Get Updates
Get notified of breaking news, exclusive insights, and must-see stories!

ವಾಣಿ ವಿಲಾಸ ಸಾಗರಕ್ಕೆ ಬುಧವಾರದಿಂದ ಭದ್ರಾ ಡ್ಯಾಂ ನೀರು: ಎಷ್ಟು ಕ್ಯೂಸೆಕ್‌?- ಇಲ್ಲಿದೆ ಅಂಕಿಅಂಶಗಳ ವಿವರ

ಚಿತ್ರದುರ್ಗ, ಜುಲೈ, 30: ಜಿಲ್ಲೆಯ ಏಕೈಕ ಜೀವನಾಡಿಯಾಗಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರಕ್ಕೆ ಪ್ರತಿ ದಿನ 700 ಕ್ಯೂಸೆಕ್‌ನಂತೆ ನೀರು ಹರಿಸುವುದಾಗಿ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ.

ನಗರದ ಭದ್ರಾ ಮೇಲ್ದಂಡೆ ಯೋಜನಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಜುಲೈ 30) ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

Bhadra Dam water to Vani Vilasa Sagara from Wednesday

ಅನುದಾನ ಬಿಡುಗಡೆಗೆ ಆಗ್ರಹ: ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಈ ಭಾಗದ ರೈತರ ಜೀವನಾಡಿಯಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರಾಷ್ಟ್ರೀಯ ಮಹತ್ವದ ಯೋಜನೆಯನ್ನಾಗಿ ಘೋಷಿಸಿ 5,300 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರ 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿತ್ತು.

ಕೊಟ್ಟ ಆಶ್ವಾಸನೆಯನ್ನು ಉಳಿಸಿಕೊಂಡು ಶೀಘ್ರವೇ 5,300 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಒತ್ತಾಯಿಸಿದರು. ಇನ್ನು ಇತ್ತೀಚಿಗಷ್ಟೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನಗರಕ್ಕೆ ಭೇಟಿ ನೀಡಿದಾಗ, ಕೇಂದ್ರ ಸರ್ಕಾರದ ಜಲಸಂಪನ್ಮೂಲ ಸಚಿವಾಲಯ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಕೇಳಿದ ತಾಂತ್ರಿಕ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸಮರ್ಪಕವಾಗಿ ಉತ್ತರ ನೀಡಿಲ್ಲ ಎಂದು ಹೇಳಿಕೆ ನೀಡಿದ್ದರು.

ಆದರೆ, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಅವರು ಕಳೆದ ಜೂನ್ 29ರಂದು ನವದೆಹಲಿಯ ಜಲಶಕ್ತಿ ಮಂತ್ರಾಲಯದ ರಾಜ್ಯ ಯೋಜನೆಗಳ ಆಯುಕ್ತರೊಂದಿಗೆ ಚರ್ಚಿಸಿದಾಗ, ಯೋಜನೆಯಲ್ಲಿ ಯಾವುದೇ ಸಮಸ್ಯೆ ಹಾಗೂ ತಾಂತ್ರಿಕ ಅಸಮರ್ಪಕತೆಯಿಲ್ಲ ಎಂಬುದು ತಿಳಿದುಬಂದಿದೆ. ಕೇಂದ್ರ ಸರ್ಕಾರದಿಂದ ಭದ್ರಾ ಮೇಲ್ದಂಡೆ ಯೋಜನೆ ಕುರಿತಂತೆ ಯಾವುದೇ ಆಕ್ಷೇಪಣೆ ಅಥವಾ ತಾಂತ್ರಿಕ ಅಸಮರ್ಪಕತೆಗಳ ಕುರಿತು ರಾಜ್ಯ ಸರ್ಕಾರಕ್ಕೂ ಯಾವುದೇ ಪತ್ರ ಸ್ವೀಕೃತವಾಗಿಲ್ಲ. ಆದಾಗ್ಯೂ 5,300 ಕೋಟಿ ರೂಪಾಯಿಯಲ್ಲಿ ಯಾವುದೇ ಅನುದಾನ ಇದುವರೆಗೂ ಬಿಡುಗಡೆಯಾಗಿಲ್ಲವೆಂದು ಡಿ.ಸುಧಾಕರ್ ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಎಲ್ಲಾ ಮಾನದಂಡಗಳನ್ನು ಭದ್ರಾ ಮೇಲ್ದಂಡೆ ಯೋಜನೆ ಪೂರೈಸಿರುವುದರಿಂದಲೇ ಜಲಶಕ್ತಿ ಮಂತ್ರಾಲಯದ 14ನೇ ಉನ್ನತ ಸಮಿತಿ ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಲು ಶಿಘಾರಸ್ಸು ನೀಡಿತ್ತು. ಇದರ ಆಧಾರದ ಮೇಲೆಯೇ 2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ರೂಪಾಯಿ ಹಣಕಾಸಿನ ನೆರವು ಘೋಷಿಸಲಾಗಿತ್ತು. ಆದರೆ ಇದುವರೆಗೂ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಧನ ಸಹಾಯ ಬಿಡುಗಡೆಗೊಳ್ಳದೇ ಇರುವುದರಿಂದ ಯೋಜನೆ ಪ್ರಗತಿ ಕುಂಠಿತವಾಗಿದೆ ಎಂದರು.

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರೂ, ಭದ್ರಾ ಮೇಲ್ದಂಡೆ ಯೋಜನೆಗೆ ಯಾವುದೇ ಅನುದಾನ ಲಭಿಸದಿರುವುದು ಬರ ಪೀಡಿತ ಜಿಲ್ಲೆಗೆ ದುರದೃಷ್ಟಕರ ಎನಿಸಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟದ ಮುಂದೆ ವಿಷಯ ಬಂದರೂ ಯಾವುದೇ ತೀರ್ಮಾನ ತೆಗದುಕೊಂಡಿಲ್ಲ ಎಂದು ಸಚಿವ ಡಿ.ಸುಧಾಕರ್ ಬೇಸರ ವ್ಯಕ್ತಪಡಿಸಿದರು.

ಈ ಹಿಂದಿನ ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಾಗಿದ್ದ ಗೋವಿಂದ ಕಾರಜೋಳ ಅವರು ರಾಷ್ಟ್ರೀಯ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಹಿಂದೆ ಚಿತ್ರದುರ್ಗ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದ ಎ.ನಾರಾಯಣಸ್ವಾಮಿ ಅವರು ಕೂಡ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು.

ರಾಷ್ಟ್ರೀಯ ಯೋಜನೆಯಡಿ ಅನುದಾನ ಬಿಡುಗಡೆ ಕಷ್ಟವಾದರೆ, ಬದಲಿ ಯೋಜನೆಯಡಿ ಅನುದಾನ ನೀಡುವಂತೆ ಕೋರಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಸಹ ಪ್ರಕಟವಾಗಿದ್ದವು. ಆದರೂ ಕೇಂದ್ರದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಯಾವುದೇ ಅನುದಾನ ಬಂದಿಲ್ಲ ಎಂದು ಸಚಿವ ಡಿ.ಸುಧಾಕರ್ ಆರೋಪ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಒಟ್ಟು 12.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಭದ್ರಾ ಮೇಲ್ದಂಡೆಯ ಎಲ್ಲಾ ಯೋಜನೆಗಳು ಪೂರ್ಣಗೊಳ್ಳದೇ ಇರುವುದರಿಂದ ಈ 12.5 ಟಿಎಂಸಿ ನೀರನ್ನು ವಿ.ವಿ. ಸಾಗರದಲ್ಲಿ ಸಂಗ್ರಹಿಸಲು ಕೋರಲಾಗಿದೆ. ಪ್ರತಿ ದಿನ 700 ಕ್ಯೂಸೆಕ್ ನೀರನ್ನು 3 ತಿಂಗಳ ಕಾಲ ಜಲಾಶಯಕ್ಕೆ ಹರಿಸಲಾಗುವುದು ಎಂದರು.

ಕೇಂದ್ರ ಹಣಕಾಸು ಸಚಿವರ ಭೇಟಿ: ಕೇಂದ್ರ ವಿತ್ತ ಸಚಿವೆಯಾದ ನಿರ್ಮಲಾ ಸೀತಾರಾಮನ್ ಅವರನ್ನು ಜುಲೈ 31ರಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಲಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ಮಂಜೂರು ಮಾಡುವಂತೆ ಈ ಸಂದರ್ಭದಲ್ಲಿ ಮನವಿ ಸಲ್ಲಿಸಲಿದ್ದಾರೆ. ಇದರಲ್ಲಿ ಭದ್ರಾ ಮೇಲ್ದಂಡೆಯ 5,300 ಕೋಟಿ ರೂಪಾಯಿ ಅನುದಾನದ ಬಗ್ಗೆಯೂ ಪ್ರಸ್ತಾಪಿಸಲಿದ್ದಾರೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯ ವಿವಿಧ ಕಾಮಗಾರಿಗಳ 2,300 ಕೋಟಿ ರೂಪಾಯಿ ಬಿಲ್ ಪಾವತಿಯಿದೆ. ಇದನ್ನು ಹಂತ-ಹಂತವಾಗಿ ಪಾವತಿ ಮಾಡಲಾಗುವುದು. ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ 1,500 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಿದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯ ಬಿದ್ದರೆ ಪೂರಕ ಬಜೆಟ್‌ನಲ್ಲಿ ಹಂಚಿಕೆ ಮಾಡಲಿದೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+