ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಯುಷ್ಮಾನ್ ಭಾರತ್‌; ಚಿತ್ರದುರ್ಗದ ಸಾಧನೆಗೆ ಮೆಚ್ಚುಗೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮಾರ್ಚ್ 12; ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಚಿತ್ರದುರ್ಗ ಜಿಲ್ಲೆ ಸಾಧನೆ ಮಾಡಿದೆ. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಈ ಸಾಧನೆಗಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.

ಪ್ರತಿ ಮೂರು ತಿಂಗಳಿಗೊಮ್ಮೆ ಯೋಜನೆಯ ಪರಿಶೀಲನೆ ನಡೆಯುತ್ತದೆ. ಇದರಲ್ಲಿ ಎರಡು ಬಾರಿ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಮತ್ತು ಚಳ್ಳಕೆರೆ ಸಾರ್ವಜನಿಕ ತಾಲೂಕು ಆಸ್ಪತ್ರೆ ಮೊದಲ ಸ್ಥಾನವನ್ನುಗಳಿಸಿದೆ.

 ಆಯುಷ್ಮಾನ್ ಭಾರತ್ ನಕಲಿ ವೆಬ್ ಸೈಟ್ ಬಗ್ಗೆ ಎಚ್ಚರ! ಆಯುಷ್ಮಾನ್ ಭಾರತ್ ನಕಲಿ ವೆಬ್ ಸೈಟ್ ಬಗ್ಗೆ ಎಚ್ಚರ!

ಯೋಜನೆಯಡಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ರೋಗಿಗಳು ಸೇವೆ ಪಡೆದಿದ್ದಾರೆ. ಪ್ರಸಕ್ತ ಸಾಲಿನಲ್ಲಿ 7 ಸಾವಿರ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ. ತುಮಕೂರು, ಬೆಂಗಳೂರು ಗ್ರಾಮಂತರ, ಶಿವಮೊಗ್ಗ ಜಿಲ್ಲೆಗಳು ನಂತರದ ಸ್ಥಾನಗಳನ್ನು ಪಡೆದಿವೆ.

ಆಯುಷ್ಮಾನ್ ಭಾರತ- ‌ಆರೋಗ್ಯ ಕರ್ನಾಟಕ ಯೋಜನೆ ಅಡಿ 5 ಲಕ್ಷದ ತನಕ ಅನುಕೂಲಆಯುಷ್ಮಾನ್ ಭಾರತ- ‌ಆರೋಗ್ಯ ಕರ್ನಾಟಕ ಯೋಜನೆ ಅಡಿ 5 ಲಕ್ಷದ ತನಕ ಅನುಕೂಲ

Ayushman Bharat Arogya Karnataka Scheme Great Achievement By Chitradurga

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಎಬಿಎಆರ್‌ಕೆ ಅನುಷ್ಠಾನಕ್ಕೆ ಬಂದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಯೋಜನೆ ವ್ಯಾಪ್ತಿಯಲ್ಲಿವೆ. ಜಿಲ್ಲೆಯ 6 ಖಾಸಗಿ ಆಸ್ಪತ್ರೆಗಳು ಸಹ ಈ ಯೋಜನೆಯಲ್ಲಿ ಸೇವೆ ನೀಡುತ್ತಿವೆ.

ಬೇಸಿಗೆ ಆರಂಭ; ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು ಬೇಸಿಗೆ ಆರಂಭ; ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು

ಜಿಲ್ಲಾ ಆಸ್ಪತ್ರೆ 6000 ಫಲಾನುಭವಿಗಳಿಗೆ ಚಿಕಿತ್ಸೆ ನೀಡಿದೆ. ಚಳ್ಳಕೆರೆ ತಾಲೂಕು ಆಸ್ಪತ್ರೆ 3,500 ರೋಗಿಗಳಿಗೆ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆ 500 ಜನರಿಗೆ ಸೇವೆ ನೀಡಿವೆ. 2009ರಿಂದ ಇದುವರೆಗೆ ಜಿಲ್ಲೆಯಲ್ಲಿ 12 ಸಾವಿರಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಗಳನ್ನು ಪಡೆದಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ವಾರ್ಷಿಕ 5 ಲಕ್ಷದವರೆಗೆ ಚಿಕಿತ್ಸೆ ಪಡೆಯಲು ಅವಕಾಶವಿದೆ. ಬಡತನ ರೇಖೆಗಿಂತ ಮೇಲಿರುವ (ಬಿಪಿಎಲ್) ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷದವರೆಗೆ ಸೇವೆ ಲಭ್ಯವಿದೆ.

Recommended Video

ಕೋರೋನ ಹಾವಳಿ ಜಾಸ್ತಿ ಆದ ಕಾರಣ ! ಲಾಕ್ ಡೌನ್ | Oneindia Kannada

"ಆರೋಗ್ಯ ಮಿತ್ರ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ" ಎಂದು ಜಿಲ್ಲಾ ಸಂಯೋಜಕ ಎಬಿಎಆರ್‌ಕೆಯ ಡಾ. ಚಂದ್ರಶೇಖರರಾಜ್ ಮೆಚ್ಚುಗೆ ವ್ಯಕ್ತಪಡಿಸಿದರು.

English summary
Great achievement by Chitradurga district hospital and Challakere taluk hospital under Ayushman Bharat Arogya Karnataka scheme. District in top in two times during the three months progress meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X