ಆಜಾನ್ ವೇಳೆ ಭಾಷಣ ನಿಲ್ಲಿಸಿದ್ದಕ್ಕೆ ಎದ್ದು ಹೋದ ನಟಿ ಭಾವನಾ
Recommended Video

ಚಿತ್ರದುರ್ಗ, ಮಾರ್ಚ್ 30: ಆಜಾನ್ ಮೊಳಗಿದ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು ಭಾಷಣ ನಿಲ್ಲಿಸಿದ್ದಕ್ಕೆ ಬೇಸರಗೊಂಡ ಕೆಪಿಸಿಸಿ ಕಾರ್ಯದರ್ಶಿ, ನಟಿ ಭಾವನಾ ವೇದಿಕೆಯಿಂದಲೇ ನಿರ್ಗಮಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನಟಿ ಭಾವನಾ ಅತಿಥಿಯಾಗಿ ಪಾಲ್ಗೊಂಡಿದ್ದರು. ವೇದಿಕೆ ಮೇಲೆ ಸ್ಥಳೀಯ ಮಹಿಳಾ ಮುಖಂಡರೊಬ್ಬರು ಸಮಯ್ಯಾ ತಬ್ರೀಜ್ ಭಾಷಣ ಮಾಡುತ್ತಿದ್ದರು. ಇದೇ ವೇಳೆ ಆಜಾನ್ ಮೊಳಗಿತು ಆಗ ಭಾಷಣಗಾರ್ತಿ ಆಜಾನ್ಗೆ ಗೌರವ ಸೂಚಿಸಿ ಭಾಷಣ ನಿಲ್ಲಿಸಿದರು.
ಸಮಯ್ಯಾ ತಬ್ರೀಜ್ ನಡೆಯಿಂದ ಸಿಟ್ಟಿಗೆದ್ದ ನಟಿ ಭಾವನಾ ಭಾಷಣ ಮುಂದುವರೆಸುವಂತೆ ಸೂಚಿಸಿದರು. ಆಗ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾವನ ವಿರುದ್ಧ ಘೋಷಣೆ ಕೂಗಿದರು. ಇದರಿಂದ ಬೇಸರಗೊಂಡ ಭಾವನಾ ಕೊರಳಿಗೆ ಹಾಕಿಕೊಂಡಿದ್ದ ಕಾಂಗ್ರೆಸ್ ಶಾಲನ್ನು ತೆಗೆದುಹಾಕಿ ಭಾಷಣ ನಿಲ್ಲಿಸಿದ ಸಮಯ್ಯಾ ತಬ್ರೀಜ್ ಅವರನ್ನು ಬೈದು ಸಭೆಯಿಂದ ಹೊರ ನಡೆದರು.

ನಟಿ ಭಾವನಾ ಅವರ ಈ ನಡೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಪ್ರಧಾನಿ ಮೋದಿ, ಯಡಿಯೂರಪ್ಪ, ಸಿದ್ದರಾಮಯ್ಯ ಅವರುಗಳೇ ಆಜಾನ್ ಮೊಳಗುವ ವೇಳೆ ಭಾಷಣ ನಿಲ್ಲಿಸುತ್ತಾರೆ ಭಾವನಾ ಅವರೇನು ವಿಶೇಷವೇ ಎಂದು ಪ್ರಶ್ನಿಸಿದ್ದಾರೆ.
ಭಾವನಾ ಅವರಿಗೆ ಆಜಾನ್ಗೆ ಗೌರವ ಕೊಡುವುದು ಇಷ್ಟವಿಲ್ಲವೆಂದರೆ ಸರಿ, ಆದರೆ ಬೇರೆಯವರೂ ಆಜಾನ್ಗೆ ಗೌರವ ಕೊಡಬಾರದೆಂದು ಒತ್ತಾಯ ಹೇರಲು ಅವರು ಯಾರು? ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಲಾಗುತ್ತಿದೆ.
ಪ್ರಮೋದ್ ಮುತಾಲಿಕ್ ಸೇರಿದಂತೆ ಇನ್ನೂ ಕೆಲವು ಬಲಪಂಥೀಯ ಮುಖಂಡರು ಭಾವನಾ ಅವರ ನಡೆಗೆ ಬೆಂಬಲ ಸೂಚಿಸಿದ್ದು, ಭಾವನಾ ಅವರದ್ದು ದಿಟ್ಟ ನಡೆ ಎಂದಿದ್ದಾರೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications