ಪದೇ ಪದೇ ಭಾವಿ ಸಿಎಂ ಎನ್ನಬೇಡಿ: ಚಿತ್ರದುರ್ಗದಲ್ಲಿ ಯಡಿಯೂರಪ್ಪ ಮನವಿ
Recommended Video

ಚಿತ್ರದುರ್ಗ, ನವೆಂಬರ್ 9: 'ಪದೇ ಪದೇ ನನ್ನನ್ನು ಭಾವಿ ಮುಖ್ಯಮಂತ್ರಿ ಎನ್ನಬೇಡಿ. ಕಾಲ ಬಂದಾಗ ಅದೆಲ್ಲವೂ ತಾನಾಗಿಯೇ ಆಗುತ್ತದೆ' ಎಂದು ಬಿಜೆಪಿ ಶಾಸಕ ಬಿಎಸ್ ಯಡಿಯೂರಪ್ಪ ಮನವಿ ಮಾಡಿದರು.
104 ಶಾಸಕರು ಆಡಳಿತ ಪಕ್ಷದಲ್ಲಿಯೇ ಇರಬೇಕು ಎಂದೇನಿಲ್ಲ. ನಾವು ವಿರೋಧ ಪಕ್ಷದ ಸ್ಥಾನದಲ್ಲಿಯೇ ಇದ್ದರೂ ಉತ್ತಮ ಕೆಲಸ ಮಾಡಬಹುದು. ಶಾಸಕರು ಆಲೋಚಿಸಿ ಕೆಲಸ ಮಾಡಬೇಕು ಎಂದು ಪಕ್ಷದ ಶಾಸಕರಿಗೆ ಸಲಹೆ ನೀಡಿದರು.

ಕರ್ನಾಟಕದಲ್ಲಿ ಎಲ್ಲವೂ ಇದೆ. ಬಳಸಿಕೊಳ್ಳಬೇಕು. ಆದರೆ, ಅವುಗಳನ್ನು ಬಳಸಿಕೊಳ್ಳುವುದರಲ್ಲಿ ಆಡಳಿತ ಮತ್ತು ವಿರೋಧಪಕ್ಷಗಳೆಲ್ಲವೂ ವಿಫಲವಾಗಿವೆ.
ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಆವರಿಸಿದೆ. ಕೆರೆಕಟ್ಟೆಗಳನ್ನು ತುಂಬಿಸುವ ಕೆಲಸ ನಡೆಯಬೇಕು. ರೈತರಿಗೆ ನೆಮ್ಮದಿಯ ಮತ್ತು ಸ್ವಾವಲಂಬಿ ಬದುಕು ಕಟ್ಟಿಕೊಡಲು ನೆರವಾಗಬೇಕು ಎಂದು ಯಡಿಯೂರಪ್ಪ ಹೇಳಿದರು.
ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದ ಬಳಿಕ ಬಾರಿಗೆ ಬಿಎಸ್ ಯಡಿಯೂರಪ್ಪ ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ನಡೆಸಲು ಆರಂಭಿಸಿದ್ದಾರೆ.












Click it and Unblock the Notifications