'ಜೆಡಿಎಸ್ ನಾಯಕರು ನನ್ನನ್ನು ಸಂಪರ್ಕಿಸಿಲ್ಲ'

ಜನಾರ್ದನಸ್ವಾಮಿ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರುತ್ತಾರೆ. ಜೆಡಿಎಸ್ ಟಿಕೆಟ್ ಪಡೆದು ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುತ್ತಾರೆ ಎಂಬ ಸುದ್ದಿ ನನ್ನ ಕಿವಿಗೂ ಬಿದ್ದಿದೆ. ಆದರೆ, ನಾನು ಬಿಜೆಪಿ ತೊರೆದು ಜೆಡಿಎಸ್ ಸೇರುವ ವದಂತಿ ಸತ್ಯಕ್ಕೆ ದೂರವಾದ ಮಾತು ಎಂದು ಚಿತ್ರದುರ್ಗದ ಬಿಜೆಪಿ ಸಂಸದ ಜನಾರ್ದನ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನಾನು ಬಿಜೆಪಿ ಬಿಡುವಂಥ ಪರಿಸ್ಥಿತಿ ಏನು ನಿರ್ಮಾಣವಾಗಿಲ್ಲ. ನನಗೆ ಪಕ್ಷದಿಂದ ಯಾವುದೇ ರೀತಿಯಿಂದಲೂ ಅಸಮಾಧಾನವೇನೂ ಇಲ್ಲ ಎಂದು ಹೇಳಿದ್ದಾರೆ. ಲೋಕಸಭಾ ಸದಸ್ಯನಾಗಿ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಿದ್ದೇನೆ ಎಂದು ಜನಾರ್ದನ ಸ್ವಾಮಿ ಹೇಳಿದ್ದಾರೆ.
ಬಿಜೆಪಿ ಟಿಕೆಟ್ ಯಾರಿಗೆ? : ಮುಂಬರುವ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಪಕ್ಷ ನೀಡುವ ಯಾವುದೇ ಹುದ್ದೆಯನ್ನು ನಿಭಾಯಿಸಲು ನಾನು ಸಿದ್ಧ. ಜೆಡಿಎಸ್ ನಾಯಕರು ಪಕ್ಷ ಸೇರುವ ವಿಚಾರದಲ್ಲಿ ಇದುವರೆವಿಗೂ ನನ್ನನ್ನು ಸಂಪರ್ಕಿಸಿಲ್ಲ. ಈ ರೀತಿಯ ಸುದ್ದಿಯನ್ನು ನನ್ನ ಕ್ಷೇತ್ರ ಜನತೆ ನಂಬುವುದಿಲ್ಲ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದು, ತಿಂಗಳಿಗೆ ಲಕ್ಷಾಂತರ ರುಪಾಯಿ ಸಂಬಳದ ಕೆಲಸವನ್ನು ಬಿಟ್ಹಾಕಿ ಜನಸೇವೆ ಮಾಡಲು ಭಾರತಕ್ಕೆ ಬಂದ ಜನಾರ್ದನ ಸ್ವಾಮಿ ಅವರು ಬಿಜೆಪಿ ಟಿಕೆಟ್ ಪಡೆದು ಚಿತ್ರದುರ್ಗ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದರು.
ಹುಟ್ಟೂರಿನ ಅಭಿವೃದ್ಧಿಗೆ ಏನಾದರೂ ಸೇವೆ ಮಾಡಬೇಕು ಎಂಬ ಏಕೈಕ ಹಂಬಲದೊಂದಿಗೆ ಚಿತ್ರದುರ್ಗದ ಕಳ್ಳಹಟ್ಟಿ ಗ್ರಾಮದ ಜನಾರ್ದನಸ್ವಾಮಿ ಅವರು ಸಮಗ್ರ ಗ್ರಾಮೀಣಾಭಿವೃದ್ಧಿಗೆ ಮತ್ತು ಶಿಕ್ಷಣಾಭಿವೃದ್ಧಿಗೆ ಹೊಸ ಕಾಯಕಲ್ಪ ನೀಡಬೇಕು ಎಂದು ದೃಢ ನಿಲುವು ಹೊಂದಿದ್ದಾರೆ. ಆದರೆ, ಎಲ್ಲವೂ ರಾತ್ರಿ ಕಳೆದು ಬೆಳಗ್ಗೆ ಆಗುವುದರಲ್ಲಿ ಸಾಧ್ಯವಿಲ್ಲ ಎಂಬ ಅರಿವು ಹೊಂದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications