ದಲಿತರನ್ನು ರಾಷ್ಟ್ರಪತಿ ಮಾಡಿದ್ದೇವೆ; ಸಿದ್ದರಾಮಯ್ಯಗೆ ಕಟೀಲ್ ತಿರುಗೇಟು
ಚಿತ್ರದುರ್ಗ, ಜುಲೈ 24: ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ, "ದಲಿತರನ್ನು ರಾಷ್ಟ್ರಪತಿ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿ ದಲಿತರಿಗೆ ಸ್ಥಾನಮಾನ ಕಲ್ಪಿಸಿದೆ,'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, "ಬಿ.ಆರ್. ಅಂಬೇಡ್ಕರ್ಗೆ ಅತಿಹೆಚ್ಚು ಅವಮಾನ ಮಾಡಿರುವುದು ಕಾಂಗ್ರೆಸ್ ಪಕ್ಷ, ಮೊದಲ ಸಚಿವ ಸಂಪುಟದಲ್ಲಿ ನೋವಾಗಿ ಅಂಬೇಡ್ಕರ್ ರಾಜೀನಾಮೆ ನೀಡಿದ್ದರು,'' ಎಂದು ಕಿಡಿಕಾರಿದರು.
"ಅಂಬೇಡ್ಕರ್ ಲೋಕಸಭೆ ಚುನಾವಣೆಗೆ ನಿಂತಾಗ ಸೋಲಿಸಿದರು, ನಂತರ 2ನೇ ಬಾರಿ ಅವರ ಸಹಾಯಕನನ್ನು ಚುನಾವಣೆಗೆ ಎದುರು ನಿಲ್ಲಿಸಿ ಸೋಲಿಸಿದರು. ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೂ ಜಾಗ ಕೊಡಲಿಲ್ಲ, ಭಾರತ ರತ್ನವೂ ಕೊಡಲಿಲ್ಲ, ಅಂಬೇಡ್ಕರ್ಗೆ ಭಾರತರತ್ನ ಕೊಟ್ಟಿದ್ದು ನಾವು,'' ಎಂದು ಹೇಳಿದರು.

"ಕಾಂಗ್ರೆಸ್ ಪಕ್ಷ ಜಗಜೀವನ್ ರಾಮ್ರನ್ನು ಪ್ರಧಾನಿ ಮಾಡಲಿಲ್ಲ. ಸಿದ್ದರಾಮಣ್ಣನ ಬಗ್ಗೆ ಇತಿಹಾಸ ಹೇಳಬೇಕೆಂದರೆ, ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದು ಮುಖ್ಯಮಂತ್ರಿ ಆದರು. ಡಾ.ಜಿ. ಪರಮೇಶ್ವರ್ರನ್ನು ಡಿಸಿಎಂ ಸಹ ಮಾಡಲಿಲ್ಲ, ಆದರೆ ಚುನಾವಣೆಯಲ್ಲಿ ಸೋಲಿಸಿದರು, ಎಂದು ಕಾಂಗ್ರೆಸ್ ವಿರುದ್ಧ ಆರೋಪಿಸಿದರು.
"ಇನ್ನು ಮಲ್ಲಿಕಾರ್ಜುನ ಖರ್ಗೆ, ಚಂದ್ರಪ್ಪ, ಧೃವನಾರಾಯಣ ಸೇರಿ ದಲಿತ ಮುಖಂಡರನ್ನು ಸೋಲಿಸಿದ್ದಾರೆ. ಈವತ್ತಿಗೂ ಖರ್ಗೆ, ಪರಮೇಶ್ವರ್ರನ್ನು ಮುಂದಕ್ಕೆ ಬರಲು ಬಿಡಲ್ಲ,'' ಎಂದರು.
"ಬಿಜೆಪಿ ಪಕ್ಷ ಕಡಿಮೆ ಸಮಯ ಅಧಿಕಾರ ನಡೆಸಿದೆ, ಮುಸ್ಲಿಂರಾದ ಅಬ್ದುಲ್ ಕಲಾಂರನ್ನು ರಾಷ್ಟ್ರಪತಿಯಾಗಿ ನಾವು ಮಾಡಿದ್ದೇವೆ. ದಲಿತರಾದ ರಾಮನಾಥ ಕೋವಿಂದ್ರನ್ನು ರಾಷ್ಟ್ರಪತಿ ಮಾಡಲಾಗಿದೆ. ಇದರ ಜೊತೆಗೆ ರಾಜ್ಯದಲ್ಲಿ ಗೋವಿಂದ್ ಕಾರಜೋಳರನ್ನು ಡಿಸಿಎಂ ಮಾಡಿದ್ದು, ಅನೇಕಲ್ ವಿಧಾನಸಭೆಯಲ್ಲಿ ಸೋತ ಎ. ನಾರಾಯಣಸ್ವಾಮಿಗೆ ಚಿತ್ರದುರ್ಗದಲ್ಲಿ ಸಂಸದರನ್ನಾಗಿಸಿ, ಕೇಂದ್ರದಲ್ಲಿ ಮಂತ್ರಿ ಮಾಡಿದ್ದೇವೆ,'' ಎಂದರು.

ಇನ್ನು ನನ್ನ ಹೆಸರಿನ ಫೇಕ್ ಆಡಿಯೋ ಪ್ರಕರಣ ತನಿಖೆ ನಡೆಯುತ್ತಿದೆ ಎಂದ ಕಟೀಲ್, "ಸಿದ್ಧರಾಮಯ್ಯ ಸರ್ಕಾರ ಮಾಡಿದಷ್ಟು ಭ್ರಷ್ಟಾಚಾರ ಯಾರೂ ಮಾಡಲು ಸಾಧ್ಯವಿಲ್ಲ. ಸಿದ್ದರಾಮಣ್ಣ ಅರ್ಕಾವತಿ ಪ್ರಕರಣ ಮುಚ್ಚಿ ಹಾಕಿದ್ದಾರೆ,'' ಎಂದು ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದರು.
"ನಮ್ಮಲ್ಲಿ ಮಿತ್ರ ಮಂಡಳಿ, ವಲಸಿಗ ಪದ ಸರಿಯಲ್ಲ, ಬಿಜೆಪಿಯಿಂದ ಶಾಸಕರಾಗಿದ್ದಾರೆ, ಪಕ್ಷದ ಒಂದು ಮಂಡಳಿ ಇರಬೇಕು. ರಾಷ್ಟ್ರೀಯ ನಾಯಕರ ಸೂಚನೆ ಪಾಲಿಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ,'' ಎಂದು ತಿಳಿಸಿದರು.
"ಸಿಎಂ ಯಡಿಯೂರಪ್ಪನವರು ಈಗಾಗಲೇ ನೆರೆ ವೀಕ್ಷಣೆ, ಪರಿಹಾರ ಕಾರ್ಯದಲ್ಲಿ ತೊಡಗಿದ್ದು, ಸಿಎಂ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಗಮನಿಸಿ ಹೇಳುತ್ತಾರೆ,'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications