ಬಳ್ಳಾರಿಯ ಅಂತರ್ಜಾತಿ ಪ್ರೇಮಿಗಳಿಗೆ ವಿವಾಹ ಮಾಡಿಸಿದ ಚಳ್ಳಕೆರೆ ಗ್ರಾಮಸ್ಥರು
ಚಿತ್ರದುರ್ಗ, ಫೆಬ್ರವರಿ 27: ಯುವಕ-ಯುವತಿ ಜಾತಿ, ಬೇಧಗಳ ಎಲ್ಲೆ ಮೀರಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು, ಆದರೆ ಪೋಷಕರು ಮಾತ್ರ ಪ್ರೇಮಿಗಳು ಒಂದಾಗುವುದಕ್ಕೆ ವಿರೋಧ ಮಾಡಿದ್ದರು, ಹೀಗಾಗಿ ಮನೆ ಬಿಟ್ಟು ಬಂದ ಜೋಡಿಹಕ್ಕಿಗೆ ಬೇರೊಂದು ಗ್ರಾಮದ ಜನರೆಲ್ಲಾ ಸೇರಿ ಮದುವೆ ಮಾಡಿ ಶುಭ ಹಾರೈಸಿದ್ದಾರೆ.
ಕೋಟೆನಾಡು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದುರ್ಗಾವರ ಎಂಬ ಪುಟ್ಟ ಗ್ರಾಮದಲ್ಲಿ ಯುವಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಆದರೆ ಜೋಡಿ ಆ ಗ್ರಾಮದವರೇ ಅಲ್ಲ, ಇವರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಗ್ರಾಮದ ಪ್ರೇಮಿಗಳು.
ಇಂಜಿನಿಯರಿಂಗ್ ಓದುತ್ತಿರೋ ನಂದಿನಿ ಹಾಗೂ ಪದವಿ ಮುಗಿಸಿ ಜೀವನೋಪಾಯಕ್ಕಾಗಿ ಫೈನಾನ್ಸ್ ನಡೆಸುತ್ತಿರೋ ಸಂದೀಪ್ ನಡುವೆ ಜಾತಿಯ ಎಲ್ಲೆ ಮೀರಿ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಈ ಜೋಡಿಹಕ್ಕಿಗೆ ಯುವತಿಯ ಮನೆಯವರ ವಿರೋಧ ಎದುರಾಗಿತ್ತು.

ಹೀಗಾಗಿ ಮನೆ ಬಿಟ್ಟು ದುರ್ಗಾವರ ಗ್ರಾಮಕ್ಕೆ ಬಂದು ಸಂಬಂಧಿಕರು ಹಾಗು ಗ್ರಾಮಸ್ಥರ ಸಹಕಾರದಿಂದ ಸಪ್ತಪದಿ ತುಳಿದಿದ್ದು, ನಾವಿಬ್ಬರೂ ಚೆನ್ನಾಗಿ ಜೀವನ ನಡೆಸುತ್ತೇವೆ, ನಮಗೆ ತೊಂದರೆ ಕೊಡಬೇಡಿ ಅಂತ ಪೋಷಕರಲ್ಲಿ ಮನವಿ ಮಾಡಿದ್ದಾರೆ.
ಇನ್ನು ದುರ್ಗಾವರ ಗ್ರಾಮಕ್ಕೆ ಬಂದ ಪ್ರೇಮಿಗಳಿಗೆ ಗ್ರಾಮದಲ್ಲಿರೋ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಮಾಡಿಸಿದ್ದಾರೆ. ನಮ್ಮನ್ನೇ ನಂಬಿ ಬಂದ ಪ್ರೇಮಿಗಳು ನಮಗೆ ಮದುವೆ ಮಾಡಿಸಿ ಎಂದು ಕೇಳಿಕೊಂಡರು, ಹೀಗಾಗಿ ನಾವೆಲ್ಲಾ ನಿಂತು ಮದುವೆ ಮಾಡಿಸಿ ಪ್ರೇಮಿಗಳನ್ನು ಒಂದು ಮಾಡಿದ್ದೇವೆ, ಅವರು ಮುಂದೆ ಚೆನ್ನಾಗಿ ಬಾಳುವಂತಾಗಲಿ ಎಂದು ಗ್ರಾಮಸ್ಥ ಶಂಕ್ರಪ್ಪ ಎನ್ನುವವರು ಶುಭ ಹಾರೈಸಿದ್ದಾರೆ.

ಮನೆಯವರ ವಿರೋಧವನ್ನೂ ಲೆಕ್ಕಿಸದೆ ಮನೆ ಬಿಟ್ಟು ಬಂದ ಬಳ್ಳಾರಿ ಜೋಡಿ ದುರ್ಗಾವರ ಗ್ರಾಮಸ್ಥರ ನೆರವಿನಿಂದ ಕೋಟೆನಾಡಿನಲ್ಲಿ ಸಪ್ತಪದಿ ತುಳಿದು ಹೊಸ ಜೀವನ ಆರಂಭಿಸಿದ್ದಾರೆ. ಜಾತಿ, ಧರ್ಮ, ಮೇಲು, ಕೀಳು ಎಂಬದನ್ನು ಬದಿಗೊತ್ತಿ ಒಂದಾಗಿರೋ ಈ ಪ್ರೇಮಜೋಡಿಯನ್ನ ಪೋಷಕರು ಒಪ್ಪಿಕೊಳ್ಳುತ್ತಾರೆಯೇ ಎಂಬುದನ್ನು ನೋಡಬೇಕಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications