Breaking: ಬಂಧನದ ಊಹಾಪೋಹದ ಬಗ್ಗೆ ಮುರುಘಾ ಶ್ರೀಗಳ ಸ್ಪಷ್ಟನೆ
ಚಿತ್ರದುರ್ಗ, ಆಗಸ್ಟ್ 29: ಚಿತ್ರದುರ್ಗದ ಮುರುಘಾಮಠಕ್ಕೆ ಸಂಬಂಧಿಸಿದ ಯಾವುದೇ ರೀತಿ ಗಾಳಿಸುದ್ದಿಗಳನ್ನು ನಂಬಬಾರದು ಎಂದು ಮುರುಘಾಮಠದ ಶಿವಮೂರ್ತಿ ಶರಣರು ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಚಿತ್ರದುರ್ಗ ಮಠಕ್ಕೆ ಹಿಂದುರುಗಿದ ಮುರುಘಾ ಶರಣರು ಭಕ್ತರನ್ನು ಉದ್ದೇಶಿಸಿ ಮಾತನಾಡಿದರು. ಯಾವುದೇ ಕಾರಣಕ್ಕೂ ಭಕ್ತರು ಆತಂಕಕ್ಕೆ ಒಳಗಾಬೇಡಿ. ಎದುರಾಗಿರುವ ಸಮಸ್ಯೆಯನ್ನು ಶಾಂತವಾಗಿ ಎದುರಿಸೋಣ. ಎಲ್ಲರೂ ಸೇರಿ ಎದುರಿಸೋಣ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಶ್ರೀಗಳು ತಿಳಿಸಿದರು.
ಇದೇ ವೇಳೆ ಇಂಥ ಆರೋಪಗಳು ಮತ್ತು ಘಟನೆಗಳು ನಡೆಯುತ್ತಿರುವುದು ಮೊದಲೇನಲ್ಲ. ಹಿಂದೆಯಲ್ಲಾ ಇಂಥ ಪಿತೂರಿಗಳು ಒಳಗಡೆ ನಡೆಯುತ್ತಿದ್ದು, ಈಗ ಹೊರಗೆ ನಡೆಯುತ್ತಿದೆ. ಇದಕ್ಕೆ ತಾಂತ್ವಿಕ ಅಂತ್ಯ ಕಾಣಬೇಕಾಗಿದೆ ಎಂದು ಮುರುಘಾಮಠದ ಶಿವಮೂರ್ತಿ ಶರಣರು ಹೇಳಿದ್ದಾರೆ.

ನೆಲದ ಕಾನೂನು ಗೌರವಿಸುವಂತೆ ಕರೆ:
ಈ ನೆಲದ ಕಾನೂನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಮಠಾಧೀಶರು ಹೇಳಿದರು. ನಾನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ, ಹೀಗೆ ಇರುವಾಗ ಯಾವುದೇ ಊಹಾಪೋಹಗಳಿಗೆ ಅವಕಾಶ ಇರುವುದಿಲ್ಲ. ಯಾರೊಬ್ಬರು ಕೂಡಾ ಗಾಳಿ ಸುದ್ದಿಗಳನ್ನು ನಂಬಬಾರದು ಎಂದು ಭಕ್ತರಿಗೆ ಶ್ರೀಗಳ ಕಿವಿಮಾತು ಹೇಳಿದರು.
ಮುರುಘಾಮಠವು ಎಲ್ಲಾ ಆರೋಪಗಳಿಂದ ಮತ್ತು ಸಮಸ್ಯೆಯಿಂದ ಮುಕ್ತವಾಗಿ ಹೊರ ಬರುತ್ತೇನೆ. ಎಲ್ಲರಿಗೂ ಶುಭವಾಗಲಿ. ಅಭಿಮಾನದ ಚಿಲುಮೆಯನ್ನು ಚಿಮ್ಮಿಸಿದ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶಿವಮೂರ್ತಿ ಶರಣರು ಹೇಳಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications