Chitradurga murugha mutt: ಮುರುಘಾ ಶ್ರೀಗಳಿಗೆ ಮಠದ ಅಧಿಕಾರ ಹಸ್ತಾಂತರ
ಚಿತ್ರದುರ್ಗ, ಡಿಸೆಂಬರ್, 08: ನಗರದ ಪ್ರತಿಷ್ಠಿತ ಮುರುಘಾ ಮಠದ ಅಧಿಕಾರ ಮತ್ತೆ ಶಿವಮೂರ್ತಿ ಮುರುಘಾ ಶರಣರಿಗೆ ದೊರೆತಿದೆ. ಇಷ್ಟು ದಿನ ಚಿತ್ರದುರ್ಗ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಮಠದ ಆಡಳಿತಾಧಿಕಾರಿ ಆಗಿದ್ದರು. ನವೆಂಬರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆ ಆಗಿದ್ದ ಹಿನ್ನಲೆ ಮಠದ ಆಧಿಕಾರ ಹಿಂದಿರುಗಿಸುವಂತೆ ಮುರುಘಾಶ್ರೀಗಳು ಕೋರ್ಟ್ ಮೊರೆ ಹೋಗಿದ್ದರು. ಹಾಗಾದರೆ ಮುಂದಾಗಿದ್ದೇನು ಎನ್ನುವ ಮಾಹಿತಿ ಇಲ್ಲಿದೆ ಗಮನಿಸಿ.
ನಗರದ ಪ್ರತಿಷ್ಠಿತ ಮುರುಘಾ ಮಠದ ಆಡಳಿತಕಾರಿಯಾಗಿದ್ದ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಇದೇ ಡಿಸೆಂಬರ್ 05ರಿಂದ ಮುರುಘಾ ಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತವನ್ನು ಮುರುಘಾಮಠದ ಪೀಠಾಧಿಪತಿಗಳು ಮತ್ತು ಎಸ್.ಜೆ.ಎಂ ವಿದ್ಯಾಪೀಠದ ಮುರುಘಾ ಶ್ರೀಗಳಿಗೆ ಅಧಿಕಾರ ಹಸ್ತಾಂತರಿಸಿರುತ್ತಾರೆ ಎಂದು ಎಸ್.ಜೆ.ಎಂ ವಿದ್ಯಾಪೀಠದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕಟಣೆಯಲ್ಲಿ ಏನಿದೆ?
ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ ಪ್ರಕರಣದಲ್ಲಿ 2022ರ ಸೆಪ್ಟಂಬರ್ 1ರಂದು ಬಂಧನವಾಗಿತ್ತು. (ಇದೀಗ ನಿರೀಕ್ಷಣಾ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ). ಮಠದ ಆಡಳಿತ ದೃಷ್ಟಿಯಿಂದ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.
ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿ, 'ಮಠಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು' ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಸರ್ಕಾರದ ಆದೇಶವನ್ನು ರದ್ದುಪಡಿಸಿತ್ತು. ಮತ್ತು ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಮಠದ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಿತ್ತು.
ಪ್ರಸ್ತುತ ಮುರುಘಾಮಠದ ಆಡಳಿತಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ಮುರುಘಾಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತವನ್ನು ಮುರುಘಾಮಠದ ಪೀಠಾಧಿಪತಿಗಳು ಮತ್ತು ಎಸ್.ಎಂ ವಿದ್ಯಾಪೀಠದ ಅಧ್ಯಕ್ಷರಿಗೆ ಹಸ್ತಾಂತರಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications