ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೆಟ್ರೋಲ್ ಸುರಿದುಕೊಂಡು ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಾಹುತಿಗೆ ಯತ್ನ

|
Google Oneindia Kannada News

Recommended Video

ಆತ್ಮಾಹುತಿಗೆ ಪ್ರಯತ್ನಪಟ್ಟ ಶಾಸಕನ ಬಗ್ಗೆ ಯಡಿಯೂರಪ್ಪ ಮಾತು | Oneindia Kannada

ಚಿತ್ರದುರ್ಗ, ಜನವರಿ 7: ಅಕ್ರಮ ಮರಳು ಸಾಗಣೆ ಹೆಸರಲ್ಲಿ ಪೊಲೀಸರು ಅಮಾಯಕರನ್ನು ಬಂಧಿಸುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಗೂಳಿಹಟ್ಟಿ ಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಾಹುತಿಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪೊಲೀಸ್ ಠಾಣೆ ಮುಂಭಾಗವೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತಕ್ಷಣವೇ ಸ್ಥಳದಲ್ಲಿದ್ದವರು ಬೆಂಕಿ ನಂದಿಸಿದ್ದು, ಗೂಳಿಹಟ್ಟಿಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಣಾಪಾಯದಿಂದ ಪಾರಾಗಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಬಿಜೆಪಿಗೆ ಸೇರ್ಪಡೆಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಬಿಜೆಪಿಗೆ ಸೇರ್ಪಡೆ

ಚಿತ್ರದುರ್ಗದ ಮಾಡದಕೆರೆ ಹೋಬಳಿಯಲ್ಲಿ ಮರಳು ತುಂಬಿದ ಲಾರಿಯನ್ನು ವಶಕ್ಕೆ ಪಡೆದಿದ್ದ ಪೊಲೀಸರು ಈ ಕುರಿತು ಟ್ರ್ಯಾಕ್ಟರ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಲು ಮುಂದಾಗಿದ್ದರು.

BJP MLA attempts to immolate self

ವಿಷಯ ತಿಳಿದು ಪೊಲೀಸರಿಗೆ ಕರೆ ಮಾಡಿದ ಗೂಳಿಹಟ್ಟಿ ಶೇಖರ್, ದೇವಸ್ಥಾನ ನಿರ್ಮಾಣಕ್ಕೆ ಮರಳು ತರುವವರ ಮೇಲೆ ಪ್ರಕರಣ ದಾಖಲು ಮಾಡುವ ಬದಲು ದಂಧೆಕೋರರನ್ನು ಬಂಧಿಸಿ ಜೈಲಿಗೆ ಅಟ್ಟಿ ಎಂದು ಸೂಚನೆ ನೀಡಿದ್ದರು.

ಆದರೂ ಪೊಲೀಸರು ಪ್ರಕರಣ ದಾಖಲು ಮಾಡಲು ಮುಂದಾದಾಗ ಕ್ಯಾನ್‌ನಲ್ಲಿ ಪೆಟ್ರೋಲ್ ತುಂಬಿಕೊಂಡು ಪೊಲೀಸ್ ಠಾಣೆಗೆ ಆಗಿಮಿಸಿದ ಶೇಖರ್ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.

English summary
MLA Goolihatti shekhar of Hosadurga constituency on Sunday attempted to kill himself as a mark of protest against the alleged harassment of his supporters by the police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X