ಮೊಳಕಾಲ್ಮೂರು ರಸ್ತೆ ಅಗಲೀಕರಣ; 30 ಕೋಟಿ ರೂ. ಯೋಜನೆಗೆ ಚಾಲನೆ
ಚಿತ್ರದುರ್ಗ, ಜನವರಿ 02; ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದ ಮುಖ್ಯರಸ್ತೆ ಅಗಲೀಕರಣ ಕಾಮಗಾರಿಗೆ ಸ್ಥಳೀಯ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಭಾನುವಾರ ಚಾಲನೆ ನೀಡಿದರು. ಸುಮಾರು 30 ಕೋಟಿ ರೂ.ಗಳ ಯೋಜನೆ ಇದಾಗಿದೆ.
"ಮೊಳಕಾಲ್ಮುರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ 544-ಡಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುತ್ತದೆ. ಮೊಳಕಾಲ್ಮುರು ಪಟ್ಟಣವನ್ನು ಸುಂದರ ಪಟ್ಟಣವನ್ನಾಗಿ ನಿರ್ಮಿಸುವ ಗುರಿ ಹೊಂದಲಾಗಿದೆ" ಎಂದು ಸಚಿವರು ಹೇಳಿದರು.
"ಮೊಳಕಾಲ್ಮುರು ಸುಂದರ ಪಟ್ಟಣವಾಗಬೇಕು ಎಂಬುದು ಪಟ್ಟಣದ ಜನರ ಬಹುದಿನಗಳ ಬೇಡಿಕೆಯಾಗಿದೆ. ರಸ್ತೆಯ ಅಗಲೀಕರಣ ಮಾಡಬೇಕು ಎಂಬುದು ಹಲವಾರು ಜನಪ್ರತಿನಿಧಿಗಳ ಒತ್ತಾಯವಾಗಿತ್ತು. ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಮುಂಚಿತವಾಗಿಯೇ ಆಗಬೇಕಿತ್ತು. ಆದರೆ ಹಲವಾರು ಕಾರಣಗಳಿಂದ ಕಾಮಗಾರಿ ತಡವಾಗಿ ಆರಂಭವಾಗಿದೆ" ಎಂದರು.

"ಕೇಂದ್ರ ಸರ್ಕಾರದಲ್ಲಿ ನಿತಿನ್ ಗಡ್ಕರಿ ಸಾರಿಗೆ ಮಂತ್ರಿಗಳಾದ ನಂತರ ದಿನವೊಂದಕ್ಕೆ 38 ಕಿ. ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿವೆ. ಮುಂಬರುವ ದಿನಗಳಲ್ಲಿ ದಿನಕ್ಕೆ 45 ಕಿ. ಮೀ. ರಸ್ತೆ ನಿರ್ಮಿಸಬೇಕು ಎಂಬ ಚಿಂತನೆ ಇದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಇದರ ಜೊತೆಗೆ ಉದ್ಯೋಗಾವಕಾಶ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ" ಎಂದು ತಿಳಿಸಿದರು.
"ನಮ್ಮದು ಡಬಲ್ ಇಂಜಿನ್ ಸರ್ಕಾರ ಇದ್ದಂತೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇದ್ದರೆ, ರಾಜ್ಯದಲ್ಲಿ ಕಾಮನ್ ಮ್ಯಾನ್ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದೆ. ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲೂ ಡಬಲ್ ಇಂಜಿನ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಒಂದು ಇಂಜಿನ್ ಹಾಗೂ ಜಿಲ್ಲೆಯ ಬಿ. ಶ್ರೀರಾಮುಲು ಒಂದು ಇಂಜಿನ್ ಆಗಿದ್ದು, ಜಿಲ್ಲೆಯಲ್ಲೂ ಕೂಡ ಡಬಲ್ ಇಂಜಿನ್ ಸರ್ಕಾರ ನಡೆಯುತ್ತಿದೆ" ಎಂದರು.
"ಭದ್ರಾ ಮೇಲ್ದಂಡೆ ಯೋಜನೆಯಡಿ ರೂ. 614 ಕೋಟಿ ವೆಚ್ಚದಲ್ಲಿ 78 ಕೆರೆಗಳನ್ನು ತುಂಬಿಸಲು ಕ್ರಮವಹಿಸಲಾಗಿದೆ. ಮೊಳಕಾಲ್ಮುರು ಕ್ಷೇತ್ರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಲು ಕ್ಷೇತ್ರದಲ್ಲಿ 200 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಇದರ ಜೊತೆಗೆ ತುಂಗಾಭದ್ರಾ ಹಿನ್ನೀರಿನಿಂದ ಕ್ಷೇತ್ರದ ಎಲ್ಲ ಹಳ್ಳಿಗಳಿಗೂ 24 ಗಂಟೆಯೂ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮವಹಿಸಲಾಗಿದೆ" ಎಂದು ಸಚಿವರು ವಿವರಣೆ ನೀಡಿದರು.
"ಈಗಾಗಲೇ ಕೆಲಸ ಪೂರ್ಣವಾಗಿದ್ದು, 10 ಕಿ. ಮೀ. ಬಾಕಿ ಇದೆ. ಆದಷ್ಟು ಶೀಘ್ರದಲ್ಲಿ ಈ ಭಾಗದ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು. ಮೊಳಕಾಲ್ಮುರು ಪಟ್ಟಣದಲ್ಲಿ ಸುಸಜ್ಜಿತ ಬಸ್ ನಿಲ್ದಾಣಕ್ಕಾಗಿ ಈಗಾಗಲೇ ಒಂದು ಎಕರೆ ಜಮೀನು ಕೊಟ್ಟಿದ್ದು, ಅನುದಾನ ಮಂಜೂರಾತಿ ನೀಡಿ, ಬಸ್ನಿಲ್ದಾಣಕ್ಕೆ ಕ್ರಮಕೈಗೊಳ್ಳಲಾಗುವುದು" ಎಂದು.
"ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಪರಿಶಿಷ್ಟ ಪಂಗಡದವರಿಗೆ ಪ್ರತ್ಯೇಕವಾದ ಸಚಿವಾಲಯವನ್ನು ಸ್ಥಾಪಿಸಿ ಪ್ರಥಮ ಬಾರಿಗೆ ನನ್ನನ್ನು ಪರಿಶಿಷ್ಟ ವರ್ಗದ ಮಂತ್ರಿಯನ್ನಾಗಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪರಿಶಿಷ್ಟ ವರ್ಗದವರ ಮೀಸಲಾತಿ ಹೆಚ್ಚಳಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು" ಎಂದು ತಿಳಿಸಿದರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ. ನಾರಾಯಣಸ್ವಾಮಿ ಮಾತನಾಡಿ, "ಮೊಳಕಾಲ್ಮುರು ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣದ ಜೊತೆಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ, ಪಾದಚಾರಿ ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಿ ಮೊಳಕಾಲ್ಮುರು ಪಟ್ಟಣವನ್ನು ರಾಜಧಾನಿ ಬೆಂಗಳೂರಿನಂತೆ ಅಭಿವೃದ್ಧಿ ಪಡಿಸಲಾಗುವುದು" ಎಂದು ಭರವಸೆ ನೀಡಿದರು.
"ಜಿಲ್ಲೆಯಲ್ಲಿ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆಯಲ್ಲಿ ಅತ್ಯಂತ ಕಡಿಮೆ ಪ್ರಗತಿ ಸಾಧಿಸಲಾಗಿದೆ. ಕೋವಿಡ್ ಎದುರಿಸಲು ತಾಲ್ಲೂಕಿನ ಜನರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು. ಕೋವಿಡ್ ಲಸಿಕೆಯನ್ನು ತಿರಸ್ಕಾರ ಮಾಡಬೇಡಿ. ಲಸಿಕೆ ಪಡೆಯಬೇಕು" ಎಂದು ಸಚಿವರು ಮನವಿ ಮಾಡಿದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications