ಚಳ್ಳಕೆರೆ ತಹಸೀಲ್ದಾರ್ ಗೆ ನಗರಸಭಾ ಸದಸ್ಯನಿಂದ ಬೆದರಿಕೆ ಕರೆ
ಚಿತ್ರದುರ್ಗ, ಮಾರ್ಚ್ 12: ನಗರ ಸಭಾ ಸದಸ್ಯ ಅಲ್ಲಿಯ ತಹಸೀಲ್ದಾರ್ ಗೆ ಕರೆ ಮಾಡಿ ಅವಾಚ್ಯ ಶಬ್ದದಿಂದ ನಿಂದಿಸಿ ಬೆದರಿಕೆ ಒಡ್ಡಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ.
ಚಳ್ಳಕೆರೆ ನಗರಸಭೆ ಸದಸ್ಯ ಶಿವಮೂರ್ತಿ ನನಗೆ ಕರೆ ಮಾಡಿ ಬೆದರಿಕೆ ಒಡ್ಡಿದ್ದಾರೆ, ಅಷ್ಟೇ ಅಲ್ಲದೆ ಆವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ತಹಸೀಲ್ದಾರ್ ಕಾಂತರಾರ್ ಆರೋಪಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಶಿವಮೂರ್ತಿ ಈ ಮೊದಲು ಕಾಂಗ್ರೆಸ್ ನಿಂದ ಗೆದ್ದು ಸದ್ಯ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ.

ಒಂದೂವರೆ ತಿಂಗಳಲ್ಲಿ ಚಳ್ಳಕೆರೆ ತಹಸೀಲ್ದಾರ್ ಆಗಿ ಇರುವುದಿಲ್ಲ ಎಂದು ಆವಾಜ್ ಹಾಕಿದ್ದಾರೆ. ಕಾಂಗ್ರೆಸ್ ಶಾಸಕ ರಘುಮೂರ್ತಿ ಅಣತಿಯಂತೆ ಆಡಳಿತ ಮಾಡುತ್ತಿದ್ದೀಯ, ಕಚೇರಿಗೆ ಬಂದಾಗ ಏಕವಚನದಲ್ಲಿ ಹೇಳಿ ಹೊರಗೆ ಕಳುಹಿಸುತ್ತೀಯ, ನನ್ನ ಅರೆಸ್ಟ್ ಮಾಡಿಸುವ ತಾಕತ್ತು ನಿನಗಿದೆಯಾ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಚಳ್ಳಕೆರೆ ಶಾಸಕ ರಘುಮೂರ್ತಿ, ಸಚಿವ ಹೆಚ್.ಆಂಜನೇಯ ಹೆಸರು ಪ್ರಸ್ತಾಪ ಪ್ರಸ್ತಾಪ ಮಾಡಲಾಗಿದೆ. ಶಾಸಕ, ಸಚಿವರ ಬಗ್ಗೆಯೂ ಅವಾಚ್ಯ ಶಬ್ದ ಬಳಸಿ ಶಿವಮೂರ್ತಿ ಮಾತನಾಡಿದ್ದಾರೆ. ಯಾರಿಗೂ ಹೆದರಿಕೊಂಡು ಕೆಲಸ ಮಾಡುವುದಿಲ್ಲ, ಸರಿಯಾಗಿ ಮಾತನಾಡಿ ಎಂದು ತಹಸೀಲ್ದಾರ್ ಕಾಂತರಾಜ್ ಹೇಳಿದ್ದಾರೆ. ಇಂದು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಡಿಸಿ ಕಚೇರಿಗೆ ದೂರು ಸಾಧ್ಯತೆ ಇದೆ ಎನ್ನಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications