ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ
ಚಿತ್ರದುರ್ಗ, ಮಾರ್ಚ್ 05: ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಪುಟ್ಟಮ್ಮ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಪುತ್ರ ತಿಪ್ಪೇಸ್ವಾಮಿ ಸಾವಿನ ಬಳಿಕ ಪುಟ್ಟಮ್ಮ ಹಿಂದೂ ದೇವರ ಮೇಲೆ ಬೇಸರ ವ್ಯಕ್ತಪಡಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗೂಳಿಹಟ್ಟಿ ಗ್ರಾಮದಲ್ಲಿ ವಾಸವಾಗಿರುವ ಪುಟ್ಟಮ್ಮ ಹೊಸದುರ್ಗ ಪಟ್ಟಣದ ಹಿರಿಯೂರು ರಸ್ತೆಯಲ್ಲಿರುವ ಚರ್ಚ್ಗೆ ಪ್ರತಿದಿನ ಪ್ರಾರ್ಥನೆಗೆ ತೆರಳುತ್ತಾರೆ. ಕ್ರಿಶ್ಚಿಯನ್ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿದ್ದಾರೆ.
ಪುಟ್ಟಮ್ಮ ಅವರಿಗೆ ಮೂವರು ಮಕ್ಕಳು ತೆರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಮೊದಲ ಮಗ ತಿಪ್ಪೇಸ್ವಾಮಿ ಏಳು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕ್ರಿಶ್ಚಿಯನ್ ಧರ್ಮದ ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದಾರೆ.

ಗೂಳಿಹಟ್ಟಿ ಗ್ರಾಮದಲ್ಲಿ ಪುಟ್ಟಮ್ಮ ಅವರು ಇರುವ ಮನೆ 2018ರ ಮಳೆಗಾಲದಲ್ಲಿ ಬಿದ್ದು ಹೋಗಿತ್ತು. ಶಾಸಕರು ತಾಯಿಗಾಗಿ ಹೊಸ ಮನೆಯನ್ನು ಕಟ್ಟಿಸಿಕೊಟ್ಟಿದ್ದರು. ಮನೆ ಗೃಹ ಪ್ರವೇಶದ ಸಂದರ್ಭದಲ್ಲಿ ಹಿಂದೂ ದೇವರುಗಳ ಫೋಟೋಗಳಿಗೆ ಪೂಜೆ ಸಲ್ಲಿಸಲಾಗಿತ್ತು.
ಆದ್ದರಿಂದ, ಪುಟ್ಟಮ್ಮ ಆ ಮನೆಯಲ್ಲಿ ವಾಸ ಮಾಡುತ್ತಿಲ್ಲ. ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿದ್ದಾರೆ. ಪತಿ ದಿವಾಕರಪ್ಪ ಮತ್ತು ಪುತ್ರ ತಿಪ್ಪೇಸ್ವಾಮಿ ಸಾವಿನ ಬಳಿಕ ಹಿಂದೂ ಧರ್ಮದ ದೇವರ ಮೇಲೆ ಪುಟ್ಟಮ್ಮ ಬೇಸರ ವ್ಯಕ್ತಪಡಿಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.
ಶಾಸಕ ಗೂಳಿಹಟ್ಟಿ ಶೇಖರ್ ಹಿಂದೂ ಧರ್ಮ ಹಾಗೂ ದೇವರುಗಳ ಭಕ್ತರಾಗಿದ್ದಾರೆ. ಪುಟ್ಟಮ್ಮ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆಯೇ? ಎಂಬ ಬಗ್ಗೆ ಅಧಿಕೃತವಾಗಿ ಯಾರೂ ಸಹ ಮಾಹಿತಿ ನೀಡಿಲ್ಲ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications