ಚಿತ್ರದುರ್ಗ: ವಾಣಿವಿಲಾಸ ಸಾಗರಕ್ಕೆ ಹರಿದ ಭದ್ರಾ ನೀರು
ಚಿತ್ರದುರ್ಗ, ಸೆಪ್ಟೆಂಬರ್ 6: ಭದ್ರಾ ಮೇಲ್ದಂಡೆ ಕಾಮಗಾರಿ ಯೋಜನೆಯು ಪೂರ್ಣಗೊಂಡಿದ್ದು, ಭದ್ರಾ ಜಲಾಶಯದಿಂದ ಹಿರಿಯೂರಿನ ವಾಣಿವಿಲಾಸ ಜಲಾಶಯಕ್ಕೆ ನೀರು ಹರಿಸಲಾಗಿದೆ.
Recommended Video
ವೇದಾವತಿ ನದಿ ಮೂಲಕ ನೀರು ಹರಿಸಲು ಭಾನುವಾರ ಮಧ್ಯರಾತ್ರಿ 12.20 ರ ವೇಳೆಗೆ ತರೀಕೆರೆ ತಾಲ್ಲೂಕಿನ ಬೆಟ್ಟದ ತಾವರೆಕೆರೆ ಬಳಿ ಇರುವ ಎರಡನೇ ಪಂಪ್ ಹೌಸ್ ನಿಂದ ನೀರು ಹರಿಸಲು ಚಾಲನೆ ಆರಂಭಿಸಿದ್ದಾರೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ನೀರು ಹರಿಸಲು ವಿಳಂಬವಾಗಿತ್ತು.
ಜಲಸಂಪನ್ಮೂಲ ಇಲಾಖೆಯ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಕಳೆದ ತಿಂಗಳು ಆಗಸ್ಟ್ 25ರಿಂದ ನೀರು ಹರಿಸಲು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ನಂತರ ಎರಡು ದಿನಗಳ ಕಾರ್ಯಕ್ರಮವನ್ನು ಆಗಸ್ಟ್ 27 ಕ್ಕೆ ಮುಂದೂಡಿಕೆ ಮಾಡಿದರು. ಮತ್ತೆ ಸೆ.2 ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರೇ ಆಗಮಿಸಿ ಬಾಗಿನ ಅರ್ಪಿಸಿ ವಿವಿ ಸಾಗರಕ್ಕೆ ನೀರೆತ್ತುವ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆಂದು ಅಧಿಕೃತ ಪ್ರವಾಸ ಕಾರ್ಯಕ್ರಮ ನಿಗದಿಯಾಗಿತ್ತು.

ಆದರೆ ಸಿಎಂ ಪ್ರವಾಸ ಕೂಡಾ ರದ್ದಾಗಿ ಸೆ.4ಕ್ಕೆ ನೀರು ಹರಿಯಲಿದೆ ಎಂದು ಮತ್ತೊಮ್ಮೆ ಸಮಯ ನಿಗದಿಯಾಯಿತು. ಅದಕ್ಕೂ ಅಡ್ಡಿ ಆಗಿ ನಾಲ್ಕು ಬಾರಿ ಮುಂದೂಡಲಾಗಿತ್ತು. ಕಾಕತಾಳೀಯವೆಂಬಂತೆ ಇದರ ಮಧ್ಯ ತರೀಕೆರೆ ರೈತ ಮುಖಂಡರು ನಮ್ಮ ಸಮಸ್ಯೆ ಬಗೆಹರಿಸಿ ನೀರು ಕೊಂಡೊಯ್ಯಿರಿ ಎಂದರು.
ಕಳೆದ ಎರಡು ದಿನಗಳ ಹಿಂದೆ ಹರಿಯಬೇಕಿದ್ದ ಭದ್ರಾ ನೀರು ಕೊನೆಗೂ ವಿವಿ ಸಾಗರದ ಕಡೆ ಹರಿದು ಬರುತ್ತಿದ್ದಾಳೆ. ಈ ಭಾಗದ ಜನರಲ್ಲಿ, ರೈತರಲ್ಲಿ, ಜನಪ್ರತಿನಿಧಿಗಳಲ್ಲಿ ಸಂತಸ ತಂದಿದೆ.

ಭದ್ರಾ ಜಲಾಶಯದಿಂದ ಪ್ರಾರಂಭವಾದ ನೀರು ಜಿಲ್ಲೆಯ ತರೀಕೆರೆ ತಾಲೂಕಿನ ಶಾಂತಿಪುರ ಪಂಪ್ ಹೌಸ್-1 ಸೇರುತ್ತದೆ. ಶಾಂತಿಪುರ ಪಂಪ್ ಹೌಸ್ ನಿಂದ ಲಿಫ್ಟ್ ಮೂಲಕ ಬೆಟ್ಟದ ತಾವರೆಕೆರೆ ಪಂಪ್ ಹೌಸ್ ತಲುಪಿ ಅಲ್ಲಿಂದ ಅಜ್ಜಂಪುರ ಸುರಂಗ ಮಾರ್ಗದ ಮೂಲಕ ಬಂದ ನೀರು ಅಜ್ಜಂಪುರದ ರೈಲ್ವೆ ಅಂಡರ್ ಪಾಸ್ ನಿಂದ ಹೆಬ್ಬೂರು ಗ್ರಾಮದ ವೈ ಜಂಕ್ಷನ್ ಹಳ್ಳದ ಮೂಲಕ ನೀರು ಹಾದು ಹೋಗಲಿದೆ.
ನಂತರ ಬೇಗೂರು, ಆಸಂದಿ, ಎಚ್.ತಿಮ್ಮಾಪುರ, ಹನುಮನಹಳ್ಳಿ, ಕಲ್ಕೆರೆ, ಚೌಳ ಹಿರಿಯೂರು, ಕುಕ್ಕೆಸಮುದ್ರ ಕೆರೆಗೆ ತಲುಪಿ ಅಲ್ಲಿಂದ ವೇದಾವತಿ ನದಿಗೆ ನೀರು ಹರಿದು ಹೋಗುತ್ತದೆ. ಅಲ್ಲಿಂದ ಹೊಸದುರ್ಗ ತಾಲ್ಲೂಕಿನ ಕೆಲ್ಲೋಡ್ ಚೆಕ್ ಡ್ಯಾಂ ತುಂಬಿಕೊಂಡು ಕಾರೆಹಳ್ಳಿ, ಹತ್ತಿಮೊಗ್ಗೆ, ಬೇವಿನಹಳ್ಳಿ ಮುಖಾಂತರ ವಿವಿ ಸಾಗರಕ್ಕೆ ನೀರು ಹರಿದು ಬರುತ್ತದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications