ಚಿತ್ರದುರ್ಗ : ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಅಧಿಕಾರಿ ಸಿಬಿಐ ಬಲೆಗೆ

ಚಿತ್ರದುರ್ಗ, ಆಗಸ್ಟ್ 28 : ರೈಲು ನಿಲ್ದಾಣದಲ್ಲಿ ಟೀ ವ್ಯಾಪಾರಿಯಿಂದ ಲಂಚ ಪಡೆಯುತ್ತಿದ್ದ ಆರ್‌ಪಿಎಫ್ ಅಧಿಕಾರಿಯನ್ನು ಸಿಬಿಐ ಬಂಧಿಸಿದೆ. ಪ್ರತಿ ತಿಂಗಳು 40 ಸಾವಿರ ರೂ. ಲಂಚ ನೀಡುವಂತೆ ಅಧಿಕಾರಿ ಕಿರುಕುಳ ನೀಡುತ್ತಿದ್ದ ಎಂಬ ಆರೋಪವಿದೆ.

ರೈಲ್ವೆ ಭದ್ರತಾ ದಳದ ಅಧಿಕಾರಿ ಗುರುಸ್ವಾಮಿ ಸಿಬಿಐ ಬಲೆಗೆ ಬಿದ್ದವರು. ರೈಲ್ವೆ ನಿಲ್ದಾಣದ ಕಚೇರಿಯಲ್ಲಿ ಟೀ ವ್ಯಾಪಾರಿ ಶಿವಗಂಗಮ್ಮ ಎಂಬುವವರಿಂದ ಲಂಚ ಸ್ವೀಕಾರ ಮಾಡುವಾಗ ಬುಧವಾರ ಸಿಬಿಐ ಬಂಧಿಸಿದೆ.

ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ಟೀ ಮಾರುವ ಗುತ್ತಿಗೆಯನ್ನು ಶಿವಗಂಗಮ್ಮ ಪಡೆದಿದ್ದಾರೆ. ನಿಯಮ ಉಲ್ಲಂಘನೆ ಮಾಡಿದ್ದೀರಿ ಎಂದು ಗುರುಸ್ವಾಮಿ ಆರೋಪ ಮಾಡುತ್ತಿದ್ದು, ಪ್ರತಿ ತಿಂಗಳು ಲಂಚ ನೀಡುವಂತೆ ಪೀಡಿಸುತ್ತಿದ್ದ.

CBI Arrested Railway Protection Force Officer

ಪ್ರತಿ ತಿಂಗಳು 40 ಸಾವಿರ ರೂ. ಲಂಚ ನೀಡಬೇಕು ಎಂದು ದೂರವಾಣಿ ಕರೆ ಮಾಡಿ ಗುರುಸ್ವಾಮಿ ಬೇಡಿಕೆ ಇಟ್ಟಿದ್ದ. ಈ ಕರೆಯನ್ನು ರೆಕಾರ್ಡ್ ಮಾಡಿಕೊಳ್ಳಲಾಗಿತ್ತು. ಶಿವಗಂಗಮ್ಮ ಸಹೋದರ ಈ ಕುರಿತು ಗುರುಸ್ವಾಮಿ ವಿರುದ್ಧ ದೂರು ನೀಡಿದ್ದರು.

ಬುಧವಾರ ಸಂಜೆ ಸಿಬಿಐ ಅಧಿಕಾರಿಗಳು ಲಂಚ ಸ್ವೀಕಾರ ಮಾಡುವಾಗಲೇ ದಾಳಿ ನಡೆಸಿ ಗುರುಸ್ವಾಮಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆ ಮುಂದುವರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+