ರಾತ್ರೋರಾತ್ರಿ ಹಿರಿಯೂರು ನಗರದಲ್ಲಿ ಕರಡಿ ಪ್ರತ್ಯಕ್ಷ-ಆತಂಕಗೊಂಡ ಜನತೆ
ಹಿರಿಯೂರು, ಮಾರ್ಚ್, 16: ಕೆಲವು ತಿಂಗಳುಗಳ ಹಿಂದೆಯಷ್ಟೇ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡು ಜನರನ್ನು ಬೆಚ್ಚಿಬೀಳುವಂತೆ ಮಾಡಿತ್ತು. ಮತ್ತೊಂದೆಡೆ ಈ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಹರಸಾಹಸವನ್ನೇ ಪಟ್ಟಿದ್ದರು. ಅದರಂತೆಯೇ ಹಿರಿಯೂರು ನಗರದೊಳಗೆ ಕರಡಿಯೊಂದು ಓಡಾಡಿದ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದ್ದು, ನಗರದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.
ಕರಡಿ ಓಡಾಡುವ ದೃಶ್ಯ ಸೆರೆ: ಕಾಡಿನಲ್ಲಿರಬೇಕಾದ ಕಾಡು ಪ್ರಾಣಿಗಳು ನೀರು, ಆಹಾರವನ್ನು ಹುಡುಕಿಕೊಂಡು ಇದೀಗ ನಗರ, ಗ್ರಾಮ ಹಾಗೂ ಹಳ್ಳಿಗಳ ಒಳಗೆ ಲಗ್ಗೆ ಇಡುತ್ತಿವೆ. ಅದರಂತೆಯೇ ಹಿರಿಯೂರು ನಗರದೊಳಗೆ ಕರಡಿಯೊಂದು ಓಡಾಡಿವರ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ಅನಾಹುತ ತಪ್ಪಿಸುವಂತೆ ಆಗ್ರಹ: ನಗರದ ಹುಳಿಯಾರಸ್ತೆಯ ಹರಿಶ್ಚಂದ್ರ ಘಾಟ್, ಲಕ್ಷ್ಮಮ್ಮ ಬಡಾವಣೆ, ಚಾನಲ್ ಬಳಿ ಕರಡಿ ಓಡಾಡಿರುವ ದೃಶ್ಯ ಜನರಲ್ಲಿ ಆತಂಕ ಮೂಡಿಸಿದೆ. ಕಾಡಿನಲ್ಲಿ ಇರಬೇಕಾದ ಪ್ರಾಣಿಗಳು ನಗರದೊಳಗೆ ಲಗ್ಗೆ ಇಟ್ಟಿದ್ದು, ಇದರಿಂದ ಮಕ್ಕಳು ವೈಯೋ ವೃದ್ಧರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನಯ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿ ಹಿಡಿದು ಅನಾಹುತ ತಪ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಾಡಿಗೆ ಬಂದ ಮರಿಯಾನೆ: ಅಂದಾಜು 3-4 ತಿಂಗಳ ಆನೆ ಮರಿಯೊಂದು ಅಮ್ಮನನ್ನು ಅರಸುತ್ತಾ ನಾಡಿಗೆ ಬಂದ ಪ್ರಸಂಗ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ಆಸನೂರಿನ ಅರೆಪಾಳ್ಯದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಕಳೆದ 5 ದಿನಗಳ ಹಿಂದೆ ತಮಿಳುನಾಡಿನ ಬಣ್ಣಾರಿ ಸಮೀಪ ಅನಾರೋಗ್ಯದಿಂದ ಹೆಣ್ಣಾನೆ ಅಸುನೀಗಿದ್ದು, ಆ ತಾಯಿ ಆನೆಯ ಮರಿ ಇದಾಗಿಬಹುದು ಎಂದು ಅರಣ್ಯ ಇಲಾಖೆ ಶಂಕಿಸಿದೆ. ತಾಯಿ ಅರಸುತ್ತಾ ಬಂದ ಆನೆಮರಿ ಅರೆಪಾಳ್ಯ ಗ್ರಾಮದಲ್ಲಿ ಅಡ್ಡಾಡಿದ್ದು, ಅಲ್ಲಿನ ಜನರು ಆನೆ ಕಂಡು ಚಿನ್ನಾಟ ಆಡಿದ್ದಾರೆ. ಬಳಿಕ ಮಾಹಿತಿ ಆಧರಿಸಿ ಆಸನೂರು ಅರಣ್ಯಾಧಿಕಾರಿಗಳು ಮರಿಯನ್ನು ರಕ್ಷಿಸಿ ತಮ್ಮ ಕಚೇರಿಗೆ ಕರೆತಂದು ವೈದ್ಯರಿಂದ ಆರೈಕೆ ಮಾಡಿಸಿದ್ದರು.
ಇನ್ನು, ಆನೆಮರಿಯನ್ನು ಬೇರೆ ಆನೆ ಗುಂಪಿಗೆ ಬಿಡುವುದೋ ಇಲ್ಲವೇ ಮೃಗಾಲಯಕ್ಕೆ ರವಾನೆ ಮಾಡುವ ಬಗ್ಗೆ ನಿರ್ಧರಿಸಿಲ್ಲ ಎಂದು ತಿಳಿದುಬಂದಿತ್ತು.
25,000 ರೂಪಾಯಿ ದಂಡ: ಇತ್ತೀಚೆಗಷ್ಟೇ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮ ಮೀರಿ ಕಾರು ನಿಲ್ಲಿಸಿ ಕೆಳಗಿಳಿದು ಆನೆ ದಾಳಿಗೆ ಒಳಗಾಗಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ವಿಚಾರಣೆ ನಡೆಸಿ 25,000 ರೂಪಾಯಿ ದಂಡ ವಿದ್ಯಾರ್ಥಿಗಳು ವಿಧಿಸಿತ್ತು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೂಲೆಹೊಳೆ ವಲಯದಲ್ಲಿ ಫೆಬ್ರವರಿ 1ರಂದು ಕಾರು ಬಿಟ್ಟು ಮೂತ್ರ ವಿಸರ್ಜನೆಗೆಂದು ಇಳಿದಿದ್ದ ಇಬ್ಬರ ಮೇಲೆ ಏಕಾಏಕಿ ಕಾಡಾನೆ ಅಟ್ಟಾಡಿಸಿದ ಘಟನೆ ನಡೆದಿತ್ತು.
ಕಾರೊಂದರಿಂದ ಇಳಿದ ಇಬ್ಬರನ್ನು ಹೆಣ್ಣಾನೆಯೊಂದು ಅಟ್ಟಿಸಿಕೊಂಡು ಬರುತ್ತದೆ. ಇಬ್ಬರ ಪೈಕಿ ಒಬ್ಬರು ಕೆಳಗೆ ಬೀಳುತ್ತಾರೆ. ಆನೆ, ಅವರನ್ನು ಕಾಲಿನಲ್ಲಿ ತುಳಿಯಲು ಯತ್ನಿಸುತ್ತದೆ. ಅದೃಷ್ಟವಶಾತ್ ಅದರ ಕಾಲು ಅವರ ದೇಹಕ್ಕೆ ತಾಗುವುದಿಲ್ಲ. ಹೆದ್ದಾರಿಯಲ್ಲಿ ಸಂಚರಿಸುವಾಗ ಆನೆ ಸೇರಿದಂತೆ ಇತರ ಪ್ರಾಣಿಗಳು ರಸ್ತೆ ಬದಿಯಲ್ಲಿ ಕಾಣಸಿಗುತ್ತವೆ. ಆಗ ವಾಹನಗಳನ್ನು ನಿಲ್ಲಿಸಬಾರದು ಎಂಬ ಸೂಚನೆ ಇದ್ದರೂ, ನಿಯಮ ಮೀರಿ ವಾಹನಗಳ ನಿಲ್ಲಿಸಿ ಪ್ರಾಣಿ ಪೋಟೋ ತೆಗೆಯಲು ಮುಂದಾಗುತ್ತಾರೆ. ಈ ಹಿಂದೆಯೂ ಈ ಹೆದ್ದಾರಿಯಲ್ಲಿ ಇಂತಹ ಪ್ರಕರಣಗಳು ನಡೆದಿದ್ದವು.
ಮಾಧ್ಯಮದಲ್ಲಿ ವರದಿ ಆಧರಿಸಿ ಬಂಡೀಪುರ ಎ.ಸಿ.ಎಫ್ ಹಾಗೂ ಮೂಲೆಹೊಳೆ ಆರ್.ಎಫ್.ಓ ವಿಚಾರಣೆ ನಡೆಸಿ ಆಂದ್ರಪ್ರದೇಶದ ವಿಶಾಖಪಟ್ಟಣಂ ನಿವಾಸಿಗಳಿಗೆ 25 ಸಾವಿರ ರೂಪಾಯಿ ದಂಡ ಹಾಕಿದ್ದಾರೆ ಎಂದು ಸಿ.ಎಫ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದರು.
ಭೂಪೇಂದ್ರ ಯಾದವ್ ಹೇಳಿದ್ದೇನು?: ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾನವ ಹಾಗೂ ವನ್ಯಜೀವಿ ಸಂಘರ್ಷ ಕುರಿತು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅರಣ್ಯಧಿಕಾರಿಗಳಿಂದ ಮಾಹಿತಿ ಪಡೆದರು. ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾಹಿತಿ ಪಡೆದ ನಂತರ ಮಾತನಾಡಿದ ಅವರು, ಅರಣ್ಯ ಸಚಿವರು, ಕಾಡು ಪ್ರಾಣಿಗಳಿಗೆ ಕರ್ನಾಟಕ, ಕೇರಳ, ತಮಿಳುನಾಡಿ ಎಂಬ ಎಲ್ಲೇ ಇರುವುದಿಲ್ಲ.
ಹಾಗಾಗಿ ಆನೆಗಳನ್ನು ಯಾವ ಪ್ರದೇಶದಲ್ಲಿ ಬಿಟ್ಟಿದ್ದೇವೆ ಎಂಬುದನ್ನು ಪರಿಗಣಿಸದೆ, ವನ್ಯ ಪ್ರಾಣಿಗಳನ್ನು ಅರಣ್ಯಧಿಕಾರಿಗಳು ರಕ್ಷಿಸುವ ಕೆಲಸ ಮಾಡಬೇಕು. ಜೊತೆಗೆ ವನ್ಯಜೀವಿಗಳು ಅರಣ್ಯದಿಂದ ನಾಡಿನತ್ತ ಬರದಂತೆ ರೈಲ್ವೆ ಬ್ಯಾರಿಕೇಡ್ಗಳನ್ನು ಸಮರ್ಪಕವಾಗಿ ನಿರ್ಮಾಣ ಮಾಡಬೇಕೆಂದು ಸೂಚಿಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications