಡಿ ಭದ್ರಾದಿಂದ ವಿವಿ ಸಾಗರಕ್ಕೆ ನೀರು ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು. ನಿಮಗೆ ವಿವಿ ಸಾಗರದಿಂದ ನಾಲೆಗಳಿಗೆ ನೀರು ಕೊಡಬಾರದು ಎನ್ನುವ ಉದ್ದೇಶ ನನಗಿಲ್ಲ ಎಂದರು.

ಆರೋಗ್ಯ ಸಚಿವ ಬಿ.ಶ್ರೀರಾಮುಲು ನವರು ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದು, ನೀರು ಹರಿಸುವಂತೆ ಸೂಚಿಸಿದ್ದಾರೆ. ನಾನು ಕೂಡ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು. ಇಂದು ಸಂಜೆ ಜಿಲ್ಲಾಧಿಕಾರಿಗಳ ಜೊತೆ ಸಭೆಯಲ್ಲಿ ಚರ್ಚಿಸಿ ನೀರು ಹರಿಸಲು ದಿನಾಂಕ ನಿಗದಿಯನ್ನು ಸಂಜೆಯೊಳಗೆ ಮಾಡಲಾಗುವುದು ಎಂದು ಹೇಳಿದರು.
ಒಂದು ವೇಳೆ ದಿನಾಂಕ ನಿಗದಿ ಆಗದಿದ್ದರೆ ನಾನು ಕೂಡ ನಿಮ್ಮ ಜೊತೆಗೆ ಪ್ರತಿಭಟನೆ ಕೂರುತ್ತೆನೆಂದು ಶಾಸಕರು ರೈತರಿಗೆ ಭರವಸೆ ನೀಡಿದರು. ಹಾಗಾಗಿ ಹೋರಾಟ ಹಿಂಪಡೆಯಿರಿ ಎಂದಾಗ, ಇದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದರು. ಸಂಜೆಯೊಳಗೆ ನೀರು ಹರಿಸಲು ದಿನಾಂಕ ನಿಗದಿ, ಇಲ್ಲವಾದರೆ ಶುಕ್ರವಾರ ಹಿರಿಯೂರು ಬಂದ್ ಮಾಡಲಾಗುವುದು ಎಂದು ರೈತರು ಪಟ್ಟುಹಿಡಿದರು. ಸಂಜೆಯೊಳಗೆ ದಿನಾಂಕ ನಿಗದಿ ಮಾಡಲಾಗುವುದು ಎಂದಾಗ ಶಾಸಕರ ಭರವಸೆಯೊಂದಿಗೆ ರೈತರು ಪ್ರತಿಭಟನೆ ಹಿಂಪಡೆದರು.

ಪ್ರತಿಭಟನಾ ರೈತರು ಜಿಲ್ಲಾಧಿಕಾರಿ ರೈತರ ವಿರೋಧಿಯಾಗಿದ್ದರೆ. ರೈತರ ಬಗ್ಗೆ ಎಳ್ಳಷ್ಟೂ ಕಾಳಜಿ ಅವರಿಗಿಲ್ಲ, ನಮ್ಮ ಜಿಲ್ಲೆಯಲ್ಲಿ ಅವರು ಕೆಲಸ ಮಾಡಲು ಯೋಗ್ಯರಿಲ್ಲ ಎಂದು ರೈತರು ಆರೋಪಿಸಿದರು. ಬರದ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಅಂತಹ ರೈತರ ವಿರೋಧಿ ಜಿಲ್ಲಾಧಿಕಾರಿ ನಮಗೆ ಬೇಡ, ಅವರನ್ನು ಕೂಡಲೇ ವರ್ಗಾವಣೆ ಮಾಡಿ, ಬೆಂಗಳೂರಿನಲ್ಲಿ ಯಾವುದಾದರೂ ಇಲಾಖೆಗೆ ಸೇರಿಸಿಕೊಳ್ಳಿ ನಮಗೆ ಅವರು ಬೇಡ. ರೈತರ ಬಗ್ಗೆ ಕಾಳಜಿ ಇರುವ ಜಿಲ್ಲಾಧಿಕಾರಿ ಬೇಕು ಎಂದು ಶಾಸಕಿಗೆ ಮನವಿ ಮಾಡಿದರು
ನೀರಾವರಿ ಇಲಾಖೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕು, ಅಲ್ಲಿರುವ ಅಧಿಕಾರಿಗಳಿಗೆ ನೀರಾವರಿ ಬಗ್ಗೆ ಏನು ಗೊತ್ತಿಲ್ಲ ಎಂದು ರೈತರು ಆರೋಪಿಸಿದರು. ಶಾಸಕರು ರೈತರಿಗೆ ಜ್ಯೂಸ್ ಕೊಡುವ ಮೂಲಕ ಹೋರಾಟವನ್ನು ಅಂತಿಮಗೊಳಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications