ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ಬಲ ಪ್ರದರ್ಶನ, ಜನಾರ್ದನ ರೆಡ್ಡಿ ಸಾಥ್
ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ), ಏಪ್ರಿಲ್ 21: ಮೊಳಕಾಲ್ಮೂರು ಪರಿಶಿಷ್ಟ ಪಂಗಡ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ನಾಮಪತ್ರ ಸಲ್ಲಿಸಿದರು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಶೇಷ ವಿಮಾನದಲ್ಲಿ ಭೋಪಾಲ್ ನಿಂದ ಬಳ್ಳಾರಿಯ ತೋರಣಗಲ್ಲು ತಲುಪಿ, ವಿಶೇಷ ಹೆಲಿಕಾಪ್ಟರ್ ನಲ್ಲಿ ಬಿಎಸ್ ವೈ, ಬಿ. ಶ್ರೀರಾಮುಲು ಸೇರಿ ಐವರು ಮೊಳಕಾಲ್ಮೂರಿಗೆ ಹಾರಿದ್ದರು.
ಶನಿವಾರ ಬೆಳಗ್ಗೆ ನಸುಕಿನಲ್ಲಿ ಎದ್ದ ಬಿ.ಶ್ರೀರಾಮುಲು ಮನೆಯಲ್ಲಿ ಶಿವಪೂಜೆ ನೆರವೇರಿಸಿದರು. ಆ ನಂತರ ಗೋಪೂಜೆಯನ್ನು ನಡೆಸಿ, ಗುರು - ಹಿರಿಯರನ್ನು ಸ್ಮರಿಸಿ, ಆರಾಧ್ಯ ದೈವಕ್ಕೆ ನಮಸ್ಕರಿಸಿದರು. ಶಿವರಾಜಸಿಂಗ್ ಚೌಹಾಣ್ ಅವರನ್ನು ಬರಮಾಡಿಕೊಳ್ಳಲು ಜಿಂದಾಲ್ ಏರ್ ಸ್ಟ್ರಿಪ್ ಗೆ ದೌಡಾಯಿಸಿದರು. ಅಷ್ಟರಲ್ಲೇ, ಬಿ.ಎಸ್. ಯಡಿಯೂರಪ್ಪ ಸೇರಿ ಅನೇಕ ಮುಖಂಡರು ಉಪಸ್ಥಿತರಿದ್ದರು.
ಶಿವರಾಜ ಸಿಂಗ್ ಚೌಹಾಣ್ ಅವರನ್ನು ಸ್ವಾಗತಿಸಿದ ಬಿ. ಶ್ರೀರಾಮುಲು, ಬಿ.ಎಸ್.ಯಡಿಯೂರಪ್ಪ, ವಿಶೇಷ ಹೆಲಿಕಾಪ್ಟರ್ ನಲ್ಲಿ ಬೆಳಗ್ಗೆ 9.50 ಕ್ಕೆ ಹಾರಿದರು. ಮೊಳಕಾಲ್ಮೂರು ತಲುಪುತ್ತಿದ್ದಂತೆಯೇ, ಜಾತ್ರೆಯಂತೆ ಜನರು ಬಂದರು. ಹೆಲಿಕಾಪ್ಟರ್ ನೋಡಲಿಕ್ಕಾಗಿಯೇ ಗುಂಪು ಗುಂಪಾಗಿ ಬಂದಿದ್ದರು.

ರಾಮುಲು-ಬಿಎಸ್ ವೈ ಜೋಡಿಯಿಂದ ಬಿಜೆಪಿ ಅಧಿಕಾರಕ್ಕೆ
ಮೊಳಕಾಲ್ಮೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಿವರಾಜಸಿಂಗ್ ಚೌಹಾಣ್, 'ಬಿ. ಶ್ರೀರಾಮುಲು, ಬಿ.ಎಸ್. ಯಡಿಯೂರಪ್ಪ ಅವರ ಜೋಡಿ ರಾಜ್ಯದಲ್ಲಿ ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತರಲಿದೆ. ಬಿಜೆಪಿಗೆ ಉತ್ತಮವಾಧ ಭವಿಷ್ಯವಿದೆ' ಎಂದರು.

ವೇದಿಕೆಯಲ್ಲಿ ಜನಾರ್ದನ ರೆಡ್ಡಿ ಮಿಂಚಿಂಗ್
ಆದರೆ, ಬಿಜೆಪಿ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು 'ಬಿಜೆಪಿಗೂ ಗಾಲಿ ಜನಾರ್ದನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ' ಎಂದಿದ್ದರೂ ಜಿ. ಜನಾರ್ದನ ರೆಡ್ಡಿ ಅವರು, ಮೊಳಕಾಲ್ಮೂರಿನ ಸಾರ್ವಜನಿಕ ವೇದಿಕೆಯಲ್ಲಿ ಅಕ್ಕಪಕ್ಕದಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

ಗೆಳೆಯನನ್ನು ಗೆಲ್ಲಿಸಿಕೊಳ್ಳುತ್ತೇನೆ
ಈ ಸಂದರ್ಭದಲ್ಲಿ ಆಪ್ತರೊಂದಿಗೆ ಮಾತನಾಡಿದ ಜಿ. ಜನಾರ್ದನರೆಡ್ಡಿ, 'ಸ್ನೇಹಿತ ಬಿ. ಶ್ರೀರಾಮುಲು ಗೆಲುವಿಗಾಗಿ ಮನೆ ಮನೆಗೆ ಹೋಗಿ, ಬೀದಿ ಬೀದಿ ತಿರುಗಿ ನಾನು ಓಟು ಕೇಳುತ್ತೇನೆ. ಬಿ. ಶ್ರೀರಾಮುಲು ಗೆಲ್ಲುವುದು ಖಚಿತ' ಎಂದರು. ಭಾರೀ ಸಂಖ್ಯೆಯ ಜನರು ನಾಮಪತ್ರ ಸಲ್ಲಿಸುವ ಸಭೆಯಲ್ಲಿ ಪಾಲ್ಗೊಂಡಿದ್ದರು.

ಭೋಪಾಲ್ ಗೆ ಹಿಂತಿರುಗಿದ ಶಿವರಾಜ ಸಿಂಗ್ ಚೌಹಾಣ್
ಸಾರ್ವಜನಿಕ ಸಭೆಯನ್ನು ನಡೆಸಿದ ನಂತರ ಬಿಜೆಪಿಯ ಘೋಷಿತ ಅಭ್ಯರ್ಥಿ ಬಿ. ಶ್ರೀರಾಮುಲು ನಾಮಪತ್ರ ಸಲ್ಲಿಸಿದರು. ಶಿವರಾಜಸಿಂಗ್ ಚೌಹಾಣ್ ಅವರು ವಿಶೇಷ ಹೆಲಿಕಾಪ್ಟರ್ ನಲ್ಲಿ ಜಿಂದಾಲ್ ಗೆ ಹಿಂತಿರುಗಿ, ವಿಶೇಷ ವಿಮಾನದಲ್ಲಿ ಮಧ್ಯಾಹ್ನ 1.40ರ ಸುಮಾರಿಗೆ ಭೋಪಾಲ್ ಗೆ ತೆರಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications