ಚಿತ್ರದುರ್ಗ: ಕೋಟಾ ನೋಟು ದಂಧೆ ಮಾಡುತ್ತಿದ್ದ ನಗರಸಭೆ ಜೆಡಿಎಸ್ ಸದಸ್ಯನ ಬಂಧನ
ಚಿತ್ರದುರ್ಗ, ಡಿಸೆಂಬರ್ 22: ಚಿತ್ರದುರ್ಗ ನಗರಸಭೆ ಜೆಡಿಎಸ್ ಸದಸ್ಯ ಹಾಗೂ ಕೋಟಾ ನೋಟು ಆರೋಪಿಯಾಗಿರುವ ಚಂದ್ರಶೇಖರ್ ಅಲಿಯಾಸ್ ಕೋಟಾ ನೋಟು ಚಂದ್ರನನ್ನು ಚಿತ್ರದುರ್ಗ ಬಡಾವಣೆ ಪೋಲಿಸರು ಬಂಧಿಸಿದ್ದಾರೆ.
ಚಿತ್ರದುರ್ಗ ನಗರಸಭೆಯ 4ನೇ ವಾರ್ಡ್ನ ಸದಸ್ಯನಾಗಿರುವ ಚಂದ್ರಶೇಖರ್ ಅಲಿಯಾಸ್ ಕೋಟಾ ನೋಟು ಚಂದ್ರ @ಬೆಂಡೋಲೆ ಚಂದ್ರ ಎಂದೆಲ್ಲಾ ಕರೆಯುವ ಈತ ಮೊದಲಿನಿಂಲೂ ಹಣ ಡಬ್ಲಿಂಗ್, ಕೋಟಾ ನೋಟು ದಂಧೆ ಮಾಡಿಕೊಂಡು ಬರುತ್ತಿದ್ದನು ಎಂದು ಹೇಳಲಾಗುತ್ತಿದೆ.
ಚಂದ್ರಶೇಖರ್ ಕಳೆದ 10 ವರ್ಷಗಳ ಹಿಂದೆ ಪೊಲೀಸರು ದೊಡ್ಡ ಪೇಟೆಯಲ್ಲಿರುವ ಹಾಗೂ ಮಹಾವೀರ ಕಾಲೊನಿಯಲ್ಲಿರುವ ಮನೆಗಳ ಮೇಲೆ ದಾಳಿ ನಡೆ ಕೋಟಾ ನೋಟು ಹಾಗೂ ನೋಟು ಮುದ್ರಣದ ಯಂತ್ರವನ್ನು ವಶಪಡಿಸಿಕೊಂಡು ಜೈಲಿಗೆ ಕಳುಹಿಸಿದ್ದರು. ಆದರೂ ಈತ ಕೋಟಾ ನೋಟು ದಂಧೆಯನ್ನು ನಿಲ್ಲಿಸದೆ ಹಳೇ ಚಾಳಿಯನ್ನು ಮುಂದುವರೆಸಿಕೊಂಡು ಬಂದಿದ್ದನು.

ರಾಜ್ಯ ಹಾಗೂ ಹೊರ ರಾಜ್ಯಗಳ ಜನರಿಗೆ ಹಣ ಡಬ್ಲಿಂಗ್ ಮಾಡಿಕೊಡುವುದಾಗಿ ನಂಬಿಸಿ ವಂಚಿಸಿರುವ ಪ್ರಕರಣಗಳು ಈತನ ಮೇಲೆ ದಾಖಲಾಗಿವೆ. ಚಂದ್ರಶೇಖರ್ ಅನೇಕ ಪ್ರಕರಣಗಳಲ್ಲಿ ಜಾಮೀನು ಪಡೆದುಕೊಂಡು ಹೊರಗೆ ಬಂದಿದ್ದಾನೆ.
ಇದೀಗ ದೊಡ್ಡಬಳ್ಳಾಪುರದ ನಾಗರಾಜ್ ಎಂಬುವರಿಂದ ಆರು ಲಕ್ಷ ಪಡೆದು, ಆತನಿಗೆ ವಾಪಸ್ ಹದಿನೆಂಟು ಲಕ್ಷ ನಕಲಿ ನೋಟು ನೀಡಿ ವಂಚಿಸಿದ್ದಾನೆ. ಈ ಹಿನ್ನೆಲೆಯಲ್ಲಿ ನಾಗರಾಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದ ಹಿಂದೆ ಬಿದ್ದ ಪೊಲೀಸರು ಚಂದ್ರಶೇಖರ್ಗಾಗಿ ಹುಡುಕಾಟ ನಡೆಸಿದ್ದರು.
ಚಂದ್ರಶೇಖರ್ ನೆರೆಯ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದನು. ಕೊನೆಗೂ ಚಿತ್ರದುರ್ಗದ ಬಡಾವಣೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಶಂಕರಪ್ಪ ಚಂದ್ರಶೇಖರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications