ಗೂಳಿ ವಿರುದ್ಧ ಗುಟುರು ಹಾಕಿದ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್
ಚಿತ್ರದುರ್ಗ, ಡಿಸೆಂಬರ್ 23: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪಕ್ಷದ ಕುರಿತು ಅಸಮಾಧಾನ ತೋಡಿಕೊಂಡ ಬೆನ್ನಲ್ಲೇ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಪ್ರತಿಕ್ರಿಯೆ ನೀಡಿದ್ದು, ಚಾಡಿ ಹೇಳಿ ಅನುದಾನ ನಿಲ್ಲಿಸುವಂತಹ ಥರ್ಡ್ ಕ್ಲಾಸ್ ಮೆಂಟಾಲಿಟಿ ನನಗೆ ಇಲ್ಲ, ನಾನು ಯಾರ ಬಗ್ಗೆಯೂ ಚಾಡಿ ಹೇಳುವ ಅವಶ್ಯಕತೆ ಇಲ್ಲ" ಎಂದು ಹೇಳಿದ್ದಾರೆ.
ತಾಲ್ಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕರ ಕಡೆಗಣನೆ ವಿಚಾರವಾಗಿ ಮಾತನಾಡಿದ ನವೀನ್, "ಈ ವಿಷಯವನ್ನು ಕಾರ್ಯಕರ್ತರ ಸಭೆಯಲ್ಲಿ ಹೇಳುವಂತಹ ಅವಶ್ಯಕತೆ ಇರಲಿಲ್ಲ. ನಾವು ಶಾಸಕರನ್ನು ಸೈಡ್ ಲೈನ್ ಮಾಡಿಲ್ಲ ಹಾಗೂ ರಾಜ್ಯದಲ್ಲಿಯೇ ಯಾವ ಶಾಸಕರೂ ಈ ರೀತಿ ಬೆಂಬಲಗರ ಸಭೆ ಕರೆಯೋದಿಲ್ಲ. ನಾನು ಬಿಜೆಪಿಗೆ ಬಂದು ತಪ್ಪು ಮಾಡಿದೆ ಎಂದು ಹಿಂದೆಯೂ ಹೇಳಿಕೆ ಕೊಟ್ಟಿದ್ದರು. ಈ ರೀತಿಯ ಹೇಳಿಕೆ ಕೊಡಬೇಡಿ" ಎಂದು ಮನವಿ ಮಾಡಿದರು.
"ನಿಮ್ಮ ಅಭಿಮಾನಿಗಳು ಎಷ್ಟು ಪ್ರೀತಿಯಿಟ್ಟು ಓಟು ಹಾಕಿದ್ದಾರೋ, ಅದರ ಎರಡರಷ್ಟು ಅಭಿಮಾನ ಇಟ್ಟು ಬಿಜೆಪಿ ಕಾರ್ಯಕರ್ತರು ನಿಮಗೆ ಓಟು ಹಾಕಿದ್ದಾರೆ. ಮಾತೆತ್ತಿದ್ದರೆ ನನ್ನ ಬೆಂಬಲಿಗರು ಬಿಜೆಪಿಗೆ ಹೊಂದಿಕೊಳ್ಳೋದಿಲ್ಲ ಅಂತಾರೆ. ಅವರಿಗೆ ಇಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ ಎಂದು ಹೇಳುವ ನೈತಿಕತೆಯೇ ಇಲ್ಲ" ಎಂದು ಶಾಸಕ ಗೂಳಿ ವಿರುದ್ಧ ಗುಟುರು ಹಾಕಿದರು.

ಶಾಸಕರಾಗಲು ತುದಿಗಾಲಲ್ಲಿ ಕೆಲವರು ನಿಂತಿದ್ದಾರೆ ಎನ್ನುವ ಗೂಳಿ ಹೇಳಿಕೆಗೆ, "ಅಂತಹ ಭಾವನೆ ನನಗೆ ಇದ್ದಿದ್ದರೆ 2008ರಲ್ಲೇ ರೆಬೆಲ್ ಆಗಿ ಕಣಕ್ಕಿಳಿಯುತ್ತಿದ್ದೆ. ಆದರೆ ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ" ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications