ತೆಂಗಿನಕಾಯಿ ಒಡೆಯುವ ವಿಚಾರಕ್ಕೆ ದೇವಸ್ಥಾನ ಪೂಜಾರಿಯಿಂದ ಭಕ್ತನ ಮೇಲೆ ಹಲ್ಲೆ
ಚಿತ್ರದುರ್ಗ, ಮಾರ್ಚ್ 7: ದೇವರಿಗೆ ತೆಂಗಿನಕಾಯಿ ಒಡೆದುಕೊಡು ಎಂದು ಕೇಳಿದ ಅದೇ ಗ್ರಾಮದ ವ್ಯಕ್ತಿಗೆ ದೇವಸ್ಥಾನದ ಪೂಜಾರಿ ತೆಂಗಿನಕಾಯಿ ಒಡೆಯುವ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ವ್ಯಾಪ್ತಿಯಲ್ಲಿ ಬರುವ ಟಿ.ಗೊಲ್ಲರಹಟ್ಟಿಯ ಗೊಲ್ಲಾಳಮ್ಮ ದೇವಿಯ ಜಾತ್ರೆ ಕಳೆದ ಎರಡ್ಮೂರು ದಿನಗಳಿಂದ ನಡೆದಿದೆ. ಭಾನುವಾರ ಕೊನೆಯ ದಿನವಾಗಿದ್ದು, ದೇವಿಯು ಗ್ರಾಮದೊಳಗೆ ಬರುವ ಸಂಪ್ರದಾಯವಿದೆ.
ಇದೇ ಸಮಯದಲ್ಲಿ ಗ್ರಾಮಸ್ಥರು ದೇವಸ್ಥಾನಕ್ಕೆ ಹೋಗಿ ಹಣ್ಣು-ಕಾಯಿ ಮಾಡಿಸಿ ಪೂಜೆ ಮಾಡಿಸಿಕೊಂಡು ಬರುವುದು ಪದ್ಧತಿ. ಅದರಂತೆ ಅದೇ ಗ್ರಾಮದ ಶೇಖರ್ ದೇವಸ್ಥಾನಕ್ಕೆ ಹೋಗಿ ಹಣ್ಣು ಕಾಯಿ ಪೂಜೆ ಮಾಡಿಕೊಡಿ ಎಂದು ಭರತ್ ಎನ್ನುವ ಪೂಜಾರಿಗೆ ಕೇಳಿದ್ದಾನೆ.

ಆದರೆ ಪೂಜಾರಿ ಭರತ್ ಭಕ್ತನನ್ನು ಹಿಂದೆ ಸರಿಯುವಂತೆ ಹೇಳಿದ್ದಾನೆ. ಶೇಖರ್ ಇನ್ನೊಮ್ಮೆ ಹಣ್ಣು-ಕಾಯಿ ಪೂಜೆ ಮಾಡಿಕೊಡುವಂತೆ ಕೇಳಿದ್ದಕ್ಕೆ, ಪೂಜೆ ಮಾಡಿಕೊಡುವ ಬದಲು ಕೈಲಿದ್ದ ಮಚ್ಚಿನಿಂದ ಏಕಾಏಕಿ ತಲೆಗೆ ಹಲ್ಲೆ ಮಾಡಿದ್ದಾನೆ.
ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಶೇಖರ್, ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪ್ರಕರಣ ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಘಟನೆಗೆ ಹಳೇ ವೈಷಮ್ಯ ಕಾರಣವೆಂದು ಸಾರ್ವಜನಿಕರ ವಲಯದಲ್ಲಿ ಮಾತು ಕೇಳಿ ಬಂದಿದ್ದು, ಸದ್ಯಕ್ಕೆ ದೇವಸ್ಥಾನ ಬಾಗಿಲು ಹಾಕಲಾಗಿದೆ. ದೇವಸ್ಥಾನ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ ಎಂದು ತಿಳಿದು ಬಂದಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications