ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ ಜಿಲ್ಲಾಧಿಕಾರಿ ಕಾರು ಅಪಘಾತ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಫೆಬ್ರವರಿ 18: ಕೆಎಸ್ಆರ್ಟಿಸಿ ಬಸ್ ಮತ್ತು ಚಿತ್ರದುರ್ಗ ಜಿಲ್ಲಾಧಿಕಾರಿಯಾದ ವಿನೋತ್ ಪ್ರಿಯಾ ಚಲಿಸುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ನಜ್ಜುಗುಜ್ಜಾಗಿದೆ.

ಸದ್ಯ ಯಾವುದೇ ಯಾರಿಗೂ ಯಾವದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ. ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಕಾರಿಗೆ ಅಡ್ಡಲಾಗಿ ಬಂದ ಹಸು ತಪ್ಪಿಸಲು ಹೋಗಿ ಬಸ್ ಗೆ ಡಿಕ್ಕಿಯಾಗಿದೆ.

Chitradurga DC Car Accident In Holalkere

ಹಿರಿಯೂರಿನಲ್ಲಿ ಜನಿಸಿತು ಅಪರೂಪದ ಎರಡು ತಲೆ ಕುರಿಮರಿಹಿರಿಯೂರಿನಲ್ಲಿ ಜನಿಸಿತು ಅಪರೂಪದ ಎರಡು ತಲೆ ಕುರಿಮರಿ

ಜಿಲ್ಲಾಧಿಕಾರಿಯವರ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಿತ್ರದುರ್ಗದಿಂದ ಹೊಳಲ್ಕೆರೆ ತಾಲ್ಲೂಕಿಗೆ ವೀಕ್ಷಣೆಗೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ ಚಿತ್ರದುರ್ಗ ಕಡೆಗೆ ತೆರಳುತ್ತಿದ್ದ ಬಸ್ ಗೂ ಪರಸ್ಪರ ಡಿಕ್ಕಿಯಾಗಿದೆ.

Oneindia Kannada on Twitter

ಶಿವಗಂಗಾ ಗ್ರಾಮದ ಬಳಿ ಚಿತ್ರದುರ್ಗ ಡಿಸಿ ಕಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಸಿಸಿ ದೃಷ್ಯ ಒನ್ ಇಂಡಿಯಾಗೆ ಲಭ್ಯ #Chitradurga | #Dccaraccident | #Holalkere https://t.co/RrHJ5dHJb9

ಅಪಘಾತವಾದ ನಂತರ ಬೇರೆ ಕಾರಿನಲ್ಲಿ ಮರಳಿದ ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಕೂಡಲೇ ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿ ಚಿತ್ರಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

English summary
KSRTC bus and Chitradurga District Collector Car Accident In Shivaganga village Holalkere Taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X