ಚಿತ್ರದುರ್ಗದಲ್ಲಿ ರಾಜಾರೋಷವಾಗಿ ಓಡಾಡಿದ ಕರಡಿ
ಚಿತ್ರದುರ್ಗ, ಮೇ 13: ಮಹಾಮಾರಿ ಕೊರೊನಾ ವೈರಸ್ ನಡುವೆ ಕಾಡು ಪ್ರಾಣಿಗಳು ನಾಡಿನ ಕಡೆ ಮುಖ ಮಾಡಿವೆ. ಬಹುತೇಕ ಕಾಡುಪ್ರಾಣಿಗಳು ಆಹಾರವನ್ನು ಹುಡುಕಿಕೊಂಡು ನಗರ, ಹಳ್ಳಿ, ಪಟ್ಟಣಗಳ ಕಡೆ ಮುಖ ಮಾಡಿದ್ದು, ಇದೀಗ ಚಿತ್ರದುರ್ಗದಲ್ಲಿ ಕರಡಿಯೊಂದು ರಾಜಾರೋಷವಾಗಿ ಓಡಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಚಿತ್ರದುರ್ಗ ನಗರದ ಕಾಮನಬಾವಿ ಬಡಾವಣೆ ಮತ್ತು ಏಕನಾಥೇಶ್ವರಿ ಪಾದಗುಡಿ, ಚಿಕ್ಕಪೆಟೆ ಮತ್ತು ದೊಡ್ಡ ಪೇಟೆಯಲ್ಲಿ ಕರಡಿಗಳು ಅಡ್ಡಾಡಿರುವ ದೃಶ್ಯ ಕಂಡು ಬಂದಿದ್ದು, ಕರಡಿ ಓಡಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಆಗಾಗ ಕರಡಿ, ಆನೆ, ಚಿರತೆ ಇತರೆ ಕಾಡುಪ್ರಾಣಿಗಳು ನಾಡಿನ ಕಡೆ ಲಗ್ಗೆ ಇಡುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿ ಮಾಡಿದೆ. ಪದೇ ಪದೇ ಕಾಡುಪ್ರಾಣಿಗಳು ಜಿಲ್ಲೆಯೊಳಗೆ ಬರುತ್ತಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.












Click it and Unblock the Notifications