Breaking: ಮಧ್ಯರಾತ್ರಿಯೇ ಮುರುಘಾ ಶ್ರೀ ನ್ಯಾಯಾಧೀಶರ ಮುಂದೆ ಹಾಜರು?
ಚಿತ್ರದುರ್ಗ, ಸೆ.2: ಪೋಕ್ಸೋ ಪ್ರಕರಣದಡಿ ಬಂಧಿನಕ್ಕೆ ಒಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವ ಸಾಧ್ಯತೆ ಇದೆ.
ಚಿತ್ರದುರ್ಗದಲ್ಲಿ ಗುರುವಾರ ರಾತ್ರಿ 10.30ರ ಸುಮಾರಿಗೆ ಬಂಧಿಸಲಾಯಿತು. ಅಲ್ಲಿಂದ ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ಬಳಿಕ ಅವರನ್ನು ಚಳ್ಳಕೆರೆಯ ಡಿವೈಎಸ್ಪಿ ಕಚೇರಿಗೆ ಕರೆತಂದು ಅಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್, ಡಿವೈಎಸ್ಪಿ ರಮೇಶ್ಕುಮಾರ್ ನೇತೃತ್ವದಲ್ಲಿಯೇ ವಿಚಾರಣೆ ನಡೆಸಲಾಯಿತು.
ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ:
ಪೊಲೀಸ್ ಅಧಿಕಾರಿಗಳಿಂದ ವಿಚಾರಣೆ ಮುಗಿಯುತ್ತಿದ್ದಂತೆ ಅವರನ್ನು ಚಳ್ಳಕರೆಯಿಂದ ಮತ್ತೆ ಚಿತ್ರದುರ್ಗಕ್ಕೆ ಕರೆತಂದು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಮುನ್ನ ಅವರನ್ನು ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಮುರುಘಾ ಶ್ರೀಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆತಂದಾಗ ಮಧ್ಯರಾತ್ರಿ 1ಗಂಟೆಯಾಗಿತ್ತು. ಅಲ್ಲಿ ಅವರಿಗೆ ಸಾಮಾನ್ಯ ತಪಾಸಣೆಗಳನ್ನು ಪ್ರಾರಂಭ ಮಾಡಲಾಯಿತು. ವೈದ್ಯರಿಂದ ಪರೀಕ್ಷಾ ವರದಿಗಳನ್ನು ಪಡೆದ ಬಳಿಕ ಸ್ವಾಮೀಜಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಚ್ಚಿನ ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications