ಚಿತ್ರದುರ್ಗದ ಮುರುಘಾಮಠದಿಂದ ನಟ ಪುನೀತ್ ರಾಜಕುಮಾರ್ ರಿಗೆ ಬಸವಶ್ರೀ ಪ್ರಶಸ್ತಿ
ಚಿತ್ರದುರ್ಗ, ನವೆಂಬರ್ 4: ಖ್ಯಾತನಟ ಪುನೀತ್ ರಾಜಕುಮಾರ್ ಹೃದಯಾಘಾತದಿಂದ ಇತ್ತೀಚೆಗಷ್ಟೇ ವಿಧಿವಶರಾಗಿದ್ದು, ರಾಜ್ಯ ಸೇರಿದಂತೆ ಇಡೀ ಚಿತ್ರರಂಗ ಶೋಕಸಾಗರದಲ್ಲಿದೆ. ಲಕ್ಷಾಂತರ ಅಭಿಮಾನಿ ಬಳಗವನ್ನು ಅಗಲಿರುವ ಪವರ್ ಸ್ಟಾರ್ ಅವರಿಗೆ ಚಿತ್ರದುರ್ಗದ ಮುರುಘಾ ಮಠದಿಂದ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
2022ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಪುನೀತ್ ರಾಜಕುಮಾರ್ ಅವರಿಗೆ ನೀಡುವುದಾಗಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಘೋಷಿಸಿದ್ದಾರೆ. ಮುಂದಿನ ವರ್ಷ 2022ರ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಚಿತ್ರದುರ್ಗದ ಮುರುಘಾಮಠ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಬಸವಶ್ರೀ ಪ್ರಶಸ್ತಿಯ ಮೊತ್ತ ಐದು ಲಕ್ಷ ರೂ ನಗದು ಹಾಗೂ ಸ್ಮರಣಿಕೆ ನೀಡಿ ಒಳಗೊಂಡಿದೆ.

ಶಿವರಾಜಕುಮಾರ್ ಅವರಿಗೂ ಆಹ್ವಾನ:
ಬಸವಶ್ರೀ ಪ್ರಶಸ್ತಿಯ ಮೊತ್ತ ಐದು ಲಕ್ಷ ರೂಪಾಯಿಗಳ ಜೊತೆಗೆ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅವರನ್ನೂ ಆಹ್ವಾನಿಸಲಾಗುವುದು ಎಂದು ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ತಿಳಿಸಿದ್ದಾರೆ.
ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪದ್ಮಶ್ರೀ ಗೌರವ ನೀಡಬೇಕೆಂಬ ಒತ್ತಾಯವೂ ಕೇಳಿ ಬರುತ್ತಿದೆ.
''ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ'' ಎಂದು ಸಿದ್ದರಾಮಯ್ಯ ಇಂದು ಟ್ವೀಟ್ ಮಾಡಿದ್ದರು, ಸಿದ್ದರಾಮಯ್ಯ, ಟ್ವೀಟ್ಗೆ ಹಲವರು ಸಮ್ಮತಿ ಸೂಚಿಸಿದ್ದರು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ಸಹ ಒತ್ತಾಯ ಕೇಳಿಬಂತಾದರೂ, ಮರಣೋತ್ತರವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿಯಮಾವಳಿಗಳು ಹಾಗೂ ಕೋರ್ಟ್ ಆದೇಶಗಳು ಅಡ್ಡಿ ಬರುತ್ತದೆಯೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications