ಚಿಕ್ಕಜಾಜೂರು-ಹುಬ್ಬಳ್ಳಿ ಜೋಡಿ ಮಾರ್ಗಕ್ಕೆ ಒಪ್ಪಿಗೆ
ಚಿತ್ರದುರ್ಗ, ಫೆಬ್ರವರಿ 18 : ಚಿಕ್ಕಜಾಜೂರು-ಹುಬ್ಬಳ್ಳಿ ನಡುವೆ ಜೋಡಿ ರೈಲು ಮಾರ್ಗ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸುಮಾರು 1,294 ಕೋಟಿ ರೂ.ಗಳ ಯೋಜನೆ ನಾಲ್ಕು ವರ್ಷಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟದ ಆರ್ಥಿಕ ವ್ಯವಹಾರಗಳ ಸಮಿತಿ ಸಭೆಯಲ್ಲಿ ಜೋಡಿ ರೈಲು ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 190 ಕಿ.ಮೀ.ಉದ್ದದ ಈ ಮಾರ್ಗದಲ್ಲಿ ಸದ್ಯ ಒಂದು ಮಾರ್ಗವಿದ್ದು, ಇದರ ಜೊತೆ ಮತ್ತೊಂದು ಮಾರ್ಗವನ್ನು ನಿರ್ಮಿಸಲಾಗುತ್ತದೆ. [ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಒಪ್ಪಿಗೆ ಸಿಕ್ಕಿತು]

ಜೋಡಿ ರೈಲು ಮಾರ್ಗ ಯೋಜನೆಗೆ ಸುಮಾರು 1,294 ಕೋಟಿ ರೂ.ಗಳು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಯೋಜನೆಗೆ ಬಜೆಟ್ ಹೊರಗೆ ಬೇರೆ ಮೂಲಗಳಿಂದ ಹಣ ಸಂಗ್ರಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. [ಗದಗ-ಕೂಡಗಿ-ಹುಟಗಿ ಜೋಡಿ ಮಾರ್ಗಕ್ಕೆ ಒಪ್ಪಿಗೆ]
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿರುವ ಚಿಕ್ಕಜಾಜೂರಿನಿಂದ ದಾವಣಗೆರೆ, ಹರಿಹರ, ಹಾವೇರಿ ಮೂಲಕ ಜೋಡಿ ಮಾರ್ಗ ಹುಬ್ಬಳ್ಳಿ ತಲುಪಲಿದೆ. 4 ವರ್ಷಗಳಲ್ಲಿ ಈ ಜೋಡಿ ಮಾರ್ಗ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. [ಹಾವೇರಿ-ಶಿರಸಿ ರೈಲು ಮಾರ್ಗಕ್ಕೆ ಒಪ್ಪಿಗೆ ಸಿಗಲಿದೆಯೇ?]
ಈ ಮಾರ್ಗದಲ್ಲಿ ಈಗಾಗಲೇ ಬೆಂಗಳೂರು-ತುಮಕೂರು, ಅರಸೀಕೆರೆ-ಚಿಕ್ಕಜಾಜೂರು ನಡುವೆ ಜೋಡಿ ಮಾರ್ಗಗಳಿವೆ. ಹುಬ್ಬಳ್ಳಿ-ಲೋಂಡಾ-ವಾಸ್ಕೊ ಮಧ್ಯದ 2ನೇ ಮಾರ್ಗ ಕಾಮಗಾರಿ ಪ್ರಗತಿಯಲ್ಲಿದೆ. ಎಲ್ಲವೂ ಪೂರ್ಣಗೊಂಡರೆ ಮಧ್ಯ ಕರ್ನಾಟಕ, ಮಂಗಳೂರು ಬಂದರಿಗೂ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ.
ಅಭಿನಂದನೆ ಸಲ್ಲಿಸಿದ ಜೋಶಿ : ಚಿಕ್ಕಜಾಜೂರು-ಹುಬ್ಬಳ್ಳಿ ನಡುವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಯೋಜನೆ ನೈಋತ್ಯ ರೈಲ್ವೆಯಲ್ಲಿನ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಜೋಶಿ ಹೇಳಿದ್ದಾರೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications