ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಓಟು ಹಾಕಿದವರ ಬಳಿಯೇ ನೀರು ಕೇಳಿ: ಚಿತ್ರದುರ್ಗ ಶಾಸಕರ ಕೋಪ

|
Google Oneindia Kannada News

ಚಿತ್ರದುರ್ಗ, ಜನವರಿ 30: 'ವಿಧಾನಸಭೆ ಚುನಾವಣೆಯಲ್ಲಿ ನೀವು ನನಗೆ ವೋಟು ಹಾಕಿಲ್ಲ. ಹೀಗಿರುವಾಗ ನಾನ್ಯಾಕೆ ನಿಮ್ಮ ಸಮಸ್ಯೆಗೆ ಸ್ಪಂದಿಸಲಿ? ನೀವು ಯಾರಿಗೆ ಮತ ಹಾಕಿದ್ದೀರೋ ಅವರನ್ನೇ ಕೇಳಿ' !

ಇದು ಚಿತ್ರದುರ್ಗ ಶಾಸಕ ಬಿ ಎಚ್ ತಿಪ್ಪಾರೆಡ್ಡಿ ತಮ್ಮ ಬಳಿ ಅಹವಾಲು ಸಲ್ಲಿಸಿದ ಮಹಿಳೆಯರ ವಿರುದ್ಧ ಹರಿಹಾಯ್ದ ಪರಿ.

ಲೋಕಸಭೆ ಚುನಾವಣೆ 2019: ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಪರಿಚಯಲೋಕಸಭೆ ಚುನಾವಣೆ 2019: ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಪರಿಚಯ

ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಜನರು ಆ ಬಗ್ಗೆ ಶಾಸಕರ ಬಳಿ ಅಹವಾಲು ತೋಡಿಕೊಂಡರೆ, ಶಾಸಕ ತಿಪ್ಪಾರೆಡ್ಡಿ ಅವರ ಮೇಲೆ ತಮಗೆ ಮತ ಹಾಕದ ಕೋಪವನ್ನು ತೀರಿಸಿಕೊಂಡರು. ಈ ಸಮಯದಲ್ಲಿ ಮಾತಿಗೆ ಮಾತು ಬೆಳೆದು ವಾಗ್ವಾದ ನಡೆಯಿತು.

chitradurga mla thippareddy water problem dispute angry on people

ಚಿತ್ರದುರ್ಗ ತಾಲ್ಲೂಕಿನ ಸೊಂಡೆಕೊಳ ಗ್ರಾಮದಲ್ಲಿ ಬೇಸಿಗೆಗೆ ಮುನ್ನವೇ ಕುಡಿಯುವ ನೀರಿನ ಕೊರತೆ ಎದುರಾಗಿದೆ. ಹನಿ ನೀರಿಗಾಗಿ ಒದ್ದಾಡುತ್ತಿರುವ ಗ್ರಾಮಸ್ಥರು ಹೈರಾಣಾಗಿದ್ದಾರೆ.

ಅಧಿಕಾರಿಗಳಿಂದ ಯಾವ ವ್ಯವಸ್ಥೆಯು ಆಗದೆ ಬೇಸರಗೊಂಡ ಜನರು ಚಿತ್ರದುರ್ಗಕ್ಕೆ ತೆರೆಳಿ ಶಾಸಕ ತಿಪ್ಪಾರೆಡ್ಡಿ ಅವರನ್ನು ಭೇಟಿ ಮಾಡಿ ಸಮಸ್ಯೆ ವಿವರಿಸಿದ್ದರು. ಊರಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಯೋಜನೆ ಮೂಲಕ ಪರಿಹಾರ ಒದಗಿಸಿ ಎಂದು ಕೋರಿಕೊಂಡರು.

ಆದರೆ, ಶಾಸಕ ತಿಪ್ಪಾರೆಡ್ಡಿ ಅವರ ಸಂಕಷ್ಟಕ್ಕೆ ಕಿವಿಗೊಡಲಿಲ್ಲ. ಬದಲಾಗಿ ತಮ್ಮನ್ನು ಭೇಟಿ ಮಾಡಲು ಬಂದ ಮಹಿಳೆಯರ ವಿರುದ್ಧವೇ ಗರಂ ಆದರು.

ಕೇಂದ್ರದಿಂದ ಕರ್ನಾಟಕಕ್ಕೆ 949 ಕೋಟಿ ರೂ. ಬರ ಪರಿಹಾರಕೇಂದ್ರದಿಂದ ಕರ್ನಾಟಕಕ್ಕೆ 949 ಕೋಟಿ ರೂ. ಬರ ಪರಿಹಾರ

ಕಳೆದ ಬಾರಿ ನಿಮ್ಮ ಸಮಸ್ಯೆಗೆ ನಾನು ಸ್ಪಂದಿಸಿದ್ದೆ, ಆದರೆ ವಿಧಾನಸಭೆ ಚುನಾವಣೆಯಲ್ಲಿ ನೀವು ನನಗೆ ವೋಟ್ ಹಾಕಿಲ್ಲ, ಹೀಗಾದರೆ ನಾನೆಲ್ಲಿ ಹೋಗಬೇಕು? ಎಂದು ಕೋಪ ಹಾಕಿದರು.

ಇಡೀ ಜಿಲ್ಲೆಯನ್ನೇ ಕಂಟ್ರೋಲ್​ನಲ್ಲಿ ಇಟ್ಕೊಂಡಿರೋ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರ ಪತಿ ಅದೇ ಊರಿನಲ್ಲಿ ಹುಟ್ಟಿದವರು. ಅವರು ನೀರು ಕೊಡೋಕೆ ಬರಲ್ಲ, ಅದೇ ಸರ್ಕಾರದಿಂದ ಅನುದಾನ‌ ಬಿಡುಗಡೆ ಆದಾಗ ಮಾತ್ರ ಬರ್ತಾರೆ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

English summary
Chitradurga MLA GH Thippareddy expressed his angry on people for not voting him, who visited and requesting solve their water problem.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X