ಜುಲೈ 15 ರಿಂದ ವಿವಿ ಸಾಗರಕ್ಕೆ ಭದ್ರಾ ಜಲಾಶಯದಿಂದ ನೀರು, ರೈತರಲ್ಲಿ ಸಂತಸ
ಚಿತ್ರದುರ್ಗ, ಜುಲೈ 9 : ಬಯಲು ಸೀಮೆಯ ಏಕೈಕ ಜೀವನಾಡಿಯಾಗಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸಪುರ ಸಾಗರ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ಇದೆ ತಿಂಗಳ ಜುಲೈ 15 ರಿಂದ ಅಕ್ಟೋಬರ್ 15 ರವರೆಗೆ ನೀರು ಹರಿಸಲು ಸರಕಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ರೈತರಲ್ಲಿ ಹರ್ಷ ತಂದಿದೆ.
ಭದ್ರಾದಿಂದ ವಾಣಿವಿಲಾಸ ಜಲಾಶಯಕ್ಕೆ 2019-20 ನೇ ಸಾಲಿನಿಂದ ಪ್ರತಿ ವರ್ಷ ಮುಂಗಾರು ಹಂಗಾಮಿಗೆ ನೀರನ್ನು ಹರಿಸಲಾಗುತ್ತಿದ್ದು, ಈ ವರ್ಷವೂ ಸಹಾ ಮುಂಗಾರು ಹಂಗಾಮಿಗೆ 2022ರ ಜುಲೈ 15ರಿಂದ ಅಕ್ಟೋಬರ್ ರವರೆಗೆ ನೀರು ಹರಿಸಲು ಮತಿ ನೀಡುವಂತೆ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಜಲ ಸಂಪನ್ಮೂಲ ಸಚಿವರಿಗೆ ಪತ್ರ ಬರೆದಿದ್ದರು.
ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲ ಸಂಪನ್ಮೂಲ ಸಚಿವರು ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ನಾಲೆ ಹಾಗೂ ಹೆಬ್ಬೂರು ಹಳ್ಳದಿಂದ ವೇದಾವತಿ ನದಿ ಮೂಲಕ ಹಿರಿಯೂರು ವಾಣಿ ವಿಲಾಸ ಸಾಗರಕ್ಕೆ ಇದೇ ತಿಂಗಳ ಜುಲೈ 15 ರಿಂದ ಅಕ್ಟೋಬರ್ 15 ರವರೆಗೆ ನೀರು ಹರಿಸಲು ಅನುಮೋದನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅವರು ವಿಶ್ವೇಶ್ವರಯ್ಯ ಜಲ ನಿಗಮದ ನಿರ್ದೇಶಕರಿಗೆ ಆದೇಶಿಸಿದ್ದಾರೆ.

ವೇದಾವತಿ ನದಿಗೆ ಅಡ್ಡವಾಗಿ ಡ್ಯಾಂ :
ಈ ಜಲಾಶಯವು ಮೈಸೂರು ಅರಸರ ಕಾಲದಲ್ಲಿ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಹತ್ತಿರ ಮಾರಿಕಣಿವೆ ಎಂಬ ಪ್ರದೇಶದಲ್ಲಿ ವೇದಾವತಿ ನದಿಗೆ ಅಡ್ಡಲಾಗಿ ಅರಸರ ತಾಯಿ ಕೆಂಪನಂಜಮ್ಮಣ್ಣಿ ನೆನಪಿಗಾಗಿ ನಿರ್ಮಿಸಿದ್ದಾರೆ. 1897ರಲ್ಲಿ ಪ್ರಾರಂಭವಾದ ಕಾಮಗಾರಿಯನ್ನು 10 ವರ್ಷದಲ್ಲಿ ಸುಮಾರು 45 ಲಕ್ಷ ವೆಚ್ಚದಲ್ಲಿ ಮುಗಿಸಿ ಜಲಾಶಯವನ್ನು ನಿರ್ಮಿಸಲಾಯಿತು. ಜಲಾಶಯದ ಒಟ್ಟು ಎತ್ತರ 43.28 ಮೀಟರ್ (142 ಅಡಿ), ಉದ್ದ 405.50. ಮೀಟರ್ ಇದೆ. ಜಲಾಶಯ 850.30 (30 ಟಿಎಂಸಿ) ನೀರಿನ ಸಾಮರ್ಥ್ಯ ಹೊಂದಿದೆ.

ಒಟ್ಟಾರೆಯಾಗಿ ಮಳೆ ಇಲ್ಲದೆ ಬಳಲಿ ಬೆಂಡಾಗಿದ್ದ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರದಲ್ಲಿ ಪ್ರಸ್ತುತ ನೀರಿನ ಮಟ್ಟ 120 ಅಡಿಗೆ ಹೆಚ್ಚಳ ಇರುವುದರಿಂದ ಜಿಲ್ಲೆಯ ರೈತ ಸಮುದಾಯದಲ್ಲಿ ಹೊಸ ಭರವಸೆ ಮೂಡಿಸಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications